AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶಿ ಉಡುಗೊರೆ ಹಗರಣ: ಫೇಸ್ ಬುಕ್ ಸ್ನೇಹಿತರಿಂದ ಬೆಂಗಳೂರಿನ ವ್ಯಕ್ತಿಗೆ 5 ಲಕ್ಷ ರೂ ವಂಚನೆ

ವಿದೇಶದಿಂದ ಉಡುಗೊರೆಗಳನ್ನು ಕಳುಹಿಸುವುದಾಗಿ ಯಾಮಾರಿಸಿ ವ್ಯಕ್ತಿಯೋರ್ವನಿಂದ ಲಕ್ಷಾಂತರ ರೂಪಾಯಿ ಪಡೆದು ವಂಚಿಸಿರುವಂತಹ ಘಟನೆ ಬೆಳಕಿಗೆ ಬಂದಿದೆ. ಸದ್ಯ ಪೀಣ್ಯ ಪೊಲೀಸ್ ಠಾಣೆಯಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆ 2000 (ಯು/ಎಸ್-66(ಸಿ), 66(ಡಿ)) ಐಪಿಸಿ 1860 (ಯು/ಎಸ್-420) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ವಿದೇಶಿ ಉಡುಗೊರೆ ಹಗರಣ: ಫೇಸ್ ಬುಕ್ ಸ್ನೇಹಿತರಿಂದ ಬೆಂಗಳೂರಿನ ವ್ಯಕ್ತಿಗೆ 5 ಲಕ್ಷ ರೂ ವಂಚನೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 10, 2023 | 6:02 PM

Share

ಬೆಂಗಳೂರು, ಆಗಸ್ಟ್​ 10: ವಿದೇಶದಿಂದ ಉಡುಗೊರೆ (foreign gift) ಗಳನ್ನು ಕಳುಹಿಸುವುದಾಗಿ ಯಾಮಾರಿಸಿ ವ್ಯಕ್ತಿಯೋರ್ವನಿಂದ 5 ಲಕ್ಷ ರೂಪಾಯಿ ಪಡೆದು ವಂಚಿಸಿರುವಂತಹ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ಪೀಣ್ಯ ನಿವಾಸಿ ಆಗಿರುವ ಪ್ಯಾಟ್ರಿಕ್ ರೋಹನ್​ ಎಂಬುವವರು ವಂಚನೆಗೊಳಗಾದ ವ್ಯಕ್ತಿ. ಫೇಸ್​ ಬುಕ್​ನಲ್ಲಿ ನಾಲ್ವರು ಅಪರಿಚಿತರ ಸ್ನೇಹ ಬೆಳೆಸಿ ಇದೀಗ ಲಕ್ಷಾಂತರ ರೂ. ಕಳೆದುಕೊಂಡಿದ್ದಾರೆ. ಈ ಸಂಬಂಧ ಪೀಣ್ಯ ಪೊಲೀಸ್ ಠಾಣೆಯಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆ 2000 (ಯು/ಎಸ್-66(ಸಿ), 66(ಡಿ)) ಐಪಿಸಿ 1860 (ಯು/ಎಸ್-420) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ರಾಯಚೂರು: ಇಬ್ಬರು ಮಕ್ಕಳ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ರೋಹನ್​ಗೆ ಫೇಸ್​ ಬುಕ್​ನಲ್ಲಿ ಮಿಸ್ ಝಾ ಎಂಬ ಅಪರಿಚಿತ ವ್ಯಕ್ತಿಯ ಗೆಳೆತನವಿತ್ತು. ಆಕೆ ಲಂಡನ್‌ನಲ್ಲಿ ಡಿಸೈನರ್ ಆಗಿ ಕೆಲಸ ಕೊಡಿಸುವುದಾಗಿ ನಂಬಿಸಿದ್ದಳು. ಇತ್ತ ರೋಹನ್​ ನಂಬುತ್ತಿದ್ದಂತೆ ಮಿಸ್ ಝಾ ತನ್ನ ಇತರೆ ಸ್ನೇಹಿತರಾದ ಪ್ರಿಯಾಂಕ್ ಸಕ್ಸೇನಾ, ಗೌತಮ್ ಸೇನ್ ಮತ್ತು ರೋಹಿತ್ ಜೈನ್​ ಎನ್ನುವವರನ್ನು ಪರಿಚಯಿಸಿದ್ದು, ನಾವು ಸ್ನೇಹಿತರೆಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಬಿಬಿಎಂಪಿ ಮಾಜಿ ಸದಸ್ಯ ದೊಡ್ಡಣ್ಣ ಪುತ್ರ ಗೌತಮ್​ ಆತ್ಮಹತ್ಯೆ: ಕಂಟ್ರಾಕ್ಟರ್ ಆಗಿದ್ದರೇ?

ಶರ್ಟ್‌, ಬೂಟ್​ ಮತ್ತು ಉಂಗುರಗಳಂತಹ ಉಡುಗೊರೆಗಳನ್ನು ಕಳುಹಿಸುತ್ತಿರುವುದಾಗಿ ಹೇಳಿದ್ದು, ಅದಕ್ಕೆ ಕಸ್ಟಮ್ಸ್‌ನಲ್ಲಿ ಪಾವತಿಸಲು ಪ್ರಿಯಾಂಕ್ ಸಕ್ಸೇನಾಗೆ ಹಣ ಕಳುಹಿಸುವಂತೆ ಮಿಸ್ ಝಾ ರೋಹನ್​ಗೆ ಹೇಳಿದ್ದಾಳೆ. ಇತ್ತ ರೋಹನ್ ಹಣವನ್ನು ವರ್ಗಾಯಿಸುತ್ತಿದ್ದಂತೆ ಆರೋಪಿಗಳು ಪ್ರತಿಕ್ರಿಯಿಸುವುದನ್ನು ನಿಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:00 pm, Thu, 10 August 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ