AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

77 ಕೆಜಿ ಚಿನ್ನ ಕಳವು ಕೇಸ್​: ನೇಪಾಳದಲ್ಲಿ ಇಬ್ಬರು ಅರೆಸ್ಟ್​

ಬೆಂಗಳೂರು: ಮುತ್ತೂಟ್ ಫೈನಾನ್ಸ್​ನಲ್ಲಿ 77 ಕೆಜಿ ಚಿನ್ನ ಕಳ್ಳತನ ಪ್ರಕರಣ ಸಂಬಂಧ ಆರೋಪಿಗಳಿಬ್ಬರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ನೇಪಾಳಕ್ಕೆ ತೆರಳಿದ್ದ ವಿಶೇಷ ತಂಡ ಡಿಸೆಂಬರ್ 31ರಂದು ನೇಪಾಳ ಮೂಲದ ಇಬ್ಬರು ಸೆಕ್ಯುರಿಟಿ ಗಾರ್ಡ್​ಗಳನ್ನು ಬಂಧಿಸಿದ್ದಾರೆ. ಆರೋಪಿಗಳ ಬಳಿ ಇದ್ದ ಸುಮಾರು 8 ಕೆಜಿ ಬಂಗಾರವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಮುತ್ತೂಟ್ ಫೈನಾನ್ಸ್​ನಲ್ಲಿ ಕಳ್ಳತನ ಮಾಡಲು 12 ಜನ ಪ್ಲಾನ್ ಮಾಡಿದ್ರು. ಅಲ್ಲಿ ಕೆಲಸ ಮಾಡುತ್ತಿದ್ದ ಸೆಕ್ಯುರಿಟಿ ಗಾರ್ಡ್​ಗಳೇ ಮೊದಲು ಐಡಿಯಾ ಕೊಟ್ಟಿದ್ದಾರೆ. ಅದ್ರೆ ಅದನ್ನು ಬಿಹಾರದ ಪೊಫೆಷನಲ್ […]

77 ಕೆಜಿ ಚಿನ್ನ ಕಳವು ಕೇಸ್​: ನೇಪಾಳದಲ್ಲಿ ಇಬ್ಬರು ಅರೆಸ್ಟ್​
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jan 01, 2020 | 10:07 AM

Share

ಬೆಂಗಳೂರು: ಮುತ್ತೂಟ್ ಫೈನಾನ್ಸ್​ನಲ್ಲಿ 77 ಕೆಜಿ ಚಿನ್ನ ಕಳ್ಳತನ ಪ್ರಕರಣ ಸಂಬಂಧ ಆರೋಪಿಗಳಿಬ್ಬರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ನೇಪಾಳಕ್ಕೆ ತೆರಳಿದ್ದ ವಿಶೇಷ ತಂಡ ಡಿಸೆಂಬರ್ 31ರಂದು ನೇಪಾಳ ಮೂಲದ ಇಬ್ಬರು ಸೆಕ್ಯುರಿಟಿ ಗಾರ್ಡ್​ಗಳನ್ನು ಬಂಧಿಸಿದ್ದಾರೆ. ಆರೋಪಿಗಳ ಬಳಿ ಇದ್ದ ಸುಮಾರು 8 ಕೆಜಿ ಬಂಗಾರವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಮುತ್ತೂಟ್ ಫೈನಾನ್ಸ್​ನಲ್ಲಿ ಕಳ್ಳತನ ಮಾಡಲು 12 ಜನ ಪ್ಲಾನ್ ಮಾಡಿದ್ರು. ಅಲ್ಲಿ ಕೆಲಸ ಮಾಡುತ್ತಿದ್ದ ಸೆಕ್ಯುರಿಟಿ ಗಾರ್ಡ್​ಗಳೇ ಮೊದಲು ಐಡಿಯಾ ಕೊಟ್ಟಿದ್ದಾರೆ. ಅದ್ರೆ ಅದನ್ನು ಬಿಹಾರದ ಪೊಫೆಷನಲ್ ಗ್ಯಾಂಗ್ ಇಂಪ್ಲಿಮೆಂಟ್ ಮಾಡಿದೆ. ವಯಸ್ಸಾದ ವ್ಯಕ್ತಿಯೊಬ್ಬ ಬಿಹಾರದ ಗ್ಯಾಂಗ್ ಕಟ್ಟಿಕೊಂಡು ಬಂದಿದ್ದ. ಆತನನ್ನು ಗ್ಯಾಂಗ್ ಲೀಡರ್ ಎಂದೇ ಅವರು ಕರೆಯುತ್ತಿದ್ದರು.

ಡಿ.21ರಂದು ಫ್ರೇಜರ್ ಟೌನ್​ನಲ್ಲಿರುವ ಮುತ್ತೂಟ್ ಫೈನಾನ್ಸ್​ನಲ್ಲಿ ಗೋಡೆ ಕೊರೆದು ಚಿನ್ನ ಕಳ್ಳತನ ಮಾಡಿದ್ದಾರೆ. ಬಳಿಕ ತಮ್ಮ ಪಿಜಿ ರೂಮ್​ನಲ್ಲಿ ಚಿನ್ನವನ್ನ ಎಲ್ಲರೂ ಹಂಚಿಕೊಂಡಿದ್ದರು. ಇಬ್ಬರು ಸೆಕ್ಯುರಿಟಿ ಗಾರ್ಡ್​ಗೆ ಕೇವಲ 8 ಕೆಜಿ ಅಷ್ಟೇ ಚಿನ್ನವನ್ನು ಆ ಲೀಡರ್ ಕೊಟ್ಟಿದ್ದಾನೆ. ನಿಮಗೆ ಚಿನ್ನ ಸಾಗಿಸೋದು ಕಷ್ಟ ಅಗುತ್ತೆ. ದೆಹಲಿಯಲ್ಲಿ ಭೇಟಿಯಾಗೋಣ ಎಂದಿದ್ದ ಲೀಡರ್, ಸೆಕ್ಯುರಿಟಿಗಳಿಗೂ ಮೋಸ ಮಾಡಿದ್ದಾನೆ. ಸದ್ಯ ಲೀಡರ್ & ಗ್ಯಾಂಗ್ ಅನ್ನು ಪತ್ತೆಮಾಡಲು ಮತ್ತೊಂದು ವಿಶೇಷ ತಂಡ ಕಾರ್ಯಾಚರಣೆ ನಡೆಸುತ್ತಿದೆ.

Follow Us
ಕೈ ಶಾಸಕನ ಎಡವಟ್ಟು:ಆಸ್ಪತ್ರೆಯಲ್ಲಿ ಮಹಿಳಾ ಪಾತ್ರಧಾರಿಗಳ ಡ್ಯಾನ್ಸ್, ರೀಲ್ಸ್
ಕೈ ಶಾಸಕನ ಎಡವಟ್ಟು:ಆಸ್ಪತ್ರೆಯಲ್ಲಿ ಮಹಿಳಾ ಪಾತ್ರಧಾರಿಗಳ ಡ್ಯಾನ್ಸ್, ರೀಲ್ಸ್
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ