AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕುಂಭಮೇಳ ಪ್ರವಾಸದ ಹೆಸರಲ್ಲಿ ಅಮಾಯಕರಿಗೆ ಲಕ್ಷಾಂತರ ರೂ. ವಂಚನೆ

ಬೆಂಗಳೂರಿನ ಗೋವಿಂದರಾಜನಗರ ಪೊಲೀಸರು ಕುಂಭಮೇಳ ಪ್ರವಾಸದ ಹೆಸರಿನಲ್ಲಿ 70 ಲಕ್ಷ ರೂಪಾಯಿಗಳ ವಂಚನೆ ಮಾಡಿದ ಆರೋಪಿಯನ್ನು ಬಂಧಿಸಿದ್ದಾರೆ. ರಾಘವೇಂದ್ರ ರಾವ್ ಎಂಬಾತ 100ಕ್ಕೂ ಹೆಚ್ಚು ಜನರಿಂದ ಹಣ ಪಡೆದು ವಂಚಿಸಿದ್ದಾನೆ. ಫೇಸ್‌ಬುಕ್‌ನಲ್ಲಿ ಜಾಹೀರಾತು ನೀಡಿ, ಯಾತ್ರಾರ್ಥಿಗಳನ್ನು ಆಕರ್ಷಿಸಿ ವಂಚನೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಬೆಂಗಳೂರು: ಕುಂಭಮೇಳ ಪ್ರವಾಸದ ಹೆಸರಲ್ಲಿ ಅಮಾಯಕರಿಗೆ ಲಕ್ಷಾಂತರ ರೂ. ವಂಚನೆ
ಆರೋಪಿ ರಾಘವೇಂದ್ರ ರಾವ್​
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Mar 10, 2025 | 12:30 PM

Share

ಬೆಂಗಳೂರು, ಮಾರ್ಚ್​ 10: ಕುಂಭಮೇಳ (Kumbh Mela) ಪ್ರವಾಸ ಹೆಸರಲ್ಲಿ 100ಕ್ಕೂ ಹೆಚ್ಚು ಜನರಿಂದ ಹಣ ಪಡೆದು ಲಕ್ಷಾಂತರ ರೂಪಾಯಿ ವಂಚನೆ ಮಾಡಿದ್ದ ಆರೋಪಿಯನ್ನು ಗೋವಿಂದರಾಜನಗರ ಪೊಲೀಸರು ಬಂಧಿಸಿದ್ದಾರೆ. ರಾಘವೇಂದ್ರ ರಾವ್ ಬಂಧಿತ ಆರೋಪಿ. ಪಾಂಚಜನ್ಯ ಟೂರ್ಸ್ ಆ್ಯಂಡ್​ ಟ್ರಾವೆಲ್ಸ್​ನಿಂದ ಅಯೋಧ್ಯೆ, ಕಾಶಿ, ಪ್ರಯಾಗ್​ರಾಜ್ (Prayagraj), ವಾರಣಾಸಿ ಸೇರಿಂದತೆ ವಿವಿಧ ತೀರ್ಥ ಕ್ಷೇತ್ರಗಳಿಗೆ 14 ದಿನದ ಪ್ರವಾಸಕ್ಕೆ ಕರೆದುಕೊಂಡು ಹೋಗುವುದಾಗಿ ಫೇಸ್​ಬುಕ್​ನಲ್ಲಿ ಜಾಹೀರಾತು ನೀಡಿದ್ದಾನೆ.

ಇದನ್ನು ನಂಬಿದ ಯಾತ್ರಾರ್ಥಿಗಳು ರಾಘವೇಂದ್ರ ರಾವ್​ನನ್ನು ಸಂಪರ್ಕಿಸಿದ್ದಾರೆ. ಆಗ, ಆರೋಪಿ ರಾಘವೇಂದ್ರ ರಾವ್, ಏಳು ದಿನಗಳ ಪ್ಯಾಕೇಜ್​ಗೆ ತಲಾ 49 ಸಾವಿರ ರೂ. ಪಡೆದಿದ್ದಾನೆ.​ ಹೀಗೆ, ಪ್ರವಾಸದ ಹೆಸರಲ್ಲಿ 100ಕ್ಕೂ ಹೆಚ್ಚು ಜನರಿಂದ 70 ಲಕ್ಷ ರೂ. ಪಡೆದಿದ್ದಾನೆ. ಬಳಿಕ, ರಾಘವೇಂದ್ರ ರಾವ್ ಎರಡು ರೀತಿ ವಂಚನೆ ಎಸಗಿದ್ದಾನೆ.

ಕೆಲವರಿಗೆ ಟಿಕೆಟ್ ಬುಕ್ ಮಾಡಿ, ನಂತರ ರದ್ದು ಮಾಡಿದ್ದಾನೆ. ರದ್ದು ಮಾಡಿದ ಬಳಿಕ ವಾಪಸ್​ ಆದ ಹಣವನ್ನು ತನ್ನ ಖಾತೆಗೆ ಜಮೆ ಮಾಡಿಕೊಂಡಿದ್ದಾನೆ.

ಇದನ್ನೂ ಓದಿ
Image
ವಂಚನೆ ಆರೋಪ: ನಿರ್ದೇಶಕಿ ವಿಸ್ಮಯ ಗೌಡ ವಿರುದ್ಧ ಎಫ್​ಐಆರ್
Image
ಹೈಕೋರ್ಟ್ ಆದೇಶವನ್ನೇ ನಕಲಿ ಮಾಡಿ ಲಕ್ಷಾಂತರ ರೂ. ವಂಚನೆ: ಇಬ್ಬರ ಬಂಧನ
Image
ಬೈಜುಸ್​ಗೆ ಅಮೆರಿಕನ್ ಕೋರ್ಟ್ ಕಂಟಕ; ತನಿಖೆಗೆ ಬೈಜು ಒತ್ತಾಯ
Image
2.40 ಕೋಟಿ ವಂಚನೆ ಪ್ರಕರಣ: ತಮನ್ನಾ ಭಾಟಿಯಾ, ಕಾಜಲ್​ಗೆ ಪೊಲೀಸರ ನೊಟೀಸ್

ಇನ್ನು ಕೆಲವರಿಗೆ, ಪ್ರಯಾಗ್ ರಾಜ್​ಗೆ ಯಾತ್ರಿಕರು ತಲುಪಿದ ನಂತರ ಅವರ ರಿಟರ್ನ್ ಟಿಕೆಟ್ ರದ್ದು ಮಾಡಿದ್ದಾನೆ. ವಾಪಸ್​ ಆದ ಹಣವನ್ನು ತನ್ನ ಖಾತೆಗೆ ಹಾಕಿಸಿಕೊಂಡಿದ್ದಾನೆ. ಟಿಕೆಟ್ ರದ್ದಾದ ಬಳಿಕ ರಾಘವೇಂದ್ರ ರಾವ್​ ಮೊಬೈಲ್ ಸ್ವಿಚ್​ ಆಫ್ ಮಾಡಿದ್ದಾನೆ. ಈ ಬಗ್ಗೆ ಗೋವಿಂದರಾಜನಗರ ಪೊಲೀಸ್​ ಠಾಣೆಯಲ್ಲಿ 20 ಕ್ಕೂ ಹೆಚ್ಚು ಜನರು ದೂರು‌ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ರಾಘವೇಂದ್ರ ರಾವ್​ನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಪುನೀತ್ ರಾಜ್​ಕುಮಾರ್ ಅಭಿಮಾನಿಗಳ ಪರವಾಗಿ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ

ವಂಚಿಸಿ ಪಡೆದಿದ್ದ ಹಣದಲ್ಲಿ ರಾಘವೇಂದ್ರ ರಾವ್ ಬೆಟ್ಟಿಂಗ್ ಆಡಿ ಸೋತಿದ್ದಾನೆ. ರಾಂಘವೇಂದ್ರ ರಾವ್​ ಬೆಟ್ಟಿಂಗ್ ಆ್ಯಪ್​ನಲ್ಲಿ ಹಣ ಹಾಕಿರುವುದು ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ. ಗೋವಿಂದರಾಜನಗರ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ವರದಿ: ಪ್ರದೀಪ್​ ಚಿಕ್ಕಾಟಿ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ