ವೈಯ್ಯಾಲಿಕಾವಲ್ ಮಹಾಲಕ್ಷ್ಮಿ ಭೀಕರ ಹತ್ಯೆ: ಕೊಲೆ ನಂತರ ಹಂತಕನಿಗೆ ಕಾಡಿತ್ತಾ ಪಾಪ ಪ್ರಜ್ಞೆ?

Bengaluru Mahalaxmi Murder Case: ಬೆಂಗಳೂರು ನಗರದ ವೈಯಾಲಿಕಾವಲ್‌ನಲ್ಲಿ ವಾಸವಿದ್ದ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿ, 50ಕ್ಕೂ ಹೆಚ್ಚು ತುಂಡು ಮಾಡಿ ಪ್ರೀಜರ್​ನಲ್ಲಿ ತುಂಬಲಾಗಿತ್ತು. ಮಹಾಲಕ್ಷ್ಮೀಯನ್ನು ಕೊಲೆ ಮಾಡಿದ ಬಳಿಕ ಆರೋಪಿ ಮುಕ್ತಿ ರಂಜನ್​ ರಾಯ್​ಗೆ ಪಾಪ ಪ್ರಜ್ಞೆ ಕಾಡಿತ್ತಾ ಎಂಬ ಅನುಮಾನ ಮೂಡಿದೆ.

ವೈಯ್ಯಾಲಿಕಾವಲ್ ಮಹಾಲಕ್ಷ್ಮಿ ಭೀಕರ ಹತ್ಯೆ: ಕೊಲೆ ನಂತರ ಹಂತಕನಿಗೆ ಕಾಡಿತ್ತಾ ಪಾಪ ಪ್ರಜ್ಞೆ?
ಮುಕ್ತಿ ರಂಜನ್​ ರಾಯ್​, ಮಹಾಲಕ್ಷ್ಮೀ
Follow us
| Updated By: ವಿವೇಕ ಬಿರಾದಾರ

Updated on: Sep 29, 2024 | 2:42 PM

ಬೆಂಗಳೂರು, ಸೆಪ್ಟೆಂಬರ್​ 29: ಬೆಂಗಳೂರಿನ ವೈಯ್ಯಾಲಿಕಾವಲ್ ನಿವಾಸಿ ಮಹಾಲಕ್ಷ್ಮಿಯನ್ನು ಕೊಲೆ (Bengaluru Mahalaxmi Murder Case)​ ಮಾಡಿದ್ದ ಆರೋಪಿ ಮುಕ್ತಿ ರಂಜನ್​ ರಾಯ್​ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಹಾಲಕ್ಷ್ಮಿ ಹತ್ಯೆ ನಂತರ ಮುಕ್ತಿ ರಂಜನ್ ರಾಯ್​ ಅವಳ ನೆನಪಿನಲ್ಲೇ ಆತ್ಮಹತ್ಯೆ ಮಾಡಿಕೊಂಡನು ಎಂಬ ಅನುಮಾನ ವ್ಯಕ್ತವಾಗಿದೆ. ಕೊಲೆಯಾದ ಮಹಾಲಕ್ಷ್ಮೀ ಮತ್ತು ಆರೋಪಿ ಮುಕ್ತಿ ರಂಜನ್​ ರಾಯ್​ ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.

ದೆಹಲಿಗೆ ಬಂದರೂ ನನಗೆ ಅವಳ ನೆನಪೇ ಕಾಡುತ್ತಿದ್ದೆ

ಮಹಾಲಕ್ಷ್ಮೀ ಮತ್ತು ಮುಕ್ತಿ ರಂಜನ್​ ರಾಯ್​ ಜೊತೆಗೆ ನಾಲ್ಕ ದಿನಗಳ ದೆಹಲಿ ಪ್ರವಾಸ ಮಾಡಿದ್ದನು. ಮುಕ್ತಿ ರಂಜನ್ ಕೊಲೆ ಮಾಡಿದ ನಂತರ ಪಶ್ಚಿಮ ಬಂಗಾಳ ಮಾತ್ರವಲ್ಲದೇ ದೆಹಲಿಯಲ್ಲೂ ನಾಲ್ಕು ದಿನ ತಲೆಮರೆಸಿಕೊಂಡಿದ್ದನು. ಮುಕ್ತಿ ರಂಜನ್​ ರಾಯ್ ದೆಹಲಿಯಲ್ಲಿದ್ದಾಗ​, ತಾಯಿ ಮತ್ತು ತಮ್ಮನಿಗೆ ಕರೆ ಮಾಡಿ, ಮಹಾಲಕ್ಷ್ಮಿಯನ್ನು ಕೋಪದಲ್ಲಿ ಹತ್ಯೆ ಮಾಡ್ಬಿಟ್ಟಿದ್ದೀನಿ. ದೆಹಲಿಗೆ ಬಂದರೂ ನನಗೆ ಅವಳ ನೆನಪೇ ಕಾಡುತ್ತಿದ್ದೆ ಎಂದು ಅಳಲು ತೋಡಿಕೊಂಡಿದ್ದನು.

ಸಿಮ್​ ಬದಲಾಯಿಸಿದ್ದ ಆರೋಪಿ

ಆರೋಪಿ ಮುಕ್ತಿ ರಂಜನ್​ ರಾಯ್​ ಮೊದಲು ಏರ್​ಟೆಲ್​ ಸಿಮ್ ಬಳಕೆ ಮಾಡುತ್ತಿದ್ದನು. ಮಹಾಲಕ್ಷ್ಮೀಯನ್ನು ಕೊಲೆ ಮಾಡಿ ಪಶ್ವಿಮ ಬಂಗಾಳಕ್ಕೆ ಹೋಗುತ್ತಿದ್ದಂತೆ ಹಳೆ ನಂಬರ್ ಅನ್ನು ಸ್ವಿಚ್ ಆಫ್ ಮಾಡಿದ್ದನು. ಬಳಿಕ ಆರೋಪಿ ಮುಕ್ತಿ ರಂಜನ್​ ರಾಯ್​ ಸಹೋದರನ ದಾಖಲಾತಿ ನೀಡಿ ಬಿಎಸ್​​ ಎನ್​ಎಲ್​ ಸಿಮ್ ಖರೀದಿಸಿದ್ದನು. ಬಿಎಸ್​ಎನ್​ಎಲ್​ ಸಿಮ್ ಖರೀದಿ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತಾದರೂ, ಆರೋಪಿಯ ನಿಖರವಾದ ಲೊಕೇಶನ್ ಪತ್ತೆಯಾಗ್ತಿರಲಿಲ್ಲ. ಐದಾರು ಕಿಮೀ ಆಸುಪಾಸು ಬಿಎಸ್​ಎನ್​ಎಲ್​ ಟವರ್ ಪತ್ತೆಯಾಗುತ್ತಿತ್ತು. ಇದು ಆರೋಪಿ ಪಾಲಿಗೆ ವರದಾನವಾಗಿತ್ತು.

ಇದನ್ನೂ ಓದಿ: ಬೆಂಗಳೂರು ಮಹಾಲಕ್ಷ್ಮೀ ಕೊಲೆಯಾಗಿದ್ದು ಮದುವೆ ವಿಚಾರಕ್ಕೆ?: ಕಮಿಷನರ್​ ದಯಾನಂದ್​ ಹೇಳಿದ್ದಿಷ್ಟು

ಹೊಸ ಸಿಮ್​ ಖರಿದಿಸಿದ ಬಳಿಕ, ತಾನು ಕೊಲೆ ಮಾಡಿದ ವಿಚಾರವನ್ನು ತಾಯಿ ಮತ್ತು ಸಹೋದರನ ಬಳಿ ಹೇಳಿದ್ದನು. ನಂತರ ಆರೋಪಿ ಮುಕ್ತಿ ರಂಜನ್​ ರಾಯ್​ ದೆಹಲಿಗೆ ತೆರಳಿದ್ದನು. ಒಡಿಶಾದ ಫಂಡಿ ಗ್ರಾಮದಲ್ಲೇ ಇದ್ದರೆ ಪೊಲೀಸರು ಬರುತ್ತಾರೆಂದು ಊರುಬಿಟ್ಟಿದ್ದನು. ಮಹಾಲಕ್ಷ್ಮಿಯನ್ನು ಹತ್ಯೆ ಮಾಡಿದ ವಿಚಾರ ಹೊರ ಜಗತ್ತಿಗೆ ತಿಳಿಯುವವರೆಗೂ ಆರೋಪಿ ಮುಕ್ತಿ ರಂಜನ್​ ರಾಯ್​ ಒಳ ಒಳಗೆ ಮರಗುತ್ತಿದ್ದನು.

ಸೆಪ್ಟೆಂಬರ್ 22ರ ವೇಳೆಗೆ ಆರೋಪಿ ಮುಕ್ತಿ ರಂಜನ್​ ರಾಯ್​ ತಮ್ಮನನ್ನು ಪೊಲೀಸರು ವಶಕ್ಕೆ ಪಡೆದು ಕುಟುಂಬಸ್ಥರನ್ನು ಸಂಪರ್ಕಿಸಿದ್ದರು. ಈ ವಿಚಾರವನ್ನು ಆರೋಪಿ ಮುಕ್ತಿ ರಂಜನ್​ ರಾಯ್​​ ತಾಯಿಯಿಂದ ತಿಳಿದುಕೊಂಡಿದ್ದನು. ಅಲ್ಲದೇ ಆರೋಪಿಯನ್ನು ಹುಡುಕಿಕೊಂಡು ಬೆಂಗಳೂರು ಪೊಲೀಸರು ತನ್ನೂರಿಗೆ ಬಂದಿರುವ ವಿಚಾರವನ್ನೂ ತಾಯಿಯಿಂದ ತಿಳಿದುಕೊಂಡಿದ್ದನು. ಕೊನೆಗೆ ತಾಯಿಗೆ ಮನೆಗೆ ಬರುತ್ತೇನೆ ಎಂದು ಹೇಳಿದವನು, ಆತ್ಮಹತ್ಯೆಗೆ ಶರಣಾಗಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ