AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಾಯುಕ್ತ ಇನ್​ಸ್ಪೆಕ್ಟರ್ ಸೋಗಿನಲ್ಲಿ ಸರ್ಕಾರಿ ಅಧಿಕಾರಿಗಳಿಂದಲೇ ಹಣ ಸುಲಿಗೆ, ವಂಚಕ ಅರೆಸ್ಟ್

ಆರೋಪಿಯು ಕರ್ನಾಟಕ, ತೆಲಂಗಾಣ ಮತ್ತು ಆಂಧ್ರಪ್ರದೇಶದ ಸರ್ಕಾರಿ ಅಧಿಕಾರಿಗಳಿಗೆ ಸುಲಿಗೆ ಕರೆಗಳನ್ನು ಮಾಡಿದ್ದ. ಸುಮಾರು 40 ರಿಂದ 50 ಸರ್ಕಾರಿ ಅಧಿಕಾರಿಗಳಿಗೆ ವಂಚಿಸಿದ್ದಾನೆ. ಆರೋಪಿಯು ಕ್ರಿಮಿನಲ್ ಹಿನ್ನೆ ಉಳ್ಳವನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಲೋಕಾಯುಕ್ತ ಇನ್​ಸ್ಪೆಕ್ಟರ್ ಸೋಗಿನಲ್ಲಿ ಸರ್ಕಾರಿ ಅಧಿಕಾರಿಗಳಿಂದಲೇ ಹಣ ಸುಲಿಗೆ, ವಂಚಕ ಅರೆಸ್ಟ್
ಶ್ರೀನಿವಾಸ್ ರೆಡ್ಡಿ
TV9 Web
| Edited By: |

Updated on: Jan 02, 2024 | 2:51 PM

Share

ಬೆಂಗಳೂರು, ಜನವರಿ 2: ಲೋಕಾಯುಕ್ತ ಇನ್ಸ್‌ಪೆಕ್ಟರ್ (Lokayukta Inspector) ಎಂದು ಹೇಳಿಕೊಂಡು ಸರ್ಕಾರಿ ಅಧಿಕಾರಿಗಳಿಂದ ಹಣ ವಸೂಲಿ ಮಾಡುತ್ತಿದ್ದ ವ್ಯಕ್ತಿಯನ್ನು ಕೇಂದ್ರ ಅಪರಾಧ ವಿಭಾಗದ ಪೊಲೀಸರು (CCB Police) ಬಂಧಿಸಿದ್ದಾರೆ. ಆರೋಪಿಯನ್ನು ಆಂಧ್ರಪ್ರದೇಶ ಮೂಲದ ಶ್ರೀನಿವಾಸ್ ರೆಡ್ಡಿ ಎಂದು ಗುರುತಿಸಲಾಗಿದೆ. ವಂಚನೆಗೊಳಗಾಗಿರುವ ಬಗ್ಗೆ ಸರ್ಕಾರಿ ಅಧಿಕಾರಿ ರಾಮದಾಸ್ ಅವರು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ನಂತರ ಆರೋಪಿಯನ್ನು ಬಂಧಿಸಲಾಗಿದೆ.

‘ಲೋಕಾಯುಕ್ತ ಇನ್ಸ್‌ಪೆಕ್ಟರ್ ಸೋಗಿನಲ್ಲಿ ಅಧಿಕಾರಿಗಳಿಗೆ ಕರೆ ಮಾಡಿ ಅವರಿಂದ ಹಣ ವಸೂಲಿ ಮಾಡುತ್ತಿದ್ದ ವಂಚಕನನ್ನು ಕೇಂದ್ರ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಸರ್ಕಾರಿ ಅಧಿಕಾರಿಯಿಂದ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ’ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ ಮಾಹಿತಿ ನೀಡಿದ್ದಾರೆ.

ಆರೋಪಿಯು ಕರ್ನಾಟಕ, ತೆಲಂಗಾಣ ಮತ್ತು ಆಂಧ್ರಪ್ರದೇಶದ ಸರ್ಕಾರಿ ಅಧಿಕಾರಿಗಳಿಂದ ಹಣ ಸುಲಿಗೆ ಮಾಡಿದ್ದಾನೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆರೋಪಿಯು ಚಲನಚಿತ್ರದಿಂದ ಸ್ಫೂರ್ತಿ ಪಡೆದ ನಂತರ ಅಧಿಕಾರಿಗಳಿಂದ ಸುಲಿಗೆ ಮಾಡಲು ಪ್ರಾರಂಭಿಸಿದ್ದ.

ಆರೋಪಿಯು ಕರ್ನಾಟಕ, ತೆಲಂಗಾಣ ಮತ್ತು ಆಂಧ್ರಪ್ರದೇಶದ ಸರ್ಕಾರಿ ಅಧಿಕಾರಿಗಳಿಗೆ ಸುಲಿಗೆ ಕರೆಗಳನ್ನು ಮಾಡಿದ್ದ. ಸುಮಾರು 40 ರಿಂದ 50 ಸರ್ಕಾರಿ ಅಧಿಕಾರಿಗಳಿಗೆ ವಂಚಿಸಿದ್ದಾನೆ. ಆರೋಪಿಯು ಕ್ರಿಮಿನಲ್ ಹಿನ್ನೆ ಉಳ್ಳವನಾಗಿದ್ದಾನೆ. ಈತ 2007ರ ಹಿಂದಿನ ದರೋಡೆ ಪ್ರಕರಣಗಳಲ್ಲಿ ಶಾಮೀಲಾಗಿದ್ದ. ತೆಲುಗು ಸಿನಿಮಾವೊಂದರಿಂದ ಪ್ರೇರಿತನಾಗಿ ಸರ್ಕಾರಿ ಅಧಿಕಾರಿಗಳಿಂದ ಹಣ ವಸೂಲಿ ಮಾಡಲು ಆರಂಭಿಸಿದ್ದ ಎಂದು ಬಿ ದಯಾನಂದ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಮಂಗಳೂರಿನಲ್ಲಿ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಅರೆಸ್ಟ್​

ಶ್ರೀನಿವಾಸ್ ರೆಡ್ಡಿ 10 ನೇ ತರಗತಿಯವರೆಗೆ ಓದಿದ್ದಾನೆ ಮತ್ತು 2007 ರಿಂದ ವಿವಿಧ ಕಳ್ಳತನ ಪ್ರಕರಣಗಳಲ್ಲಿ ಶಾಮೀಲಾಗಿದ್ದಾನೆ. ಈತನ ವಿರುದ್ಧ ಕರ್ನಾಟಕ, ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ 36 ಪ್ರಕರಣಗಳು ದಾಖಲಾಗಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ