Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಬಸವೇಶ್ವರನಗರ ಯುವಕನ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್, ಕುಡಿತದ ಚಟ ಬಿಡಸಲಾಗದೆ ಮಗನನ್ನು ಕೊಂದ ತಂದೆ ​

ಬೆಂಗಳೂರಿನ ಬಸವೇಶ್ವರನಗರದಲ್ಲಿ ನಡೆದ ಯುವಕ ಯೋಗೇಶ್​ ಕೊಲೆ ಪ್ರಕರಣ ತಿರುವು ಪಡೆದುಕೊಂಡಿದೆ. ಯೋಗೇಶ್​ ಖಾಸಗಿ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತಿದ್ದನು. ಯೋಗೇಶ್​ ಮದ್ಯಕ್ಕೆ ದಾಸನಾಗಿದ್ದನು. ಮಗನ ಕುಡಿತದ ಚಟದಿಂದ ತಂದೆ ಪ್ರಕಾಶ್​ ಬೇಸತ್ತು ಹೋಗಿದ್ದನು. ಇದೇ ವಿಚಾರವಾಗಿ ತಂದೆ-ಮಗನ ನಡುವೆ ಹಲವು ಬಾರಿ ಜಗಳವಾಗಿದೆ. ಮುಂದೇನಾಯ್ತು ಈ ಸ್ಟೋರಿ ಓದಿ...

ಬೆಂಗಳೂರು: ಬಸವೇಶ್ವರನಗರ ಯುವಕನ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್, ಕುಡಿತದ ಚಟ ಬಿಡಸಲಾಗದೆ ಮಗನನ್ನು ಕೊಂದ ತಂದೆ ​
ಸಾಂದರ್ಭಿಕ ಚಿತ್ರ
Follow us
Jagadisha B
| Updated By: ವಿವೇಕ ಬಿರಾದಾರ

Updated on:Mar 10, 2024 | 7:32 AM

ಬೆಂಗಳೂರು, ಮಾರ್ಚ್​​ 10: ನಗರದ ಬಸವೇಶ್ವರನಗರದಲ್ಲಿ (Basaveshwara Nagar) ನಡೆದ ಯುವಕ ಯೋಗೇಶ್​ ಕೊಲೆ ಪ್ರಕರಣ ತಿರುವು ಪಡೆದುಕೊಂಡಿದೆ. ಕುಡಿತದ ಚಟ ಬಿಡಿಸಲಾಗದೆ ತಂದೆ ಪ್ರಕಾಶ್​ ಮಗ ಯೋಗೇಶ್​ನನ್ನು ಕೊಲೆ ಮಾಡಿದ್ದಾನೆ. ಪುತ್ರ ಯೋಗೇಶ್​ನನ್ನು​ ಹತ್ಯೆಗೈದು ಆತ್ಮಹತ್ಯೆ ಅಂತ ತಂದೆ ಪ್ರಕಾಶ್​ ಬಿಂಬಿಸಿದ್ದನು. ಪೊಲೀಸರ (Police) ತನಿಖೆಯಲ್ಲಿ ಈ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಆರೋಪಿ ಪ್ರಕಾಶ್​​ನನ್ನು ಬಂಧಿಸಿದ್ದಾರೆ.

ಯೋಗೇಶ್​ ಖಾಸಗಿ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತಿದ್ದನು. ಯೋಗೇಶ್​ ಮದ್ಯಕ್ಕೆ ದಾಸನಾಗಿದ್ದನು. ಮಗನ ಕುಡಿತದ ಚಟದಿಂದ ತಂದೆ ಪ್ರಕಾಶ್​ ಬೇಸತ್ತು ಹೋಗಿದ್ದನು. ಇದೇ ವಿಚಾರವಾಗಿ ತಂದೆ-ಮಗನ ನಡುವೆ ಹಲವು ಬಾರಿ ಜಗಳವಾಗಿದೆ. ಬುಧವಾರ (ಮಾ.06) ರಂದು ಇದೇ ವಿಚಾರವಾಗಿ ತಂದೆ-ಮಗನ ನಡುವೆ ಗಲಾಟೆಯಾಗಿದೆ.

ಜಗಳದ ನಡುವೆ ಆರೋಪಿ ಪ್ರಕಾಶ್​ ಮಗ ಯೋಗೇಶ್​ನ ಕತ್ತು ಬಿಗಿದು ಉಸಿರುಗಟ್ಟಿಸಿ ಕೊಲೆಗೈದಿದ್ದಾನೆ. ಬಳಿಕ ಆರೋಪಿ ಪ್ರಕಾಶ್​ ಮಗ ಯೋಗೇಶ್​ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ರೀತಿ ಬಿಂಬಿಸಿದ್ದಾನೆ. ಆದರೆ ಸ್ಥಳೀಯರು ಪ್ರಕಾಶ್​ ಮೇಲೆ ಅನುಮಾನಗೊಂಡು, ಇದು ಆತ್ಮಹತ್ಯೆಯಲ್ಲ ಕೊಲೆ ಅಂತ ಪೊಲೀಸರ ಎದುರು ಶಂಕೆ ವ್ಯಕ್ತ ಪಡಿಸಿದರು. ಅಲ್ಲದೆ ಯುವಕ ಸಾಯುವ ಹಿಂದಿನ ದಿನ ಮನೆಯಲ್ಲಾಗಿದ್ದ ಗಲಾಟೆ ಬಗ್ಗೆ ಸಹ ತಿಳಿಸಿದ್ದರು.

ಇದನ್ನೂ ಓದಿ: ಕೌಟುಂಬಿಕ ಕಲಹ: ಶಿವರಾತ್ರಿಯಂದೆ ಪತ್ನಿಯ ಬರ್ಬರ ಕೊಲೆ

ವಿಚಾರ ತಿಳಿದು ಪೊಲೀಸರು ಮೃತದೇಹವನ್ನು ಮರಣೊತ್ತರ ಪರಿಕ್ಷೆಗೆ ರವಾನಿಸಿದ್ದರು. ಇತ್ತ ಮನೆ ಪರಿಶೀಲನೆ ವೇಳೆ ಸಹ ನೇಣು ಬಿಗಿದುಕೊಂಡ ಬಗ್ಗೆ ಯಾವುದೇ ಸಾಕ್ಷಿ ಇರಲಿಲ್ಲ. ಈ ನಡುವೆ ಮರಣೋತ್ತರ ಪರಿಕ್ಷಾ ವರದಿ ಪೊಲೀಸರ ಕೈ ಸೇರಿತು. ವರದಿಯಲ್ಲಿ ಆತ್ಮಹತ್ಯೆಯಲ್ಲ ಕೊಲೆ ಎಂದು ಉಲ್ಲೇಖವಾಗಿದೆ.

ಕೂಡಲೆ ಪೊಲೀಸರು ಪ್ರಕಾಶ್​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ಸಂಗತಿ ಬಯಲಾಗಿದೆ. ಜಗಳದ ವೇಳೆ ಕೋಪದಲ್ಲಾದ ಎಡವಟ್ಟು ಎಂದು ಪೊಲೀಸರ ಎದರು ಪ್ರಕಾಶ್​ ಹೇಳಿದ್ದಾನೆ. ಬಸವೇಶ್ವರ ನಗರ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:30 am, Sun, 10 March 24

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ