AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕದ್ದ ವಾಹನಗಳಲ್ಲೇ ಸುಲಿಗೆ ಮಾಡುತ್ತಿದ್ದ ದುಷ್ಕರ್ಮಿಗಳು: 6 ಆರೋಪಿಗಳ ಬಂಧನ

ನಗರದಲ್ಲಿ ಸುಲಿಗೆ ಮಾಡುತ್ತಿದ್ದ 6 ಆರೋಪಿಗಳನ್ನು ಅಮೃತಹಳ್ಳಿ ಪೊಲೀಸರು​ ಬಂಧಿಸಿದ್ದಾರೆ. ಬಂಧಿತರಿಂದ 17.5 ಲಕ್ಷ ಮೌಲ್ಯದ 1 ಕಾರು, 15 ಬೈಕ್, 11,750 ನಗದು ಜಪ್ತಿ ಮಾಡಲಾಗಿದೆ. ಕದ್ದ ವಾಹನಗಳಲ್ಲೇ ದುಷ್ಕರ್ಮಿಗಳು ಸುಲಿಗೆ ಮಾಡಲು ಹೋಗುತ್ತಿದ್ದರು. ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. 

ಬೆಂಗಳೂರು: ಕದ್ದ ವಾಹನಗಳಲ್ಲೇ ಸುಲಿಗೆ ಮಾಡುತ್ತಿದ್ದ ದುಷ್ಕರ್ಮಿಗಳು: 6 ಆರೋಪಿಗಳ ಬಂಧನ
ಬಂಧಿತರಿಂದ ಜಪ್ತಿ ಮಾಡಿದ ಬೈಕ್​ಗಳು
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Oct 19, 2023 | 5:13 PM

Share

ಬೆಂಗಳೂರು, ಅಕ್ಟೋಬರ್​​​​​ 19: ನಗರದಲ್ಲಿ ಸುಲಿಗೆ ಮಾಡುತ್ತಿದ್ದ 6 ಆರೋಪಿಗಳನ್ನು ಅಮೃತಹಳ್ಳಿ ಪೊಲೀಸರು​ ಬಂಧಿಸಿದ್ದಾರೆ (arrested) . ಬಂಧಿತರಿಂದ 17.5 ಲಕ್ಷ ಮೌಲ್ಯದ 1 ಕಾರು, 15 ಬೈಕ್, 11,750 ನಗದು ಜಪ್ತಿ ಮಾಡಲಾಗಿದೆ. ಅಮೃತಹಳ್ಳಿ, ಬಾಣಸವಾಡಿ, ಕೊತ್ತನೂರು, ಮಹದೇವಪುರ ಸೇರಿ ಹಲವು ಠಾಣಾ ವ್ಯಾಪ್ತಿಯಲ್ಲಿ ಆರೋಪಿಗಳು ಸುಲಿಗೆ ಮಾಡುತ್ತಿದ್ದರು. ಕದ್ದ ವಾಹನಗಳಲ್ಲೇ ದುಷ್ಕರ್ಮಿಗಳು ಸುಲಿಗೆ ಮಾಡಲು ಹೋಗುತ್ತಿದ್ದರು. ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ವಾಹನ ಬಿಟ್ಟು 4 ಜನ ದನಗಳ್ಳರು ಪರಾರಿ

ನೆಲಮಂಗಲ: ಹಸುಗಳನ್ನ ಟಿಟಿ ವಾಹನದಲ್ಲಿ ಕದ್ದು ಪರಾರಿಯಾಗುತ್ತಿದ್ದವರನ್ನ ಹಿಡಿಯಲು ಗ್ರಾಮಸ್ಥರು ಯತ್ನಿಸಿರುವಂತಹ ಘಟನೆ ಬೆಂಗಳೂರು ಉತ್ತರ ತಾಲೂಕಿನ ಹೊಟ್ಟೆಪ್ಪನಪಾಳ್ಯದಲ್ಲಿ ನಡೆದಿದೆ. ಗ್ರಾಮಸ್ಥರು ಬೆನ್ನಟ್ಟುವ ವೇಳೆ ಸ್ಥಳದಲ್ಲೇ ವಾಹನ ಬಿಟ್ಟು 4 ಜನ ದನಗಳ್ಳರು ಪರಾರಿಯಾಗಿದ್ದಾರೆ. ಗ್ರಾಮಸ್ಥರ ಕೈಗೆ ಸಿಕ್ಕ ಟಿಟಿ ವಾಹನ ಗ್ಲಾಸ್​ಗಳನ್ನ ಪುಡಿಗಟ್ಟಿ ಜಖಂ ಮಾಡಿದ್ದಾರೆ.

ಇದನ್ನೂ ಓದಿ: ಮೈಸೂರು: ಸಾಕಲು ಆಗುತ್ತಿಲ್ಲವೆಂದು ಒಂದೂವರೆ ವರ್ಷದ ಮಗುವನ್ನು ಕೊಂದ ತಂದೆ!

ಗ್ರಾಮದ ರೈತ ಜಗದೀಶ್ ಅವರಿಗೆ 2 ಹಸುಗಳ ರಕ್ಷಣೆ ಮಾಡಲಾಗಿದೆ. ನಕಲಿ ನಂಬರ್‌ ಪ್ಲೇಟ್ ಬಳಸಿ ಕೃತ್ಯವೆಸಗಿದ್ದಾರೆ. ಸದ್ಯ ಬೈಕ್, ಟಿಟಿ ವಾಹನ ಜಪ್ತಿ ಮಾಡಲಾಗಿದ್ದು, ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮೊಬೈಲ್​​ ಟವರ್ ಏರಿ ಆತ್ಮಹತ್ಯೆಗೆ ಯತ್ನಿಸಿದ ವ್ತಕ್ತಿ

ರಾಯಚೂರು: ಮಾನ್ವಿ ಪಟ್ಟಣದಲ್ಲಿ‌ ಕೌಟುಂಬಿಕ ಕಲಹ ಹಿನ್ನೆಲೆ ವ್ಯಕ್ತಿ ಒಬ್ಬ ಟವರ್ ಏರಿ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ. ಅಮ್ಜದ್​​ ಖಾನ್​​ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಅಮ್ಜದ್​ಖಾನ್ ಸಹೋದರ ಶೋಯಲ್​ ನಡುವೆ ಗಲಾಟೆ‌ ಹಿನ್ನೆಲೆ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ವ್ಯಕ್ತಿಯನ್ನ ಮನವೊಲಿಸಿದ ಮಾನ್ವಿ ಪೊಲೀಸರು ಟವರ್​​ನಿಂದ ಇಳಿಸಿದ್ದಾರೆ.

ದೊಣ್ಣೆಯಿಂದ ಹೊಡೆದು ಮಗನಿಂದಲೇ ತಂದೆಯ ಹತ್ಯೆ

ಕೊಡಗು: ದೊಣ್ಣೆಯಿಂದ ಹೊಡೆದು ಮಗ ತಂದೆಯನ್ನು ಕೊಲೆ ಮಾಡಿರುವ ಘಟನೆ ವಿರಾಜಪೇಟೆ ತಾಲೂಕಿನ ನಾಂಗಲದಲ್ಲಿ ನಡೆದಿದೆ. ಚೇಂದ್ರಿಮಾಡರಾಜ (68) ಕೊಲೆಯಾದ ವ್ಯಕ್ತಿ. ಪುತ್ರ ದರ್ಶನ್ ಕೊಲೆ ಮಾಡಿದ ಆರೋಪಿ. ​ನಿನ್ನೆ (ಅ.18) ರಂದು ಪುತ್ರ ದರ್ಶನ್, ತಂದೆ ಚೇಂದ್ರಿಮಾಡರಾಜ ಅವರಿಗೆ ದೊಣ್ಣೆಯಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದನು.

ಇದನ್ನೂ ಓದಿ: ಮಂಗಳೂರು: ಕಾರು ಡಿಕ್ಕಿ, ಯುವತಿ ದುರ್ಮರಣ: ಐವರಿಗೆ ಗಂಭೀರ ಗಾಯ

ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಚೇಂದ್ರಿಮಾಡರಾಜನನ್ನು ವಿರಾಜಪೇಟೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಆರೋಪಿ ದರ್ಶನ್​ನನ್ನು ಬಂಧಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ