ಬೆಂಗಳೂರು: ಕದ್ದ ವಾಹನಗಳಲ್ಲೇ ಸುಲಿಗೆ ಮಾಡುತ್ತಿದ್ದ ದುಷ್ಕರ್ಮಿಗಳು: 6 ಆರೋಪಿಗಳ ಬಂಧನ

ನಗರದಲ್ಲಿ ಸುಲಿಗೆ ಮಾಡುತ್ತಿದ್ದ 6 ಆರೋಪಿಗಳನ್ನು ಅಮೃತಹಳ್ಳಿ ಪೊಲೀಸರು​ ಬಂಧಿಸಿದ್ದಾರೆ. ಬಂಧಿತರಿಂದ 17.5 ಲಕ್ಷ ಮೌಲ್ಯದ 1 ಕಾರು, 15 ಬೈಕ್, 11,750 ನಗದು ಜಪ್ತಿ ಮಾಡಲಾಗಿದೆ. ಕದ್ದ ವಾಹನಗಳಲ್ಲೇ ದುಷ್ಕರ್ಮಿಗಳು ಸುಲಿಗೆ ಮಾಡಲು ಹೋಗುತ್ತಿದ್ದರು. ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. 

ಬೆಂಗಳೂರು: ಕದ್ದ ವಾಹನಗಳಲ್ಲೇ ಸುಲಿಗೆ ಮಾಡುತ್ತಿದ್ದ ದುಷ್ಕರ್ಮಿಗಳು: 6 ಆರೋಪಿಗಳ ಬಂಧನ
ಬಂಧಿತರಿಂದ ಜಪ್ತಿ ಮಾಡಿದ ಬೈಕ್​ಗಳು
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Oct 19, 2023 | 5:13 PM

ಬೆಂಗಳೂರು, ಅಕ್ಟೋಬರ್​​​​​ 19: ನಗರದಲ್ಲಿ ಸುಲಿಗೆ ಮಾಡುತ್ತಿದ್ದ 6 ಆರೋಪಿಗಳನ್ನು ಅಮೃತಹಳ್ಳಿ ಪೊಲೀಸರು​ ಬಂಧಿಸಿದ್ದಾರೆ (arrested) . ಬಂಧಿತರಿಂದ 17.5 ಲಕ್ಷ ಮೌಲ್ಯದ 1 ಕಾರು, 15 ಬೈಕ್, 11,750 ನಗದು ಜಪ್ತಿ ಮಾಡಲಾಗಿದೆ. ಅಮೃತಹಳ್ಳಿ, ಬಾಣಸವಾಡಿ, ಕೊತ್ತನೂರು, ಮಹದೇವಪುರ ಸೇರಿ ಹಲವು ಠಾಣಾ ವ್ಯಾಪ್ತಿಯಲ್ಲಿ ಆರೋಪಿಗಳು ಸುಲಿಗೆ ಮಾಡುತ್ತಿದ್ದರು. ಕದ್ದ ವಾಹನಗಳಲ್ಲೇ ದುಷ್ಕರ್ಮಿಗಳು ಸುಲಿಗೆ ಮಾಡಲು ಹೋಗುತ್ತಿದ್ದರು. ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ವಾಹನ ಬಿಟ್ಟು 4 ಜನ ದನಗಳ್ಳರು ಪರಾರಿ

ನೆಲಮಂಗಲ: ಹಸುಗಳನ್ನ ಟಿಟಿ ವಾಹನದಲ್ಲಿ ಕದ್ದು ಪರಾರಿಯಾಗುತ್ತಿದ್ದವರನ್ನ ಹಿಡಿಯಲು ಗ್ರಾಮಸ್ಥರು ಯತ್ನಿಸಿರುವಂತಹ ಘಟನೆ ಬೆಂಗಳೂರು ಉತ್ತರ ತಾಲೂಕಿನ ಹೊಟ್ಟೆಪ್ಪನಪಾಳ್ಯದಲ್ಲಿ ನಡೆದಿದೆ. ಗ್ರಾಮಸ್ಥರು ಬೆನ್ನಟ್ಟುವ ವೇಳೆ ಸ್ಥಳದಲ್ಲೇ ವಾಹನ ಬಿಟ್ಟು 4 ಜನ ದನಗಳ್ಳರು ಪರಾರಿಯಾಗಿದ್ದಾರೆ. ಗ್ರಾಮಸ್ಥರ ಕೈಗೆ ಸಿಕ್ಕ ಟಿಟಿ ವಾಹನ ಗ್ಲಾಸ್​ಗಳನ್ನ ಪುಡಿಗಟ್ಟಿ ಜಖಂ ಮಾಡಿದ್ದಾರೆ.

ಇದನ್ನೂ ಓದಿ: ಮೈಸೂರು: ಸಾಕಲು ಆಗುತ್ತಿಲ್ಲವೆಂದು ಒಂದೂವರೆ ವರ್ಷದ ಮಗುವನ್ನು ಕೊಂದ ತಂದೆ!

ಗ್ರಾಮದ ರೈತ ಜಗದೀಶ್ ಅವರಿಗೆ 2 ಹಸುಗಳ ರಕ್ಷಣೆ ಮಾಡಲಾಗಿದೆ. ನಕಲಿ ನಂಬರ್‌ ಪ್ಲೇಟ್ ಬಳಸಿ ಕೃತ್ಯವೆಸಗಿದ್ದಾರೆ. ಸದ್ಯ ಬೈಕ್, ಟಿಟಿ ವಾಹನ ಜಪ್ತಿ ಮಾಡಲಾಗಿದ್ದು, ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮೊಬೈಲ್​​ ಟವರ್ ಏರಿ ಆತ್ಮಹತ್ಯೆಗೆ ಯತ್ನಿಸಿದ ವ್ತಕ್ತಿ

ರಾಯಚೂರು: ಮಾನ್ವಿ ಪಟ್ಟಣದಲ್ಲಿ‌ ಕೌಟುಂಬಿಕ ಕಲಹ ಹಿನ್ನೆಲೆ ವ್ಯಕ್ತಿ ಒಬ್ಬ ಟವರ್ ಏರಿ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ. ಅಮ್ಜದ್​​ ಖಾನ್​​ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಅಮ್ಜದ್​ಖಾನ್ ಸಹೋದರ ಶೋಯಲ್​ ನಡುವೆ ಗಲಾಟೆ‌ ಹಿನ್ನೆಲೆ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ವ್ಯಕ್ತಿಯನ್ನ ಮನವೊಲಿಸಿದ ಮಾನ್ವಿ ಪೊಲೀಸರು ಟವರ್​​ನಿಂದ ಇಳಿಸಿದ್ದಾರೆ.

ದೊಣ್ಣೆಯಿಂದ ಹೊಡೆದು ಮಗನಿಂದಲೇ ತಂದೆಯ ಹತ್ಯೆ

ಕೊಡಗು: ದೊಣ್ಣೆಯಿಂದ ಹೊಡೆದು ಮಗ ತಂದೆಯನ್ನು ಕೊಲೆ ಮಾಡಿರುವ ಘಟನೆ ವಿರಾಜಪೇಟೆ ತಾಲೂಕಿನ ನಾಂಗಲದಲ್ಲಿ ನಡೆದಿದೆ. ಚೇಂದ್ರಿಮಾಡರಾಜ (68) ಕೊಲೆಯಾದ ವ್ಯಕ್ತಿ. ಪುತ್ರ ದರ್ಶನ್ ಕೊಲೆ ಮಾಡಿದ ಆರೋಪಿ. ​ನಿನ್ನೆ (ಅ.18) ರಂದು ಪುತ್ರ ದರ್ಶನ್, ತಂದೆ ಚೇಂದ್ರಿಮಾಡರಾಜ ಅವರಿಗೆ ದೊಣ್ಣೆಯಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದನು.

ಇದನ್ನೂ ಓದಿ: ಮಂಗಳೂರು: ಕಾರು ಡಿಕ್ಕಿ, ಯುವತಿ ದುರ್ಮರಣ: ಐವರಿಗೆ ಗಂಭೀರ ಗಾಯ

ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಚೇಂದ್ರಿಮಾಡರಾಜನನ್ನು ವಿರಾಜಪೇಟೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಆರೋಪಿ ದರ್ಶನ್​ನನ್ನು ಬಂಧಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು