AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮುಖ ಜಜ್ಜಿ ಅಪರಿಚಿತ ಮಹಿಳೆಯನ್ನ ಕೊಲೆಗೈದ ದುಷ್ಕರ್ಮಿಗಳು

ಪ್ರತ್ಯೇಕ ಘಟನೆ: ಬೆಂಗಳೂರು ಉತ್ತರ ತಾಲೂಕಿನ ವಡ್ಡರಹಳ್ಳಿ (Vaddarahalli) ಗ್ರಾಮದ ಬಳಿ ಅಂದಾಜು 35 ವರ್ಷದ ಅಪರಿಚಿತ ಮಹಿಳೆಯ ಮುಖ ಜಜ್ಜಿ ಕೊಲೆಗೈದಿರುವ ಘಟನೆ ನಡೆದಿದೆ. ಇತ್ತ ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಮಿಟ್ಟಿ ಕ್ಯಾಂಪ್‌ ಗ್ರಾಮದ ಹೊಲದಲ್ಲಿ ಸುಟ್ಟ ಸ್ಥಿತಿಯಲ್ಲಿ ಯುವಕನೊಬ್ಬ ಶವವಾಗಿ ಪತ್ತೆಯಾಗಿದ್ದಾನೆ.

ಬೆಂಗಳೂರು: ಮುಖ ಜಜ್ಜಿ ಅಪರಿಚಿತ ಮಹಿಳೆಯನ್ನ ಕೊಲೆಗೈದ ದುಷ್ಕರ್ಮಿಗಳು
ವಡ್ಡರಹಳ್ಳಿಯಲ್ಲಿ ಅಪರಿಚಿತ ಮಹಿಳೆಯನ್ನ ಕೊಲೆಗೈದ ದುಷ್ಕರ್ಮಿಗಳು
ಬಿ ಮೂರ್ತಿ, ನೆಲಮಂಗಲ
| Updated By: ಕಿರಣ್ ಹನುಮಂತ್​ ಮಾದಾರ್|

Updated on:Feb 29, 2024 | 5:37 PM

Share

ಬೆಂಗಳೂರು, ಫೆ.29: ಅಪರಿಚಿತ ಮಹಿಳೆಯ ಮುಖ ಜಜ್ಜಿ ಕೊಲೆಗೈದಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ವಡ್ಡರಹಳ್ಳಿ (Vaddarahalli) ಗ್ರಾಮದ ಬಳಿ ನಡೆದಿದೆ. ನರಸಿಂಹಮೂರ್ತಿ ಎಂಬುವರ ಜಮೀನಿನಲ್ಲಿ ಅಂದಾಜು 35 ವರ್ಷದ ಮಹಿಳೆಯನ್ನ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಸ್ಥಳಕ್ಕೆ ನೆಲಮಂಗಲ ಎಎಸ್‌ಪಿ ಪುರುಷೋತ್ತಮ್ ಹಾಗೂ ಡಿವೈಎಸ್‌ಪಿ ಜಗದೀಶ್‌ ಭೇಟಿ ನೀಡಿ, ಸೋಕೋ ಟೀಮ್ ಹಾಗೂ ಡಾಗ್ ಸ್ಕೋರ್ಡ್ ತಂಡದಿಂದ ಪರಿಶೀಲನೆ ನಡೆಸಲಾಗುತ್ತಿದೆ. ಈ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸುಟ್ಟ ಸ್ಥಿತಿಯಲ್ಲಿ ಯುವಕ ಶವವಾಗಿ ಪತ್ತೆ

ರಾಯಚೂರು: ಬೆಂಕಿ ಹಚ್ಚಿ ಸುಟ್ಟ ಸ್ಥಿತಿಯಲ್ಲಿ ಯುವಕ ಶವವಾಗಿ ಪತ್ತೆಯಾದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಮಿಟ್ಟಿ ಕ್ಯಾಂಪ್‌ ಗ್ರಾಮದ ಹೊಲದಲ್ಲಿ ಪತ್ತೆಯಾಗಿದೆ. ಸುರೇಶ್ ನಾಯಕ್ (20) ಶವವಾಗಿ ಪತ್ತೆಯಾಗಿರುವ ಯುವಕ. ಮೂರು ದಿನಗಳ ಹಿಂದೆಯೇ ಮನೆಯಿಂದ ಸ್ನೇಹಿತರ ಜೊತೆ ತೆರಳಿದ್ದ ಸುರೇಶ್, ಸ್ನೇಹಿತರ ಜೊತೆ ಪಾರ್ಟಿ ಮಾಡುವುದಾಹಿ ಹೇಳಿ ಹೋಗಿದ್ದ. ಬಳಿಕ ಮನೆಗೆ ಬಾರದೆ ನಿಗೂಢವಾಗಿ ನಾಪತ್ತೆಯಾಗಿದ್ದ. ಇದೀಗ ಮೂರು ದಿನಗಳ ಬಳಿಕ ಹೊಲದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಸ್ಥಳಕ್ಕೆ ಮಾನ್ವಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ದೃಶ್ಯ ಸಿನಿಮಾ ಸ್ಟೈಲ್​ನಲ್ಲಿ ಮಹಿಳೆಯ ಬರ್ಬರ ಕೊಲೆ; ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಪ್ರಕರಣ ಭೇದಿಸಿದ್ದೇ ರೋಚಕ

ಕರಾಳಕಟ್ಟೆ ಗ್ರಾಮದ ಬಳಿ ಕಾಡಾನೆ ದಾಳಿಗೆ ಓರ್ವ ಬಲಿ

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಕರಾಳಕಟ್ಟೆ ಗ್ರಾಮದ ಬಳಿ ಕಾಡಾನೆ ದಾಳಿಗೆ ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ನಡೆದಿದೆ. ಕಾಡಾನೆ ದಾಳಿಯಲ್ಲಿ ಕರಾಳಕಟ್ಟೆ ಗ್ರಾಮದ ನಿವಾಸಿ ಸಣ್ಣಮಾದ ಕೊನೆಯುಸಿರೆಳೆದಿದ್ದಾರೆ. ಬಹಿರ್ದೆಸೆಗೆ ಹೋಗಿದ್ದ ವೇಳೆ ಕಾಡಾನೆ ದಾಳಿ ಮಾಡಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಿಳಿಗಿರಿರಂಗನ ಬೆಟ್ಟದ ಹುಲಿ ಸಂರಕ್ಷಿತ ಅರಣ್ಯ ವ್ಯಾಪ್ತಿಯಲ್ಲಿ ಕಾಡಾನೆ ದಾಳಿ ನಡೆಸಿದೆ.

ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:30 pm, Thu, 29 February 24