AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಹೌಸ್ ಕೀಪಿಂಗ್ ಹುಡುಗರ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯ

ಬೆಂಗಳೂರಿನಲ್ಲಿ ನಡೆದ ನೇಪಾಳ ಯುವಕನ ಕೊಲೆ ಪ್ರಕರಣ ಸಂಬಂಧ ಪೊಲೀಸರು ಐವರು ಹಂತರಕನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಾಬುಸಾಬ್ ಪಾಳ್ಯದಲ್ಲಿ ಕೊಲೆಗೈದು ಚರಂಡಿಯಲ್ಲಿ ಶವ ಬಿಸಾಕಿದ್ದರು.

ಬೆಂಗಳೂರು: ಹೌಸ್ ಕೀಪಿಂಗ್ ಹುಡುಗರ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯ
ಬೆಂಗಳೂರಿನಲ್ಲಿ ನೇಪಾಳದ ಯುವಕನ ಕೊಲೆ; ಐವರು ಹಂತಕರು ಅರೆಸ್ಟ್
TV9 Web
| Updated By: Rakesh Nayak Manchi|

Updated on:Dec 04, 2022 | 9:18 PM

Share

ಬೆಂಗಳೂರು: ಹೌಸ್ ಕೀಪಿಂಗ್ ಹುಡುಗರ ನಡುವಿನ ಜಗಳ ಓರ್ವನ ಕೊಲೆ (Murder)ಯಲ್ಲಿ ಅಂತ್ಯವಾದ ಘಟನೆ ನಗರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ನೇಪಾಳ ಮೂಲದ ಧನ್​ಸಿಂಗ್ ಧಾನ್ಯ ಎಂಬಾತ ಕೊಲೆಯಾದ ಯುವಕ. ಕಳೆದ ಐದು ದಿನಗಳ ಹಿಂದೆ ಈ ಕೊಲೆ ಮಾಡಿ ಶವವನ್ನು ಬಾಬು ಸಾಬ್ ಪಾಳ್ಯದಲ್ಲಿನ ಮೋರಿಗೆ ಎಸೆದು ಆರೋಪಿಗಳು ಪರಾರಿಯಾಗಿದ್ದರು. ಚರಂಡಿ ಬಳಿ ವಾಸನೆ ಬರುತ್ತಿದ್ದ ಹಿನ್ನಲೆ ಪರಿಶೀಲನೆ ನಡೆಸಿದಾಗ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಒಟ್ಟು ಐವರು ಹಂತಕರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಆರೋಪಿಗಳೆಲ್ಲರೂ ನೇಪಾಳದವರೇ ಆಗಿದ್ದಾರೆ.

ನಗರದ ಎಸ್.ಎಸ್ ಪಿಜಿಯೊಂದರಲ್ಲಿ ಧನ್​ ಸಿಂಗ್ ಧಾನ್ಯ ಸೇರಿದಂತೆ ಎಲ್ಲಾ ಆರೋಪಿಗಳು ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದರು. ಆದರೆ ಧನ್ ಸಿಂಗ್ ಇತರೆ ಆರೋಪಿಗಳ ಜೊತೆ ಗಲಾಟೆ ಮಾಡುತ್ತಿದ್ದನು. ಕುಡಿದ ನಂತರ ಇವರ ನಡುವೆ ಸಾಕಷ್ಟು ಬಾರಿ ಗಲಾಟೆ ನಡೆದಿದೆ. ಇದೇ ಕಾರಣಕ್ಕೆ ಆರೋಪಿಗಳು ಧನ್ ಸಿಂಗ್​ನನ್ನು ಮುಗಿಸಲು ಸ್ಕೆಚ್ ಹಾಕಿರುವುದು ತಿಳಿದುಬಂದಿದೆ.

ಇದನ್ನೂ ಓದಿ: ಬುದ್ಧಿ ಹೇಳಿದ ಹಿರಿಯರಿಗೆ ಚಾಕುವಿನಿಂದ ಮನಸ್ಸೊ ಇಚ್ಛೆ ಇರಿದ ಯುವಕರು; ಆಸ್ಪತ್ರೆಯಲ್ಲಿ ಗಾಯಾಳುಗಳ ನರಳಾಟ

ಕೊಲೆ ನಡೆಯುವ ನಾಲ್ಕು ದಿನಗಳ ಹಿಂದೆ ಸಹ ಧನ್ ಸಿಂಗ್ ಮತ್ತು ಇತರರ ನಡುವೆ ಗಲಾಟೆ ಆಗಿದೆ. ಹೀಗಾಗಿ ಪಕ್ಕಾ ಕೊಲೆಗೆ ಸಂಚು ರೂಪಿಸಿದ ಆರೋಪಿಗಳು ಸಿಗರೇಟ್ ನೀಡುವುದಾಗಿ ಕರೆಸಿಕೊಂಡು ಬೆಲ್ಟ್​ನಿಂದ ಕುತ್ತಿಗೆಗೆ ಸುತ್ತಿ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ಬಳಿಕ ಮೃತದೇಹವನ್ನು ಚರಂಡಿಗೆ ಎಸೆದು ಪರಾರಿಯಾಗಿದ್ದರು. ಪ್ರಕರಣ ಸಂಬಂಧ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:18 pm, Sun, 4 December 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ