ಬೆಂಗಳೂರು: ಬಸವೇಶ್ವರನಗರ ಯುವಕನ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್, ಕುಡಿತದ ಚಟ ಬಿಡಸಲಾಗದೆ ಮಗನನ್ನು ಕೊಂದ ತಂದೆ ​

| Updated By: ವಿವೇಕ ಬಿರಾದಾರ

Updated on: Mar 10, 2024 | 7:32 AM

ಬೆಂಗಳೂರಿನ ಬಸವೇಶ್ವರನಗರದಲ್ಲಿ ನಡೆದ ಯುವಕ ಯೋಗೇಶ್​ ಕೊಲೆ ಪ್ರಕರಣ ತಿರುವು ಪಡೆದುಕೊಂಡಿದೆ. ಯೋಗೇಶ್​ ಖಾಸಗಿ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತಿದ್ದನು. ಯೋಗೇಶ್​ ಮದ್ಯಕ್ಕೆ ದಾಸನಾಗಿದ್ದನು. ಮಗನ ಕುಡಿತದ ಚಟದಿಂದ ತಂದೆ ಪ್ರಕಾಶ್​ ಬೇಸತ್ತು ಹೋಗಿದ್ದನು. ಇದೇ ವಿಚಾರವಾಗಿ ತಂದೆ-ಮಗನ ನಡುವೆ ಹಲವು ಬಾರಿ ಜಗಳವಾಗಿದೆ. ಮುಂದೇನಾಯ್ತು ಈ ಸ್ಟೋರಿ ಓದಿ...

ಬೆಂಗಳೂರು: ಬಸವೇಶ್ವರನಗರ ಯುವಕನ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್, ಕುಡಿತದ ಚಟ ಬಿಡಸಲಾಗದೆ ಮಗನನ್ನು ಕೊಂದ ತಂದೆ ​
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು, ಮಾರ್ಚ್​​ 10: ನಗರದ ಬಸವೇಶ್ವರನಗರದಲ್ಲಿ (Basaveshwara Nagar) ನಡೆದ ಯುವಕ ಯೋಗೇಶ್​ ಕೊಲೆ ಪ್ರಕರಣ ತಿರುವು ಪಡೆದುಕೊಂಡಿದೆ. ಕುಡಿತದ ಚಟ ಬಿಡಿಸಲಾಗದೆ ತಂದೆ ಪ್ರಕಾಶ್​ ಮಗ ಯೋಗೇಶ್​ನನ್ನು ಕೊಲೆ ಮಾಡಿದ್ದಾನೆ. ಪುತ್ರ ಯೋಗೇಶ್​ನನ್ನು​ ಹತ್ಯೆಗೈದು ಆತ್ಮಹತ್ಯೆ ಅಂತ ತಂದೆ ಪ್ರಕಾಶ್​ ಬಿಂಬಿಸಿದ್ದನು. ಪೊಲೀಸರ (Police) ತನಿಖೆಯಲ್ಲಿ ಈ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಆರೋಪಿ ಪ್ರಕಾಶ್​​ನನ್ನು ಬಂಧಿಸಿದ್ದಾರೆ.

ಯೋಗೇಶ್​ ಖಾಸಗಿ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತಿದ್ದನು. ಯೋಗೇಶ್​ ಮದ್ಯಕ್ಕೆ ದಾಸನಾಗಿದ್ದನು. ಮಗನ ಕುಡಿತದ ಚಟದಿಂದ ತಂದೆ ಪ್ರಕಾಶ್​ ಬೇಸತ್ತು ಹೋಗಿದ್ದನು. ಇದೇ ವಿಚಾರವಾಗಿ ತಂದೆ-ಮಗನ ನಡುವೆ ಹಲವು ಬಾರಿ ಜಗಳವಾಗಿದೆ. ಬುಧವಾರ (ಮಾ.06) ರಂದು ಇದೇ ವಿಚಾರವಾಗಿ ತಂದೆ-ಮಗನ ನಡುವೆ ಗಲಾಟೆಯಾಗಿದೆ.

ಜಗಳದ ನಡುವೆ ಆರೋಪಿ ಪ್ರಕಾಶ್​ ಮಗ ಯೋಗೇಶ್​ನ ಕತ್ತು ಬಿಗಿದು ಉಸಿರುಗಟ್ಟಿಸಿ ಕೊಲೆಗೈದಿದ್ದಾನೆ. ಬಳಿಕ ಆರೋಪಿ ಪ್ರಕಾಶ್​ ಮಗ ಯೋಗೇಶ್​ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ರೀತಿ ಬಿಂಬಿಸಿದ್ದಾನೆ. ಆದರೆ ಸ್ಥಳೀಯರು ಪ್ರಕಾಶ್​ ಮೇಲೆ ಅನುಮಾನಗೊಂಡು, ಇದು ಆತ್ಮಹತ್ಯೆಯಲ್ಲ ಕೊಲೆ ಅಂತ ಪೊಲೀಸರ ಎದುರು ಶಂಕೆ ವ್ಯಕ್ತ ಪಡಿಸಿದರು. ಅಲ್ಲದೆ ಯುವಕ ಸಾಯುವ ಹಿಂದಿನ ದಿನ ಮನೆಯಲ್ಲಾಗಿದ್ದ ಗಲಾಟೆ ಬಗ್ಗೆ ಸಹ ತಿಳಿಸಿದ್ದರು.

ಇದನ್ನೂ ಓದಿ: ಕೌಟುಂಬಿಕ ಕಲಹ: ಶಿವರಾತ್ರಿಯಂದೆ ಪತ್ನಿಯ ಬರ್ಬರ ಕೊಲೆ

ವಿಚಾರ ತಿಳಿದು ಪೊಲೀಸರು ಮೃತದೇಹವನ್ನು ಮರಣೊತ್ತರ ಪರಿಕ್ಷೆಗೆ ರವಾನಿಸಿದ್ದರು. ಇತ್ತ ಮನೆ ಪರಿಶೀಲನೆ ವೇಳೆ ಸಹ ನೇಣು ಬಿಗಿದುಕೊಂಡ ಬಗ್ಗೆ ಯಾವುದೇ ಸಾಕ್ಷಿ ಇರಲಿಲ್ಲ. ಈ ನಡುವೆ ಮರಣೋತ್ತರ ಪರಿಕ್ಷಾ ವರದಿ ಪೊಲೀಸರ ಕೈ ಸೇರಿತು. ವರದಿಯಲ್ಲಿ ಆತ್ಮಹತ್ಯೆಯಲ್ಲ ಕೊಲೆ ಎಂದು ಉಲ್ಲೇಖವಾಗಿದೆ.

ಕೂಡಲೆ ಪೊಲೀಸರು ಪ್ರಕಾಶ್​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ಸಂಗತಿ ಬಯಲಾಗಿದೆ. ಜಗಳದ ವೇಳೆ ಕೋಪದಲ್ಲಾದ ಎಡವಟ್ಟು ಎಂದು ಪೊಲೀಸರ ಎದರು ಪ್ರಕಾಶ್​ ಹೇಳಿದ್ದಾನೆ. ಬಸವೇಶ್ವರ ನಗರ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:30 am, Sun, 10 March 24