AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಬಸವೇಶ್ವರನಗರ ಯುವಕನ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್, ಕುಡಿತದ ಚಟ ಬಿಡಸಲಾಗದೆ ಮಗನನ್ನು ಕೊಂದ ತಂದೆ ​

ಬೆಂಗಳೂರಿನ ಬಸವೇಶ್ವರನಗರದಲ್ಲಿ ನಡೆದ ಯುವಕ ಯೋಗೇಶ್​ ಕೊಲೆ ಪ್ರಕರಣ ತಿರುವು ಪಡೆದುಕೊಂಡಿದೆ. ಯೋಗೇಶ್​ ಖಾಸಗಿ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತಿದ್ದನು. ಯೋಗೇಶ್​ ಮದ್ಯಕ್ಕೆ ದಾಸನಾಗಿದ್ದನು. ಮಗನ ಕುಡಿತದ ಚಟದಿಂದ ತಂದೆ ಪ್ರಕಾಶ್​ ಬೇಸತ್ತು ಹೋಗಿದ್ದನು. ಇದೇ ವಿಚಾರವಾಗಿ ತಂದೆ-ಮಗನ ನಡುವೆ ಹಲವು ಬಾರಿ ಜಗಳವಾಗಿದೆ. ಮುಂದೇನಾಯ್ತು ಈ ಸ್ಟೋರಿ ಓದಿ...

ಬೆಂಗಳೂರು: ಬಸವೇಶ್ವರನಗರ ಯುವಕನ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್, ಕುಡಿತದ ಚಟ ಬಿಡಸಲಾಗದೆ ಮಗನನ್ನು ಕೊಂದ ತಂದೆ ​
ಸಾಂದರ್ಭಿಕ ಚಿತ್ರ
Jagadisha B
| Edited By: |

Updated on:Mar 10, 2024 | 7:32 AM

Share

ಬೆಂಗಳೂರು, ಮಾರ್ಚ್​​ 10: ನಗರದ ಬಸವೇಶ್ವರನಗರದಲ್ಲಿ (Basaveshwara Nagar) ನಡೆದ ಯುವಕ ಯೋಗೇಶ್​ ಕೊಲೆ ಪ್ರಕರಣ ತಿರುವು ಪಡೆದುಕೊಂಡಿದೆ. ಕುಡಿತದ ಚಟ ಬಿಡಿಸಲಾಗದೆ ತಂದೆ ಪ್ರಕಾಶ್​ ಮಗ ಯೋಗೇಶ್​ನನ್ನು ಕೊಲೆ ಮಾಡಿದ್ದಾನೆ. ಪುತ್ರ ಯೋಗೇಶ್​ನನ್ನು​ ಹತ್ಯೆಗೈದು ಆತ್ಮಹತ್ಯೆ ಅಂತ ತಂದೆ ಪ್ರಕಾಶ್​ ಬಿಂಬಿಸಿದ್ದನು. ಪೊಲೀಸರ (Police) ತನಿಖೆಯಲ್ಲಿ ಈ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಆರೋಪಿ ಪ್ರಕಾಶ್​​ನನ್ನು ಬಂಧಿಸಿದ್ದಾರೆ.

ಯೋಗೇಶ್​ ಖಾಸಗಿ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತಿದ್ದನು. ಯೋಗೇಶ್​ ಮದ್ಯಕ್ಕೆ ದಾಸನಾಗಿದ್ದನು. ಮಗನ ಕುಡಿತದ ಚಟದಿಂದ ತಂದೆ ಪ್ರಕಾಶ್​ ಬೇಸತ್ತು ಹೋಗಿದ್ದನು. ಇದೇ ವಿಚಾರವಾಗಿ ತಂದೆ-ಮಗನ ನಡುವೆ ಹಲವು ಬಾರಿ ಜಗಳವಾಗಿದೆ. ಬುಧವಾರ (ಮಾ.06) ರಂದು ಇದೇ ವಿಚಾರವಾಗಿ ತಂದೆ-ಮಗನ ನಡುವೆ ಗಲಾಟೆಯಾಗಿದೆ.

ಜಗಳದ ನಡುವೆ ಆರೋಪಿ ಪ್ರಕಾಶ್​ ಮಗ ಯೋಗೇಶ್​ನ ಕತ್ತು ಬಿಗಿದು ಉಸಿರುಗಟ್ಟಿಸಿ ಕೊಲೆಗೈದಿದ್ದಾನೆ. ಬಳಿಕ ಆರೋಪಿ ಪ್ರಕಾಶ್​ ಮಗ ಯೋಗೇಶ್​ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ರೀತಿ ಬಿಂಬಿಸಿದ್ದಾನೆ. ಆದರೆ ಸ್ಥಳೀಯರು ಪ್ರಕಾಶ್​ ಮೇಲೆ ಅನುಮಾನಗೊಂಡು, ಇದು ಆತ್ಮಹತ್ಯೆಯಲ್ಲ ಕೊಲೆ ಅಂತ ಪೊಲೀಸರ ಎದುರು ಶಂಕೆ ವ್ಯಕ್ತ ಪಡಿಸಿದರು. ಅಲ್ಲದೆ ಯುವಕ ಸಾಯುವ ಹಿಂದಿನ ದಿನ ಮನೆಯಲ್ಲಾಗಿದ್ದ ಗಲಾಟೆ ಬಗ್ಗೆ ಸಹ ತಿಳಿಸಿದ್ದರು.

ಇದನ್ನೂ ಓದಿ: ಕೌಟುಂಬಿಕ ಕಲಹ: ಶಿವರಾತ್ರಿಯಂದೆ ಪತ್ನಿಯ ಬರ್ಬರ ಕೊಲೆ

ವಿಚಾರ ತಿಳಿದು ಪೊಲೀಸರು ಮೃತದೇಹವನ್ನು ಮರಣೊತ್ತರ ಪರಿಕ್ಷೆಗೆ ರವಾನಿಸಿದ್ದರು. ಇತ್ತ ಮನೆ ಪರಿಶೀಲನೆ ವೇಳೆ ಸಹ ನೇಣು ಬಿಗಿದುಕೊಂಡ ಬಗ್ಗೆ ಯಾವುದೇ ಸಾಕ್ಷಿ ಇರಲಿಲ್ಲ. ಈ ನಡುವೆ ಮರಣೋತ್ತರ ಪರಿಕ್ಷಾ ವರದಿ ಪೊಲೀಸರ ಕೈ ಸೇರಿತು. ವರದಿಯಲ್ಲಿ ಆತ್ಮಹತ್ಯೆಯಲ್ಲ ಕೊಲೆ ಎಂದು ಉಲ್ಲೇಖವಾಗಿದೆ.

ಕೂಡಲೆ ಪೊಲೀಸರು ಪ್ರಕಾಶ್​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ಸಂಗತಿ ಬಯಲಾಗಿದೆ. ಜಗಳದ ವೇಳೆ ಕೋಪದಲ್ಲಾದ ಎಡವಟ್ಟು ಎಂದು ಪೊಲೀಸರ ಎದರು ಪ್ರಕಾಶ್​ ಹೇಳಿದ್ದಾನೆ. ಬಸವೇಶ್ವರ ನಗರ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:30 am, Sun, 10 March 24

Follow Us
Jagadisha B
Jagadisha B

ಜಗದೀಶ್​ ಬಸವರಾಜು ಟಿವಿ9 ಕನ್ನಡದ ವರದಿಗಾರರಲ್ಲಿ ಒಬ್ಬರು. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​