AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪರಾಧ ಸುದ್ದಿ: ಅತ್ತೆ ಮಗಳನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ

ಇಂದು ಇಳಿಸಂಜೆಯ ಹೊತ್ತಿಗೆ ಅಪರಾಧ ಜಗತ್ತಿನಲ್ಲಿ ಏನಾಗಿದೆ? ಓದಿ

ಅಪರಾಧ ಸುದ್ದಿ: ಅತ್ತೆ ಮಗಳನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Sep 14, 2021 | 11:09 PM

Share

ಯಾದಗಿರಿ: ಸ್ವಂತ ಅತ್ತೆ ಮಗಳ ಬಳಿ ಮದುವೆ ಮಾಡಿಕೊಳ್ಳುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡು ಮೋಸ ಮಾಡಿದ ಆರೋಪದಡಿ ಜಿಲ್ಲೆಯ ವಡಗೇರ ತಾಲೂಕಿನ ಗುರಸಣಗಿ ಗ್ರಾಮದ ಹನುಮಂತ ಎಂಬಾತನ ವಿರುದ್ಧ ಯಾದಗಿರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಕಳೆದ‌ ಎಂಟು ತಿಂಗಳ ಹಿಂದೆ ಅಜ್ಜಿ ತೀರಿ ಹೋಗಿದ್ದಕ್ಕೆ ಸಂತ್ರಸ್ತ ಯುವತಿ ಊರಿಗೆ ಬಂದಿದ್ದಳು. ಊರಿಗೆ ಬಂದಾಗ ಮದುವೆ ಮಾಡಿಕೊಳ್ಳುವುದಾಗಿ ಹೇಳಿ ಆರೋಪಿ ಹನುಮಂತ ಅತ್ಯಾಚಾರ ಎಸಗಿದ್ದಾನೆ. ಬಳಿಕ ಆಗಾಗ ಯುವತಿ ಇದ್ದ ಜಾಗಕ್ಕೆ ಹೋಗಿಯೂ ಆರೋಪಿ ದೈಹಿಕ ಸಂಪರ್ಕ ಬೆಳೆಸಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಕಳೆದ‌ ಎರಡು ದಿನಗಳ ಹಿಂದೆ ಕೇಸ್ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮನೆಯಲ್ಲೇ ಗೃಹಿಣಿಯರಿಂದ ವೇಶ್ಯಾವಾಟಿಕೆ ನೆಲಮಂಗಲ: ನಗರದ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಣ ಸಂಪಾದನೆಯ ಆಸೆ ಹುಟ್ಟಿಸಿ ಗೃಹಿಣಿಯರಿಂದ ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಹೆಸರಘಟ್ಟ ರಸ್ತೆ ಕಿರ್ಲೋಸ್ಕರ್ ಲೇಔಟ್​ನಲ್ಲಿ ಘಟನೆ ನಡೆದಿದ್ದು, ಮನೆ ಮಾಲೀಕ ಸೋಮಶೇಖರ್ ಸೇರಿದಂತೆ ನಾಲ್ವರನ್ನು ಪೊಲೀಸರು ದಾಳಿಯ ವೇಳೆ ವಶಕ್ಕೆ ಪಡೆದುಕೊಂಡಿದ್ದಾರೆ. ಜತೆಗೆ ಓರ್ವ ಗೃಹಿಣಿಯನ್ನು ರಕ್ಷಿಸಿದ್ದು, 5 ಸಾವಿರ ನಗದು, 4 ಮೊಬೈಲ್ ವಶಕ್ಕೆ ಪಡೆದುಕೊಂಡಿದ್ದಾರೆ.

ಕೋಲಾರ: ದೆಹಲಿ ಪೊಲೀಸರಿಂದ ವ್ಯಕ್ತಿ ವಶಕ್ಕೆ ದೆಹಲಿಯಲ್ಲಿ ನಡೆದಿದ್ದ ಅತ್ಯಾಚಾರ ಪ್ರಕರಣವೊಂದಕ್ಕೆ ಸಂಬಂಧಿಸಿ ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ ವಸೀವುಲ್ಲಾ (34) ಎಂಬ ವ್ಯಕ್ತಿಯನ್ನು ದೆಹಲಿಯ ಲಕ್ಷ್ಮೀನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಗಾರಪೇಟೆ ಪೊಲೀಸರ ಸಹಕಾರದೊಂದಿಗೆ ದೆಹಲಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದು, ಈವರೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಮಾಹಿತಿ ನೀಡಿಲ್ಲ ಎಂದು ಕೆಜಿಎಫ್ ಎಸ್ಪಿ ಇಲಕ್ಕಿಯಾ ಕರುಣಾಗರನ್ ತಿಳಿಸಿದ್ದಾರೆ.

ಇದನ್ನೂ ಓದಿ:

ಅಪರಾಧ ಸುದ್ದಿಗಳು: ಒಂಟಿ ವೃದ್ಧನ ಕೈಕಾಲು ಕಟ್ಟಿ ದರೋಡೆ ಮಾಡಿದ್ದ 6 ಮಂದಿ ಬಂಧನ

ಅಪರಾಧ ಸುದ್ದಿಗಳು: ಬೆಂಗಳೂರಿನಲ್ಲಿ ಹೆಚ್ಚಿದ ಪೆಟ್ರೋಲ್ ಕಳ್ಳರ ಹಾವಳಿ

(Bengaluru Nelamangala Prostitution found by housewife Arrest)

Published On - 7:03 pm, Tue, 14 September 21

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ