AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶಿ ಉಡುಗೊರೆ ಹಗರಣ: ಫೇಸ್ ಬುಕ್ ಸ್ನೇಹಿತರಿಂದ ಬೆಂಗಳೂರಿನ ವ್ಯಕ್ತಿಗೆ 5 ಲಕ್ಷ ರೂ ವಂಚನೆ

ವಿದೇಶದಿಂದ ಉಡುಗೊರೆಗಳನ್ನು ಕಳುಹಿಸುವುದಾಗಿ ಯಾಮಾರಿಸಿ ವ್ಯಕ್ತಿಯೋರ್ವನಿಂದ ಲಕ್ಷಾಂತರ ರೂಪಾಯಿ ಪಡೆದು ವಂಚಿಸಿರುವಂತಹ ಘಟನೆ ಬೆಳಕಿಗೆ ಬಂದಿದೆ. ಸದ್ಯ ಪೀಣ್ಯ ಪೊಲೀಸ್ ಠಾಣೆಯಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆ 2000 (ಯು/ಎಸ್-66(ಸಿ), 66(ಡಿ)) ಐಪಿಸಿ 1860 (ಯು/ಎಸ್-420) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ವಿದೇಶಿ ಉಡುಗೊರೆ ಹಗರಣ: ಫೇಸ್ ಬುಕ್ ಸ್ನೇಹಿತರಿಂದ ಬೆಂಗಳೂರಿನ ವ್ಯಕ್ತಿಗೆ 5 ಲಕ್ಷ ರೂ ವಂಚನೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 10, 2023 | 6:02 PM

Share

ಬೆಂಗಳೂರು, ಆಗಸ್ಟ್​ 10: ವಿದೇಶದಿಂದ ಉಡುಗೊರೆ (foreign gift) ಗಳನ್ನು ಕಳುಹಿಸುವುದಾಗಿ ಯಾಮಾರಿಸಿ ವ್ಯಕ್ತಿಯೋರ್ವನಿಂದ 5 ಲಕ್ಷ ರೂಪಾಯಿ ಪಡೆದು ವಂಚಿಸಿರುವಂತಹ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ಪೀಣ್ಯ ನಿವಾಸಿ ಆಗಿರುವ ಪ್ಯಾಟ್ರಿಕ್ ರೋಹನ್​ ಎಂಬುವವರು ವಂಚನೆಗೊಳಗಾದ ವ್ಯಕ್ತಿ. ಫೇಸ್​ ಬುಕ್​ನಲ್ಲಿ ನಾಲ್ವರು ಅಪರಿಚಿತರ ಸ್ನೇಹ ಬೆಳೆಸಿ ಇದೀಗ ಲಕ್ಷಾಂತರ ರೂ. ಕಳೆದುಕೊಂಡಿದ್ದಾರೆ. ಈ ಸಂಬಂಧ ಪೀಣ್ಯ ಪೊಲೀಸ್ ಠಾಣೆಯಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆ 2000 (ಯು/ಎಸ್-66(ಸಿ), 66(ಡಿ)) ಐಪಿಸಿ 1860 (ಯು/ಎಸ್-420) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ರಾಯಚೂರು: ಇಬ್ಬರು ಮಕ್ಕಳ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ರೋಹನ್​ಗೆ ಫೇಸ್​ ಬುಕ್​ನಲ್ಲಿ ಮಿಸ್ ಝಾ ಎಂಬ ಅಪರಿಚಿತ ವ್ಯಕ್ತಿಯ ಗೆಳೆತನವಿತ್ತು. ಆಕೆ ಲಂಡನ್‌ನಲ್ಲಿ ಡಿಸೈನರ್ ಆಗಿ ಕೆಲಸ ಕೊಡಿಸುವುದಾಗಿ ನಂಬಿಸಿದ್ದಳು. ಇತ್ತ ರೋಹನ್​ ನಂಬುತ್ತಿದ್ದಂತೆ ಮಿಸ್ ಝಾ ತನ್ನ ಇತರೆ ಸ್ನೇಹಿತರಾದ ಪ್ರಿಯಾಂಕ್ ಸಕ್ಸೇನಾ, ಗೌತಮ್ ಸೇನ್ ಮತ್ತು ರೋಹಿತ್ ಜೈನ್​ ಎನ್ನುವವರನ್ನು ಪರಿಚಯಿಸಿದ್ದು, ನಾವು ಸ್ನೇಹಿತರೆಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಬಿಬಿಎಂಪಿ ಮಾಜಿ ಸದಸ್ಯ ದೊಡ್ಡಣ್ಣ ಪುತ್ರ ಗೌತಮ್​ ಆತ್ಮಹತ್ಯೆ: ಕಂಟ್ರಾಕ್ಟರ್ ಆಗಿದ್ದರೇ?

ಶರ್ಟ್‌, ಬೂಟ್​ ಮತ್ತು ಉಂಗುರಗಳಂತಹ ಉಡುಗೊರೆಗಳನ್ನು ಕಳುಹಿಸುತ್ತಿರುವುದಾಗಿ ಹೇಳಿದ್ದು, ಅದಕ್ಕೆ ಕಸ್ಟಮ್ಸ್‌ನಲ್ಲಿ ಪಾವತಿಸಲು ಪ್ರಿಯಾಂಕ್ ಸಕ್ಸೇನಾಗೆ ಹಣ ಕಳುಹಿಸುವಂತೆ ಮಿಸ್ ಝಾ ರೋಹನ್​ಗೆ ಹೇಳಿದ್ದಾಳೆ. ಇತ್ತ ರೋಹನ್ ಹಣವನ್ನು ವರ್ಗಾಯಿಸುತ್ತಿದ್ದಂತೆ ಆರೋಪಿಗಳು ಪ್ರತಿಕ್ರಿಯಿಸುವುದನ್ನು ನಿಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:00 pm, Thu, 10 August 23

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ