AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

77 ಕೆಜಿ ಚಿನ್ನ ಕಳವು ಕೇಸ್​: ನೇಪಾಳದಲ್ಲಿ ಇಬ್ಬರು ಅರೆಸ್ಟ್​

ಬೆಂಗಳೂರು: ಮುತ್ತೂಟ್ ಫೈನಾನ್ಸ್​ನಲ್ಲಿ 77 ಕೆಜಿ ಚಿನ್ನ ಕಳ್ಳತನ ಪ್ರಕರಣ ಸಂಬಂಧ ಆರೋಪಿಗಳಿಬ್ಬರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ನೇಪಾಳಕ್ಕೆ ತೆರಳಿದ್ದ ವಿಶೇಷ ತಂಡ ಡಿಸೆಂಬರ್ 31ರಂದು ನೇಪಾಳ ಮೂಲದ ಇಬ್ಬರು ಸೆಕ್ಯುರಿಟಿ ಗಾರ್ಡ್​ಗಳನ್ನು ಬಂಧಿಸಿದ್ದಾರೆ. ಆರೋಪಿಗಳ ಬಳಿ ಇದ್ದ ಸುಮಾರು 8 ಕೆಜಿ ಬಂಗಾರವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಮುತ್ತೂಟ್ ಫೈನಾನ್ಸ್​ನಲ್ಲಿ ಕಳ್ಳತನ ಮಾಡಲು 12 ಜನ ಪ್ಲಾನ್ ಮಾಡಿದ್ರು. ಅಲ್ಲಿ ಕೆಲಸ ಮಾಡುತ್ತಿದ್ದ ಸೆಕ್ಯುರಿಟಿ ಗಾರ್ಡ್​ಗಳೇ ಮೊದಲು ಐಡಿಯಾ ಕೊಟ್ಟಿದ್ದಾರೆ. ಅದ್ರೆ ಅದನ್ನು ಬಿಹಾರದ ಪೊಫೆಷನಲ್ […]

77 ಕೆಜಿ ಚಿನ್ನ ಕಳವು ಕೇಸ್​: ನೇಪಾಳದಲ್ಲಿ ಇಬ್ಬರು ಅರೆಸ್ಟ್​
Follow us
ಸಾಧು ಶ್ರೀನಾಥ್​
|

Updated on: Jan 01, 2020 | 10:07 AM

ಬೆಂಗಳೂರು: ಮುತ್ತೂಟ್ ಫೈನಾನ್ಸ್​ನಲ್ಲಿ 77 ಕೆಜಿ ಚಿನ್ನ ಕಳ್ಳತನ ಪ್ರಕರಣ ಸಂಬಂಧ ಆರೋಪಿಗಳಿಬ್ಬರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ನೇಪಾಳಕ್ಕೆ ತೆರಳಿದ್ದ ವಿಶೇಷ ತಂಡ ಡಿಸೆಂಬರ್ 31ರಂದು ನೇಪಾಳ ಮೂಲದ ಇಬ್ಬರು ಸೆಕ್ಯುರಿಟಿ ಗಾರ್ಡ್​ಗಳನ್ನು ಬಂಧಿಸಿದ್ದಾರೆ. ಆರೋಪಿಗಳ ಬಳಿ ಇದ್ದ ಸುಮಾರು 8 ಕೆಜಿ ಬಂಗಾರವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಮುತ್ತೂಟ್ ಫೈನಾನ್ಸ್​ನಲ್ಲಿ ಕಳ್ಳತನ ಮಾಡಲು 12 ಜನ ಪ್ಲಾನ್ ಮಾಡಿದ್ರು. ಅಲ್ಲಿ ಕೆಲಸ ಮಾಡುತ್ತಿದ್ದ ಸೆಕ್ಯುರಿಟಿ ಗಾರ್ಡ್​ಗಳೇ ಮೊದಲು ಐಡಿಯಾ ಕೊಟ್ಟಿದ್ದಾರೆ. ಅದ್ರೆ ಅದನ್ನು ಬಿಹಾರದ ಪೊಫೆಷನಲ್ ಗ್ಯಾಂಗ್ ಇಂಪ್ಲಿಮೆಂಟ್ ಮಾಡಿದೆ. ವಯಸ್ಸಾದ ವ್ಯಕ್ತಿಯೊಬ್ಬ ಬಿಹಾರದ ಗ್ಯಾಂಗ್ ಕಟ್ಟಿಕೊಂಡು ಬಂದಿದ್ದ. ಆತನನ್ನು ಗ್ಯಾಂಗ್ ಲೀಡರ್ ಎಂದೇ ಅವರು ಕರೆಯುತ್ತಿದ್ದರು.

ಡಿ.21ರಂದು ಫ್ರೇಜರ್ ಟೌನ್​ನಲ್ಲಿರುವ ಮುತ್ತೂಟ್ ಫೈನಾನ್ಸ್​ನಲ್ಲಿ ಗೋಡೆ ಕೊರೆದು ಚಿನ್ನ ಕಳ್ಳತನ ಮಾಡಿದ್ದಾರೆ. ಬಳಿಕ ತಮ್ಮ ಪಿಜಿ ರೂಮ್​ನಲ್ಲಿ ಚಿನ್ನವನ್ನ ಎಲ್ಲರೂ ಹಂಚಿಕೊಂಡಿದ್ದರು. ಇಬ್ಬರು ಸೆಕ್ಯುರಿಟಿ ಗಾರ್ಡ್​ಗೆ ಕೇವಲ 8 ಕೆಜಿ ಅಷ್ಟೇ ಚಿನ್ನವನ್ನು ಆ ಲೀಡರ್ ಕೊಟ್ಟಿದ್ದಾನೆ. ನಿಮಗೆ ಚಿನ್ನ ಸಾಗಿಸೋದು ಕಷ್ಟ ಅಗುತ್ತೆ. ದೆಹಲಿಯಲ್ಲಿ ಭೇಟಿಯಾಗೋಣ ಎಂದಿದ್ದ ಲೀಡರ್, ಸೆಕ್ಯುರಿಟಿಗಳಿಗೂ ಮೋಸ ಮಾಡಿದ್ದಾನೆ. ಸದ್ಯ ಲೀಡರ್ & ಗ್ಯಾಂಗ್ ಅನ್ನು ಪತ್ತೆಮಾಡಲು ಮತ್ತೊಂದು ವಿಶೇಷ ತಂಡ ಕಾರ್ಯಾಚರಣೆ ನಡೆಸುತ್ತಿದೆ.

ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್