AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್ ಟವರ್​​ಗಳನ್ನೇ ಟಾರ್ಗೇಟ್ ಮಾಡಿ RRU ಕಾರ್ಡ್​​ಗಳ ಕಳವು; ದೂರು ನೀಡಿದ ಇಂಡಸ್ ಟವರ್ ಕಂಪನಿ

Bengaluru news: ಬೆಂಗಳೂರು ನಗರದಲ್ಲಿ ಮೊಬೈಲ್ ಟವರ್​ಗಳನ್ನೇ ಟಾರ್ಗೆಟ್ ಮಾಡಿಕೊಂಡು ಆರ್​ಆರ್​ಯು ಕಾರ್ಡ್​ಗಳನ್ನು ಕಳ್ಳತನ ಮಾಡಿದ ಘಟನೆ ಬೆಳಕಿಗೆ ಬಂದಿದೆ.

ಮೊಬೈಲ್ ಟವರ್​​ಗಳನ್ನೇ ಟಾರ್ಗೇಟ್ ಮಾಡಿ RRU ಕಾರ್ಡ್​​ಗಳ ಕಳವು; ದೂರು ನೀಡಿದ ಇಂಡಸ್ ಟವರ್ ಕಂಪನಿ
ಇಂಡಸ್ ಟವರ್ ಕಂಪನಿಗೆ ಸೇರಿದ ಮೊಬೈಲ್ ಟವರ್​ಗಳ ಆರ್​ಆರ್​ಯು ಕಳ್ಳತನಕ್ಕೆ ಹೋಗುತ್ತಿರವ ಕಳ್ಳರು
Follow us
TV9 Web
| Updated By: Rakesh Nayak Manchi

Updated on:Jan 15, 2023 | 4:31 PM

ಬೆಂಗಳೂರು: ಮೊಬೈಲ್ ಟವರ್​ಗಳನ್ನೇ (Mobile Tower) ಟಾರ್ಗೆಟ್ ಮಾಡಿಕೊಂಡು ಆರ್​ಆರ್​ಯು ಕಾರ್ಡ್​ಗಳನ್ನು (RRU Cards) ಕಳ್ಳತನ ಮಾಡಿದ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. ಟವರ್ ಬಳಿ RRU ಕಾರ್ಡ್ ಕಳವು (RRU Card Theft) ಮಾಡಲು ತೆರಳುವ ದೃಶ್ಯ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದ್ದು, ಈ ಬಗ್ಗೆ ಇಂಡಸ್ ಟವರ್ ಕಂಪೆನಿಯು (Indus Tower Company) ಕೆಂಗೇರಿ ಪೊಲೀಸ್ ಠಾಣೆಗೆ ದೂರು ನೀಡಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಸಿಸಿ ಕ್ಯಾಮಾರ ದೃಶ್ಯಾವಳಿ ಆಧರಿಸಿ ಆರೋಪಿಗಳ ಬಂಧನಕ್ಕೆ ತನಿಖೆ ಆರಂಭಿಸಿದ್ದಾರೆ.

ಕೆಂಗೇರಿ, ನಾಗರಬಾವಿ, ಚಂದ್ರಲೇಔಟ್, ಪದ್ಮನಾಭನಗರ ಸೇರಿದಂತೆ ಹಲವೆಡೆ ಕಡೆಗಳಲ್ಲಿನ ಮೊಬೈಲ್ ಟವರ್​ಗಳನ್ನು ಟಾರ್ಗೆಟ್ ಮಾಡಿಕೊಂಡ ಖದೀಮರು 10 ಲಕ್ಷಕ್ಕೂ ಹೆಚ್ಚು ಮೌಲ್ಯದ RRU (Remote Radio Unit)ಗಳನ್ನು ಕಳವು ಮಾಡಿದ್ದಾರೆ. ಆರ್​ಆರ್​ಯು ಕಾರ್ಡ್​ಗಳ ಕಳ್ಳತನಕ್ಕೆ ತೆರಳುತ್ತಿರುವ ಖದೀಮರ ಚಲನವಲನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದರ ಕಾಪಿ ಟಿವಿ9ಗೆ ಲಭ್ಯವಾಗಿದೆ.

ಇದನ್ನೂ ಓದಿ: ಪ್ರೀತಿಸಿ ಮೋಸ ಮಾಡಿದ ಬಿಜೆಪಿ ಕಾರ್ಯಕರ್ತ: ಚಿಕಿತ್ಸೆ ಪಡೆಯುವ ವೇಳೆ ಡೆತ್​ ನೋಟ್​ ಬರೆದಿಟ್ಟು ಬಾಲಕಿ ನಿಧನ

ಏನಿದು ರಿಮೋಟ್ ರೇಡಿಯೋ ಯುನಿಟ್? (Remote Radio Unit)

ಮೊಬೈಲ್ ಟವರ್​ನ ಟ್ರಾನ್ಸ್‌ಸಿವರ್ ಅನ್ನು ರಿಮೋಟ್ ರೇಡಿಯೋ ಯುನಿಟ್ (RRU) ಎಂದು ಕರೆಯಲಾಗುತ್ತದೆ. ಇದು ಮೊಬೈಲ್ ಫೋನ್‌ಗೆ ನೆಟ್‌ವರ್ಕ್ ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಸಂದೇಶಗಳು ಮತ್ತು ಕರೆಗಳನ್ನು ಕಳುಹಿಸಲು ಅಥವಾ ಸ್ವೀಕರಿಸಲು ಸಕ್ರಿಯಗೊಳಿಸುತ್ತದೆ. ಒಂದೊಮ್ಮೆ ರಿಮೋಟ್ ರೇಡಿಯೋ ಯುನಿಟ್ ಸಂಪರ್ಕ ಕಡಿತಗೊಂಡರೆ ನಿರ್ದಿಷ್ಟ ಪ್ರದೇಶದಲ್ಲಿ ಸಂವಹನಕ್ಕೆ ಅಡಚಣೆ ಉಂಟಾಗುತ್ತದೆ.

ಇದನ್ನೂ ಓದಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಹಾಕಿದವನು ಯಾರು? ಆತನ ಕ್ರೈಂ ಹಿಸ್ಟರಿ ಇಲ್ಲಿದೆ ನೋಡಿ

ಆರ್‌ಆರ್‌ಯು ಕನಿಷ್ಠ 1.75 ಲಕ್ಷ ರೂಪಾಯಿ ವೆಚ್ಚವಾಗುತ್ತದೆ ಮತ್ತು ಹೆಚ್ಚಿನ ಆವರ್ತನದ ರೇಡಿಯೊ ತರಂಗಗಳನ್ನು ಸ್ವೀಕರಿಸುವ ಮತ್ತು ಕಳುಹಿಸುವ ಅತ್ಯಾಧುನಿಕ ಸಾಧನವಾಗಿದೆ. ಅವುಗಳನ್ನು ದೂರಸಂಪರ್ಕ ವಲಯದಲ್ಲಿ ಮಾತ್ರ ಬಳಸಬಹುದಾಗಿರುತ್ತದೆ ಮತ್ತು ಬೇರೆ ಯಾವುದೇ ರೀತಿಯ ಬಳಕೆಗಳಿಗೆ ಮಾರುಕಟ್ಟೆಯಲ್ಲಿ ಮಾರಾಟ ಮಾಡಲಾಗುವುದಿಲ್ಲ. ಸದ್ಯ ಖದೀಮರು ಕದ್ದಿರುವ ಆರ್​ಆರ್​ಯುಗಳನ್ನು ಯಾವ ಉದ್ದೇಶಕ್ಕಾಗಿ ಕಳ್ಳತನ ಮಾಡಿದ್ದಾರೆ ಎಂದು ತಿಳಿದುಬಂದಿಲ್ಲ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:31 pm, Sun, 15 January 23

ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್