AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾಸ್ ಗೀಸರ್ ಸೋರಿಕೆಯಿಂದ ಉಸಿರುಗಟ್ಟಿ ವಿದ್ಯಾರ್ಥಿನಿ ಸಾವು; ಮೊಬೈಲ್ ಚಾರ್ಜ್​ ಹಾಕುವಾಗ ಹಾವು ಕಚ್ಚಿ ವಿದ್ಯಾರ್ಥಿಗೆ ಗಾಯ

ಅಯ್ಯೋ! ಹೀಗಾಗಬಾರದಿತ್ತು ಎಂದೆನಿಸುವ ಎರಡು ಪ್ರತ್ಯೇಕ ದುರ್ಘಟನೆಗಳು ಇಲ್ಲಿವೆ.

ಗ್ಯಾಸ್ ಗೀಸರ್ ಸೋರಿಕೆಯಿಂದ ಉಸಿರುಗಟ್ಟಿ ವಿದ್ಯಾರ್ಥಿನಿ ಸಾವು; ಮೊಬೈಲ್ ಚಾರ್ಜ್​ ಹಾಕುವಾಗ ಹಾವು ಕಚ್ಚಿ ವಿದ್ಯಾರ್ಥಿಗೆ ಗಾಯ
ಹಾವಿನಿಂದ ಕಡಿತಕ್ಕೊಳಗಾದ ವಿದ್ಯಾರ್ಥಿ
TV9 Web
| Edited By: |

Updated on:Sep 06, 2021 | 7:57 PM

Share

ಬೆಂಗಳೂರು: ಗ್ಯಾಸ್ ಗೀಸರ್​ ಸೋರಿಕೆಯಾಗಿ ಉಸಿರುಗಟ್ಟಿ ಎಂಬಿಬಿಎಸ್ ವಿದ್ಯಾರ್ಥಿನಿಯೋರ್ವಳು ಸಾವನ್ನಪ್ಪಿದ ಘಟನೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್​ನಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸಂಪದ (23) ವರ್ಷದ ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿಯೇ ಮೃತಪಟ್ಟ ದುರ್ದೈವಿ. ಸೆಪ್ಟೆಂಬರ್ 4ರಂದು ಸ್ನಾನಕ್ಕೆ ತೆರಳಿದ್ದಾಗ ವಿದ್ಯಾರ್ಥಿನಿ ಕಾರ್ಬನ್ ಮಾನಾಕ್ಸೈಡ್ ಸೋರಿಕೆಯಾಗಿ ಉಸಿರುಗಟ್ಟಿ ಸಾವನ್ನಪ್ಪಿದ್ದು ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸ್ನಾನ ಮಾಡಲು ಮಧ್ಯಾಹ್ನ 12.30ಕ್ಕೆ ಬಾತ್ರೂಂಗೆ ಹೋಗಿದ್ದ ವಿದ್ಯಾರ್ಥಿನಿ 2 ಗಂಟೆಯಾದರೂ ಹೊರಬಂದಿರಲಿಲ್ಲ. ಅನುಮಾನದಿಂದ ಬಾತ್​ರೂಮ್​ ಬಾಗಿಲು ಒಡೆದು ನೋಡಿದಾಗ ಪ್ರಜ್ಞೆತಪ್ಪಿ ಬಿದ್ದಿರುವುದು ಕಂಡಿತ್ತು. ತಕ್ಷಣವೇ ವಿದ್ಯಾರ್ಥಿನಿ ಸಂಪದಾಳನ್ನು ಆಸ್ಪತ್ರೆಗೆ ಕರೆತಂದರೂ ಮಾರ್ಗಮಧ್ಯೆಯೇ ಆಕೆ ಸಾವನ್ನಪ್ಪಿದ್ದಾಳೆ. ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫೋನ್ ಚಾರ್ಜ್ ಹಾಕುವಾಗ ಹಾವು ಕಡಿದು ಗಾಯ ಕೊಪ್ಪಳ: ಫೋನ್ ಚಾರ್ಜ್ ಹಾಕುವಾಗ ಹಾವು ಕಚ್ಚಿ ವಿದ್ಯಾರ್ಥಿಯೋರ್ವ ಗಾಯಗೊಂಡ ಘಟನೆ ಕೊಪ್ಪಳ ಜಿಲ್ಲೆ ಗಂಗಾವತಿ ಕಲ್ಮಠ ಖಾಸಗಿ ITI ಕಾಲೇಜಿನಲ್ಲಿ ನಡೆದಿದೆ. ಗವಿಸ್ವಾಮಿ(18) ಹಾವು ಕಡಿತಕ್ಕೊಳಗಾದ ವಿದ್ಯಾರ್ಥಿ. ಪೋನ್ ಚಾರ್ಜ್ ಹಾಕುವಾಗ ಸ್ವಿಚ್ ಬೋರ್ಡ್ನಲ್ಲಿ ಹೊಕ್ಕಿ ಕುಳಿತಿದ್ದ ಹಾವು ವಿದ್ಯಾರ್ಥಿಯನ್ನು ಕಚ್ಚಿದೆ. ಇದನ್ನು ತಿಳಿದ ಗವಿಸ್ವಾಮಿಯ ಸ್ನೇಹಿತರು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದಾರೆ.ಸದ್ಯ ಪ್ರಾಣಾಪಾಯದಿಂದ ವಿದ್ಯಾರ್ಥಿ ಬಚಾವಾಗಿದ್ದು, ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ.

ಇದನ್ನೂ ಓದಿ: 

ತಾಲಿಬಾನ್ ಆಡಳಿತಕ್ಕೆ ವಿಶ್ವಸಂಸ್ಥೆ ಅಭಯ: ಅಫ್ಘಾನಿಸ್ತಾನದಲ್ಲಿ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಮಾರ್ಟಿನ್ ಗ್ರಿಫಿತ್ಸ್​-ಮುಲ್ಲಾ ಬಾರದಾರ್ ಭೇಟಿ 

ಹುಬ್ಬಳ್ಳಿ ಧಾರವಾಡ ಪಾಲಿಕೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಗಂಡ ಜಯ; ಪಕ್ಷೇತರ ಅಭ್ಯರ್ಥಿ ಹೆಂಡತಿಗೆ ಸೋಲು

(Bengaluru MBBS student dies by gas geyser in bathroom Koppal ITI Student snake byte on mobile charging)

Published On - 5:16 pm, Mon, 6 September 21

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ