AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ದೇವಸ್ಥಾನದ ಬಳಿ ಕಟ್ಟೆ ಮೇಲೆ ಕುಳಿತಿದ್ದ ಇಬ್ಬರಿಗೆ ಚಾಕು ಇರಿತ! ಮೂವರು ಆಸ್ಪತ್ರೆಗೆ ದಾಖಲು

ಬೆಂಗಳೂರಿನ ಮೆಜೆಸ್ಟಿಕ್​ನಲ್ಲಿರುವ ಗಣಪತಿ ದೇವಸ್ಥಾನದ ಬಳಿ ಕಟ್ಟೆ ಮೇಲೆ ಕುಳಿತ ಇಬ್ಬರ ಮೇಲೆ ವ್ಯಕ್ತಿಯೊಬ್ಬ ಚಾಕುವಿನಿಂದ ದಾಳಿ ನಡೆಸಿ ಗಾಯಗೊಳಿಸಿದ್ದು, ಬಿಡಿಸಲು ಬಂದವನ ಮೇಲೂ ಚಾಕುವಿನಿಂದ ಗಾಯಗೊಳಿಸಿದ್ದಾನೆ. ಮಾನಸಿಕ ಅಸ್ವಸ್ಥನ ಕ್ರೌರ್ಯಕ್ಕೆ ಆಸ್ಪತ್ರೆಗೆ ದಾಖಲಾದ ಮೂವರ ಪೈಕಿ ಓರ್ವ ಸಾವನ್ನಪ್ಪಿದ್ದಾನೆ.

Bengaluru: ದೇವಸ್ಥಾನದ ಬಳಿ ಕಟ್ಟೆ ಮೇಲೆ ಕುಳಿತಿದ್ದ ಇಬ್ಬರಿಗೆ ಚಾಕು ಇರಿತ! ಮೂವರು ಆಸ್ಪತ್ರೆಗೆ ದಾಖಲು
ಮೆಜೆಸ್ಟಿಕ್​ನ ದೇವಸ್ಥಾನದ ಬಳಿ ಕುಳಿತಿದ್ದ ಇಬ್ಬರಿಗೆ ಚಾಕು ಇರಿತ (ಸಾಂದರ್ಭಿಕ ಚಿತ್ರ)
Rakesh Nayak Manchi
Rakesh Nayak Manchi|

Updated on:Mar 23, 2023 | 9:03 PM

Share

ಮುಖ್ಯಾಂಶಗಳು

  • ಬೆಂಗಳೂರಿನ ಮೆಜೆಸ್ಟಿಕ್​ನ ದೇವಸ್ಥಾನದ ಬಳಿ ಕುಳಿತಿದ್ದ ಇಬ್ಬರಿಗೆ ಚಾಕು ಇರಿತ
  • ಬಿಡಿಸಲು ಬಂದ ವ್ಯಕ್ತಿ ಮೇಲೂ ಚಾಕುವಿನಿಂದ ದಾಳಿ!
  • ಮಾನಸಿಕ ಅಸ್ವಸ್ಥನ ಕ್ರೌರ್ಯಕ್ಕೆ ಆಸ್ಪತ್ರೆಗೆ ದಾಖಲಾಗಿದ್ದ ಮೂವರು ಗಾಯಾಳುಗಳ ಪೈಕಿ ಓರ್ವ ಸಾವು

ಬೆಂಗಳೂರು: ತಮ್ಮಷ್ಟಕ್ಕೆ ತಾವು ಕಟ್ಟೆ ಮೇಲೆ ಕುಳಿತಿದ್ದ ಇಬ್ಬರಿಗೆ ಚಾಕುವಿನಿಂದ ಇರಿದು (Knife stabbing) ಓರ್ವನನ್ನು ಹತ್ಯೆಗೈದ ಘಟನೆ ಮೆಜೆಸ್ಟಿಕ್​ನಲ್ಲಿರುವ ಗಣಪತಿ ದೇವಸ್ಥಾನದ ಬಳಿ ಇಂದು (ಮಾರ್ಚ್ 23) ನಡೆದಿದೆ. ದೇವಸ್ಥಾನದ ಬಳಿ ಇರುವ ಕಟ್ಟೆ ಮೇಲೆ ಇಬ್ಬರು ಸುಮ್ಮನೆ ಕುಳಿತಿದ್ದಾಗ ಮಾನಸಿಕ ಅಸ್ವಸ್ಥನಾಗಿರುವ ಗಣೇಶ ಎಂಬ ವ್ಯಕ್ತಿ ಚಾಕುವಿನಿಂದ ಇರಿದಿದ್ದಾನೆ. ಈ ವೇಳೆ ಬಿಡಿಸಲು ಬಂದ ವ್ಯಕ್ತಿ ಮೇಲೂ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಘಟನೆ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಉಪ್ಪಾರಪೇಟೆ ಪೊಲೀಸ್ ಠಾಣಾ ಪೊಲೀಸರು ಮೂವರು ಗಾಯಾಳುಗಳನ್ನು ಕೆ.ಸಿ.ಜನರಲ್ ಆಸ್ಪತ್ರೆಗೆ ದಾಖಲಿಸಿದ್ದು, ಇದೀಗ ಓರ್ವ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾನೆ. ಮಲ್ಲಿನಾಥ ಬಿರಾದಾರ್ ಮೃತಪಟ್ಟ ದುರ್ದೈವಿ.

ಸಂಜೆ 5.50 ರ ಸುಮಾರಿಗೆ ನಡೆದ ಈ ಚಾಕು ಇರಿತ ಪ್ರಕರಣದಲ್ಲಿ ಗಾಯಗೊಂಡಿದ್ದ ಮತ್ತಿಬ್ಬರ ಸ್ಥಿತಿ ಗಂಭೀರವಾಗಿದ್ದು, ಮೃತಪಟ್ಟ ವ್ಯಕ್ತಿ ಸೇರಿದಂತೆ ಉಳಿದ ಇಬ್ಬರು  ಅಡುಗೆ ಕೆಲಸ ಮಾಡುವವರು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಎಸಿಪಿ ಕೆ.ಸಿ.ಗಿರಿ ಮತ್ತು ಪಶ್ಚಿಮ ವಿಭಾಗ ಡಿಸಿಪಿ ಲಕ್ಷ್ಮಣ ನಿಂಬರಗಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಉಪ್ಪಾರಪೇಟೆ ಪೊಲೀಸರಿಂದ ಮಾಹಿತಿ ಪಡೆಯುತ್ತಿದ್ದಾರೆ.

ಇದನ್ನೂ ಓದಿ: Plane Emergency Exit: ವಿಮಾನದ ತುರ್ತು ನಿರ್ಗಮನ ಬಾಗಿಲು ತೆರೆಯಲು ಪ್ರಯತ್ನಿಸಿದ ಪ್ರಯಾಣಿಕ, ತಡೆಯಲು ಹೋದ ಸಿಬ್ಬಂದಿಗೆ ಚಾಕು ಇರಿತ

ಮತ್ತೊಬ್ಬ ಯುವಕನಿಗೆ ಚಾಕು ಇರಿತ!

ಬೆಂಗಳೂರು ನಗರದಲ್ಲಿ ಮತ್ತೊಬ್ಬ ಯುವಕನಿಗೆ ಚಾಕು ಇರಿದ ಘಟನೆ ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ತರುಣ್​ ಎಂಬಾತನ ಮೇಲೆ ದುಷ್ಕರ್ಮಿಯೊಬ್ಬ ಚಾಕುವಿನಿಂದ ಹಲ್ಲೆ ನಡೆಸಿದ್ದು, ಸ್ಥಳಕ್ಕೆ ಗೋವಿಂದರಾಜನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:15 pm, Thu, 23 March 23

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ