AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಅನಧಿಕೃತವಾಗಿ ಇ ಸಿಗರೇಟ್ ಮಾರಾಟ: ಅಂಗಡಿಗಳ ಮೇಲೆ ಸಿಸಿಬಿ ದಾಳಿ

ಬೆಂಗಳೂರು ನಗರದಲ್ಲಿ ಅನಧಿಕೃತವಾಗಿ ಇ ಸಿಗರೇಟ್ ಹಾಗೂ ಫಾರಿನ್ ಸಿಗರೇಟ್ ಮಾರಾಟ ಮಾಡುತ್ತಿದ್ದಾರೆ ಎಂಬ ಮಾಹಿತಿ ಹಿನ್ನೆಲೆ ಕಾರ್ಯಾಚರಣೆಗೆ ಇಳಿದ ಸಿಸಿಬಿ ಪೊಲೀಸರು ಹಲವು ಅಂಗಡಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಅನಧಿಕೃತವಾಗಿ ಇ ಸಿಗರೇಟ್ ಮಾರಾಟ: ಅಂಗಡಿಗಳ ಮೇಲೆ ಸಿಸಿಬಿ ದಾಳಿ
ಬೆಂಗಳೂರಿನಲ್ಲಿ ಅನಧಿಕೃತವಾಗಿ ಇ ಸಿಗರೇಟ್, ವಿದೇಶಿ ಸಿಗರೇಟ್ ಮಾರಾಟ ಹಿನ್ನೆಲೆ ಅಂಗಡಿಗಳ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು
Follow us
Rakesh Nayak Manchi
|

Updated on:Mar 21, 2023 | 9:54 PM

ಬೆಂಗಳೂರು: ನಗರದಲ್ಲಿ ಅನಧಿಕೃತವಾಗಿ ಇ ಸಿಗರೇಟ್ (E-cigarettes) ಹಾಗೂ ಫಾರಿನ್ ಸಿಗರೇಟ್ (Foreign cigarettes) ಮಾರಾಟ ಮಾಡುತ್ತಿದ್ದಾರೆ ಎಂಬ ಮಾಹಿತಿ ಹಿನ್ನೆಲೆ ಕಾರ್ಯಾಚರಣೆಗೆ ಇಳಿದ ಸಿಸಿಬಿ ಪೊಲೀಸರು (CCB Police) ಹಲವು ಅಂಗಡಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಕೋರಮಂಗಲ, ಮೈಕೋಲೇಔಟ್, ಕಬ್ಬನ್ ಪಾರ್ಕ್, ಕೆ ಎಸ್ ಲೇಔಟ್, ಪುಲಿಕೇಶಿ ನಗರ ಎಲೆಕ್ಟ್ರಾನಿಕ್ ಸಿಟಿ ಪೊಲೀsf ಠಾಣಾ ವ್ಯಾಪ್ತಿಯಲ್ಲಿನ ಹಲವು ಅಂಗಡಿಗಳ ಮೇಲೆ ಇಂದು ಬೆಳಗ್ಗೆ ಏಕಕಾಲದಲ್ಲಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ ವೇಳೆ 8.9 ಲಕ್ಷ ಮೌಲ್ಯದ 681 ಇ ಸಿಗರೇಟ್ ಹಾಗೂ 805 ಫಾರಿನ್ ಸಿಗರೇಟ್ ವಶಕ್ಕೆ ಪಡೆಯಲಾಗಿದ್ದು, ಕೋರಮಂಗಲ, ಮೈಕೋಲೇಔಟ್, ಕಬ್ಬನ್ ಪಾರ್ಕ್, ಕೆ ಎಸ್ ಲೇಔಟ್, ಪುಲಿಕೇಶಿ ನಗರ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಗಳಲ್ಲಿ ಅಂಗಡಿ ಮಾಲೀಕರ ವಿರುದ್ಧ ದಿ ಪ್ರೊಹಿಬಿಷನ್ ಆಫ್ ಎಲೆಕ್ಟ್ರಾನಿಕ್ ಸಿಗರೇಟ್ ಆ್ಯಕ್ಟ್ (THE PROHIBITION OF ELECTRONIC CIGRATE ACT) ಹಾಗೂ COTPA act ಅಡಿ ಪ್ರಕರಣ ದಾಖಲಿಸಲಾಗಿದೆ.

ದನದ ಕೊಟ್ಟಿಗೆಯಲ್ಲಿ ಅಗ್ನಿ ಅವಘಡ, ರೈತನಿಗೆ ತೀವ್ರ ಗಾಯ

ದೇವನಹಳ್ಳಿ: ಧನದ ಕೊಟ್ಟಿಗೆಯಲ್ಲಿ ಅಗ್ನಿ ಅವಘಡ ಸಂಭವಿಸಿ ಬೆಂಕಿಯ ಕೆನ್ನಾಲಿಗೆಗೆ ಎರಡು ಹಸುಗಳ ದುರ್ಮರಣ ಹೊಂದಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹೊನ್ನಾಘಟ್ಟ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮುನಿಹನುಮಯ್ಯ ಎಂಬುವವರಿಗೆ ಸೇರಿದ ಕೊಟ್ಟಿಗೆಯಲ್ಲಿ ಇಂದು ಸಂಜೆ ವೇಳೆ ಹಸುಗಳನ್ನು ಕಟ್ಟಿಹಾಕಿ ಮನೆಯೊಳಗಿದ್ದರು. ಈ ವೇಳೆ ಕೊಟ್ಟಿಗೆಗೆ ಬೆಂಕಿ ಹೊತ್ತುಕೊಂಡಿದ್ದು ಎರಡು ಹಸುಗಳು ಸಜೀವ ದಹನಗೊಂಡಿವೆ. ಕಣ್ಣಮುಂದೆ ಬೆಂಕಿಯೊಳಗೆ ಸಿಲುಕಿರುವ ಹಸುಗಳನ್ನು ರಕ್ಷಿಸಲು ಮುಂದಾದ ಮುನಿಹನುಮಯ್ಯಗೆ ತೀವ್ರ ಗಾಯಗಳಾಗಿದ್ದು, ಸ್ಥಳಿಯರು ಗಾಯಾಳು ರೈತನನ್ನ ದೊಡ್ಡಬಳ್ಳಾಪುರ ಆಸ್ವತ್ರೆಗೆ ದಾಖಲಿಸಿದ್ದಾರೆ.

ನದಿಯಲ್ಲಿ ಸ್ನಾನಕ್ಕೆ ಇಳಿದಿದ್ದ ವ್ಯಕ್ತಿ ನೀರುಪಾಲು

ಗದಗ: ತಂಗಾಭದ್ರಾ ನದಿಯಲ್ಲಿ ಸ್ನಾನಕ್ಕೆಂದು ಇಳಿದ ವ್ಯಕ್ತಿಯೊಬ್ಬರು ನೀರುಪಾಲಾದ ಘಟನೆ ಮುಂಡರಗಿ ತಾಲೂಕಿನ ಸಿಂಗಟಾಲೂರು ಗ್ರಾಮದ ದೇಗುಲ ಬಳಿ ನಡೆದಿದೆ. ಕೋಟುಮಚಗಿ ಗ್ರಾಮದ ಚಂದ್ರಶೇಖರ್ (45) ಸಾವನ್ನಪ್ಪಿದ ವ್ಯಕ್ತಿ. ಕೊರ್ಲಹಳ್ಳಿ ಗ್ರಾಮಕ್ಕೆ ಜಾತ್ರೆಗೆ ಆಗಮಿಸಿದ್ದ ಚಂದ್ರಶೇಖರ್, ಸಿಂಗಟಾಲೂರ ದೇವಸ್ಥಾನ ಬಳಿ ನದಿಯಲ್ಲಿ ಸ್ಥಾನಕ್ಕೆ ಇಳಿದಿದ್ದಾರೆ. ಈ ವೇಳೆ ನೀರಿನ ಸೆಳೆತಕ್ಕೆ ಸಿಕ್ಕಿ ಕೊಚ್ಚಿ ಹೋಗಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಸ್ಥಳೀಯರ ನೆರವಿನಿಂದ ನದಿಯಲ್ಲಿ ತೆಪ್ಪ ಹಾಕಿ ಶೋಧ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:54 pm, Tue, 21 March 23

ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್