AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime: ರೇಪಿಸ್ಟ್​ ಎಂದು ರೇಗಿಸಿದ ಕಾರಣಕ್ಕೆ ಕೊಲೆ; ಅಣ್ಣ, ತಮ್ಮ ಸೇರಿದಂತೆ ಮೂವರು ಆರೋಪಿಗಳ ಬಂಧನ

ರವಿ ನಾಯ್ಡು ಕೊಲೆಯಾಗಲು ಕಾರಣ ಏನು ಎಂಬುದನ್ನು ಹುಡುಕಿದಾಗ ಆಘಾತಕಾರಿ ಅಂಶವೊಂದು ಬಯಲಾಗಿದ್ದು, ಆರೋಪಿಗಳ ಕಡೆಯವನನ್ನು ರೇಗಿಸಿದ್ದಕ್ಕಾಗಿ ಈ ದುಷ್ಕೃತ್ಯ ನಡೆದಿರುವುದು ತಿಳಿದುಬಂದಿದೆ. 2017ರಲ್ಲಿ ನಡೆದ ಲೈಂಗಿಕ ದೌರ್ಜನ್ಯ ಕೇಸ್​ ಒಂದರಲ್ಲಿ ಆರೋಪಿಯಾಗಿದ್ದ ಜಾರ್ಜ್ ಎಂಬಾತ ತನ್ನ ನಾಲ್ವರು ಗೆಳೆಯರ ಜತೆ ಬಂಧನಕ್ಕೊಳಗಾಗಿದ್ದ.

Crime: ರೇಪಿಸ್ಟ್​ ಎಂದು ರೇಗಿಸಿದ ಕಾರಣಕ್ಕೆ ಕೊಲೆ; ಅಣ್ಣ, ತಮ್ಮ ಸೇರಿದಂತೆ ಮೂವರು ಆರೋಪಿಗಳ ಬಂಧನ
ಜಾರ್ಜ್​, ಕಾರ್ತಿಕ್​, ಕೊಲೆಯಾದ ರವಿ ನಾಯ್ಡು
TV9 Web
| Edited By: |

Updated on: Sep 13, 2021 | 10:50 AM

Share

ಬೆಂಗಳೂರು: ಬೆಂಗಳೂರಿನ ಕೆ.ಜಿ.ಹಳ್ಳಿ ಸಂಡೇ ಮಾರ್ಕೆಟ್​ ರಸ್ತೆಯಲ್ಲಿ ಆಗಸ್ಟ್​ 31ರಂದು ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ರವಿ ನಾಯ್ಡು ಎಂಬಾತನನ್ನು ಆಗಸ್ಟ್​​ 31ರಂದು ಮಧ್ಯಾಹ್ನದ ವೇಳೆಯಲ್ಲೇ ಬರ್ಬರವಾಗಿ ಕೊಲೆ ಮಾಡಲಾಗಿತ್ತು, ದುಷ್ಕೃತ್ಯದ ವಿಚಾರವಾಗಿ ಕೆ.ಜಿ.ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಮೂವರು ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ.

ರವಿ ನಾಯ್ಡು ಕೊಲೆಯಾಗಲು ಕಾರಣ ಏನು ಎಂಬುದನ್ನು ಹುಡುಕಿದಾಗ ಆಘಾತಕಾರಿ ಅಂಶವೊಂದು ಬಯಲಾಗಿದ್ದು, ಆರೋಪಿಗಳ ಕಡೆಯವನನ್ನು ರೇಗಿಸಿದ್ದಕ್ಕಾಗಿ ಈ ದುಷ್ಕೃತ್ಯ ನಡೆದಿರುವುದು ತಿಳಿದುಬಂದಿದೆ. 2017ರಲ್ಲಿ ನಡೆದ ಲೈಂಗಿಕ ದೌರ್ಜನ್ಯ ಕೇಸ್​ ಒಂದರಲ್ಲಿ ಆರೋಪಿಯಾಗಿದ್ದ ಜಾರ್ಜ್ ಎಂಬಾತ ತನ್ನ ನಾಲ್ವರು ಗೆಳೆಯರ ಜತೆ ಬಂಧನಕ್ಕೊಳಗಾಗಿದ್ದ. ಕೆಲ ಸಮಯದ ಬಳಿಕ ಜೈಲಿನಿಂದ ಬಿಡುಗಡೆಯಾದ ನಂತರವೂ ಇದೇ ವಿಚಾರವಾಗಿ ರವಿ ರೇಗಿಸುತಿದ್ದ. ಆಗಾಗ ರೇಪಿಸ್ಟ್ ಎಂದು ಚುಡಾಯಿಸುತ್ತಿದ್ದ. ಹೀಗಾಗಿ ಈ ವಿಚಾರವನ್ನು ಜಾರ್ಜ್ ತನ್ನ ಸಹೋದರ ಕಾರ್ತಿಕ್​ಗೆ ಹೇಳಿದ್ದ. ಇದನ್ನೇ ಕಾರಣವಾಗಿಟ್ಟುಕೊಂಡು ಆರೋಪಿಗಳು ರವಿಯನ್ನು ಹತ್ಯೆಗೈದಿದ್ದಾರೆ ಎನ್ನುವುದು ಗೊತ್ತಾಗಿದೆ.

ಕಮ್ಮನಹಳ್ಳಿಯಲ್ಲಿ ನಡೆದಿದ್ದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಣಸವಾಡಿ ಪೊಲೀಸರಿಂದ 2017 ರಲ್ಲಿ ಜಾರ್ಜ್​ ಬಂಧನವಾಗಿತ್ತು. ಲೈಂಗಿಕ ದೌರ್ಜನ್ಯ ಎಸಗಿದ ಕೇಸ್ ಆದ ನಂತರ ರೌಡಿ ಪಟ್ಟಿಗೂ ಹೆಸರು ಸೇರಿತ್ತು. ಈ ವಿಚಾರದಲ್ಲಿ ಹೊರ ಬಂದ ಬಳಿಕ ರವಿ ಜಾರ್ಜ್​ನನ್ನು ರೇಪಿಸ್ಟ್​​ ಎಂದು ರೇಗಿಸಿದ್ದೇ ಕೊಲೆಗೆ ಕಾರಣವಾಗಿದೆ. ಕೆ.ಜಿ ಹಳ್ಳಿ ಸಂಡೆ ಮಾರ್ಕೆಟ್ ರಸ್ತೆಯಲ್ಲಿ ರವಿ ನಾಯ್ಡು ಹತ್ಯೆ ನಡೆದಿದ್ದು, ಜಾರ್ಜ್, ಡ್ಯಾನಿಯಲ್ ಹಾಗೂ ಕಾರ್ತಿಕ್ ಎಂಬ ಮೂವರ ಬಂಧನ ಆಗಿದೆ. ಬಂಧಿತ ಜಾರ್ಜ್ ಹಾಗೂ ಕಾರ್ತಿಕ್ ಅಣ್ಣ, ತಮ್ಮಂದಿರು ಎನ್ನುವುದೂ ತಿಳಿದುಬಂದಿದೆ.

ಇದನ್ನೂ ಓದಿ: Crime News: ಹುಡುಗಿಗೆ ಮೆಸೇಜ್ ಕಳಿಸಿದ್ದಕ್ಕೆ ಕೇರಳದ ಯುವಕನ ಕತ್ತು ಹಿಸುಕಿ ಕೊಲೆ 

ಕ್ಯಾಮ್ಸ್​ ಕಾರ್ಯದರ್ಶಿ ಶಶಿಕುಮಾರ್​ ಕೊಲೆಗೆ ಸುಪಾರಿ ನೀಡಿದ್ದ ಆರ್​ಟಿಐ ರವಿ ಬಂಧನ; ಚಾಮರಾಜನಗರ ಕಾಡಿನಲ್ಲಿ ಅಡಗಿದ್ದ ರವಿ

(Bengaluru Murder case two brothers arrested by Police)

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ