AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲಸಕ್ಕಾಗಿ ಉತ್ತರಪ್ರದೇಶದಿಂದ ಬೆಂಗಳೂರಿಗೆ ಬಂದಿದ್ದ ಯುವಕ ಲಿಫ್ಟ್​ನಲ್ಲಿ ಸಿಲುಕಿ ಸಾವು

ಬೆಂಗಳೂರಿನ ಜೆ.ಸಿ.ರಸ್ತೆ ಭರತ್ ಸರ್ಕಲ್​ ಬಳಿಯ ಕಮರ್ಷಿಯಲ್​ ಬಿಲ್ಡಿಂಗ್​ನ ಲಿಫ್ಟ್​​ನಲ್ಲಿ ಸಿಲುಕಿ ಉತ್ತರಪ್ರದೇಶ ಮೂಲದ ವಿಕಾಸ್​(26) ಎಂಬ ಯುವಕ ಪ್ರಾಣ ಕಳೆದುಕೊಂಡಿದ್ದಾನೆ.

ಕೆಲಸಕ್ಕಾಗಿ ಉತ್ತರಪ್ರದೇಶದಿಂದ ಬೆಂಗಳೂರಿಗೆ ಬಂದಿದ್ದ ಯುವಕ ಲಿಫ್ಟ್​ನಲ್ಲಿ ಸಿಲುಕಿ ಸಾವು
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on:Apr 27, 2023 | 8:00 AM

Share

ಬೆಂಗಳೂರು: ಸಾಮಾನ್ಯವಾಗಿ ಇತ್ತೀಚೆಗೆ ಬಹುತೇಕ ಕಟ್ಟಡಗಳಲ್ಲಿ ಲಿಫ್ಟ್ ಅಳವಡಿಸಲಾಗಿರುತ್ತೆ. ಬಹುತೇಕರು ಮೆಟ್ಟಿಲುಗಳಿದ್ದರೂ ಲಿಫ್ಟನ್ನೇ ಬಳಸುತ್ತಾರೆ. ಆದ್ರೆ ಅದೇ ಲಿಫ್ಟ್ ಯುವಕನನ್ನು ಬಲಿ ಪಡೆದಿದೆ. ಬೆಂಗಳೂರಿನ ಜೆ.ಸಿ.ರಸ್ತೆ ಭರತ್ ಸರ್ಕಲ್​ ಬಳಿಯ ಕಮರ್ಷಿಯಲ್​ ಬಿಲ್ಡಿಂಗ್​ನ ಲಿಫ್ಟ್​​ನಲ್ಲಿ ಸಿಲುಕಿ ಉತ್ತರಪ್ರದೇಶ ಮೂಲದ ವಿಕಾಸ್​(26) ಎಂಬ ಯುವಕ ಪ್ರಾಣ ಕಳೆದುಕೊಂಡಿದ್ದಾನೆ.

ಸಂಜಯ್ ಆಟೋಮೊಬೈಲ್​​ ಶಾಪ್​ನಲ್ಲಿ ಕೆಲಸ ಮಾಡ್ತಿದ್ದ ವಿಕಾಸ್​​, ಆರು ತಿಂಗಳ ಹಿಂದೆ ಬೆಂಗಳೂರಿಗೆ ಕೆಲಸಕ್ಕೆ ಬಂದಿದ್ದ. ಸಂಜೆ ಏಳು ಗಂಟೆ ಸುಮಾರಿಗೆ ಕಮರ್ಷಿಯಲ್​ ಬಿಲ್ಡಿಂಗ್​ನ ಲಿಫ್ಟ್​​ನಲ್ಲಿ ಸಿಲುಕಿ ಮೃತಪಟ್ಟಿದ್ದಾನೆ. ಘಟನೆ ಸಂಬಂಧ ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಪೊಲೀಸರು ಮಗನ ಸಾವಿನ ವಿಚಾರ ಪೋಷಕರಿಗೆ ತಿಳಿಸಿದ್ದಾರೆ. ವಿಕಾಸ್ ಪೋಷಕರು ಬಂದ ನಂತರ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹ ಪೋಷಕರಿಗೆ ಹಸ್ತಾಂತರಿಸಲಾಗುತ್ತೆ.

ಸಿಲಿಕಾನ್ ಸಿಟಿಯಲ್ಲಿ ಪುಡಿ ರೌಡಿಗಳ ಪುಂಡಾಟ

ಏಪ್ರಿಲ್ 25 ರಂದು ತಡರಾತ್ರಿ ವ್ಯಕ್ತಿಗೆ ಚಾಕು ಇರಿದು ಕಾರು ಗ್ಲಾಸ್ ಒಡೆದು ಪುಡಿ ರೌಡಿಗಳು ಪುಂಡಾಟ ಮೆರೆದಿದ್ದಾರೆ. ನರಸಿಂಹ @ ಕೋಸೆ ಎಂಬ ಗ್ಯಾಂಗ್ ವೆಂಕಟೇಶ್ ಎಂಬಾತನಿಗೆ ಚಾಕುವಿನಿಂದ ಇರಿದು ಅಟ್ಟಹಾಸ ಮೆರೆದಿದ್ದಾರೆ. ನಿತೀಶ್ ಎಂಬಾತನ ಕಾರಿನ ಗ್ಲಾಸ್ ಪೀಸ್ ಪೀಸ್ ಮಾಡಲಾಗಿದೆ. ಘಟನೆ ಸಂಬಂಧ ಗಿರಿನಗರ ಠಾಣೆಯಲ್ಲಿ ಐಪಿಸಿ 307,324 ಅಡಿಯಲ್ಲಿ ಎರಡು ಎಫ್ಐಆರ್ ದಾಖಲಾಗಿದೆ. ನರಸಿಂಹ, ಯೋಗೇಶ್​ನನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೆ ಮೂವರ ಪತ್ತೆಗಾಗಿ ಬಲೆ ಬೀಸಿದ್ದಾರೆ. ಬಂಧಿತ ಆರೋಪಿ ನರಸಿಂಹ ಗಿರಿನಗರ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟರ್ ಆಗಿದ್ದಾನೆ. ಏರಿಯಾದಲ್ಲಿ ಹವಾ ಇಡಲು ಕಂಡ ಕಂಡ ಕಡೆ ಅಟ್ಟಹಾಸ ಮೆರೆಯುತ್ತಾನೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 6:45 am, Thu, 27 April 23

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್