AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣಕಾಸಿನ ವಿಚಾರವಾಗಿ ಅಪಹರಿಸಿದ್ದ ವ್ಯಕ್ತಿಯ ರಕ್ಷಣೆ: ನಾಲ್ವರ ಬಂಧನ

ಹಣಕಾಸಿನ ವಿಚಾರವಾಗಿ ಅಪಹರಿಸಿದ್ದ ವ್ಯಕ್ತಿಯನ್ನು ರಕ್ಷಿಸುವ ಮೂಲಕ ನಾಲ್ವರನ್ನು ರಾಮನಗರ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಿಂದ ಅಪಹರಿಸಿ ರಾಮನಗರ ಗೋಡೌನ್​ನಲ್ಲಿ ಇರಿಸಿದ್ದರು. ಒಂದೂವರೆ ಕೋಟಿ ಹಣದ ವಿಚಾರವಾಗಿ ಅಭಿಲಾಷ್​ನನ್ನು 10 ಜನರ ಗುಂಪು ಅಪಹರಿಸಿ ಹಲ್ಲೆ ನಡೆಸಿದ್ದಾರೆ. ಸದ್ಯ ಮೊಬೈಲ್ ನಂಬರ್ ಟ್ರ್ಯಾಕ್ ಮಾಡಿ ಅಭಿಷೇಕ್​ನನ್ನು ರಕ್ಷಿಸಿ, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಹಣಕಾಸಿನ ವಿಚಾರವಾಗಿ ಅಪಹರಿಸಿದ್ದ ವ್ಯಕ್ತಿಯ ರಕ್ಷಣೆ: ನಾಲ್ವರ ಬಂಧನ
ಪ್ರಾತಿನಿಧಿಕ ಚಿತ್ರ
Shivaprasad B
| Edited By: |

Updated on: Oct 23, 2023 | 9:00 PM

Share

ಬೆಂಗಳೂರು, ಅಕ್ಟೋಬರ್​​​ 23: ಹಣಕಾಸಿನ ವಿಚಾರವಾಗಿ ಅಪಹರಿಸಿದ್ದ (Kidnapped) ವ್ಯಕ್ತಿಯನ್ನು ರಕ್ಷಿಸುವ ಮೂಲಕ ನಾಲ್ವರನ್ನು ರಾಮನಗರ ಪೊಲೀಸರು ಬಂಧಿಸಿದ್ದಾರೆ. ಉದ್ಯಮಿ ಅಭಿಲಾಷ್​​ ಅಪಹರನಕ್ಕೊಳಗಾದ. ಬೆಂಗಳೂರಿನಿಂದ ಅಪಹರಿಸಿ ರಾಮನಗರ ಗೋಡೌನ್​ನಲ್ಲಿ ಇರಿಸಿದ್ದರು. ಒಂದೂವರೆ ಕೋಟಿ ಹಣದ ವಿಚಾರವಾಗಿ ಅಭಿಲಾಷ್​ನನ್ನು 10 ಜನರ ಗುಂಪು ಅಪಹರಿಸಿ ಹಲ್ಲೆ ನಡೆಸಿದ್ದಾರೆ. ಅಭಿಲಾಷ್​ ಕುತ್ತಿಗೆಗೆ ಚಾಕು ಇಟ್ಟು 50 ಲಕ್ಷ ಹಣ ನೀಡುವಂತೆ ಧಮ್ಕಿ ಹಾಕಿದ್ದಾರೆ.

ಅಭಿಲಾಷ್ ತಲೆಗೆ ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿದ್ದು, ಪತ್ನಿ, ತಂದೆಗೆ ಕರೆ ಮಾಡಿ 50 ಲಕ್ಷ ರೂ. ಒತ್ತೆ ಹಣ ನೀಡುವಂತೆ ಬೆದರಿಕೆ ಹಾಕಿದ್ದಾರೆ. ಹಣ ನೀಡಲು ನಿರಾಕರಿಸಿದ್ದಕ್ಕೆ ವಿಡಿಯೋ ಕಾಲ್ ಮಾಡಿ ಮತ್ತೆ ಹಲ್ಲೆ ಮಾಡಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರು: ಹುಲಿ ಉಗುರಿನ ಡಾಲರ್ ಧರಿಸಿದ್ದ ಇಬ್ಬರ ಬಂಧನ: ಮತ್ತಿಬ್ಬರು ಎಸ್ಕೇಪ್

ಅಪಹರಣಕಾರರು ಊಟಕ್ಕೆ ತೆರಳಿದ್ದಾಗ ಪೊಲೀಸರಿಗೆ ಅಭಿಷೇಕ್ ಕರೆ ಮಾಡಿ ಕಿಡ್ನ್ಯಾಪ್ ಬಗ್ಗೆ ಮಾಹಿತಿ ನೀಡಿದ್ದಾರೆ. ಮೊಬೈಲ್ ನಂಬರ್ ಟ್ರ್ಯಾಕ್ ಮಾಡಿ ಅಭಿಷೇಕ್​ನನ್ನು ರಕ್ಷಿಸಿ, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಸಂಪಿಗೆಹಳ್ಳಿ ಪೊಲೀಸ್ ಠಾಣೆಗೆ ಪ್ರಕರಣದ ತನಿಖೆ ವರ್ಗಾವಣೆ ಮಾಡಲಾಗಿದೆ.

ಪಾದಚಾರಿಗೆ ಬೈಕ್​​: ಸವಾರ ಸ್ಥಳದಲ್ಲೇ ಸಾವು

ನೆಲಮಂಗಲ: ಪಾದಚಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ75 ಮಹದೇವಪುರ ಬಸ್ ನಿಲ್ದಾಣದಲ್ಲಿ ನಡೆದಿದೆ. ಪಾದಚಾರಿ ಮಹಿಳೆಗೆ ಗಂಭೀರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಸೋಲೂರಿನ ರಂಗಸ್ವಾಮಿ(40) ಮೃತ ಬೈಕ್ ಸವಾರ.  ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾಪತ್ತೆಯಾಗಿದ್ದ ಹೆಡ್​ ಕಾನ್ಸ್​ಟೇಬಲ್ ಶವವಾಗಿ ಪತ್ತೆ

ಉಡುಪಿ: ನಾಪತ್ತೆಯಾಗಿದ್ದ ಹೆಡ್​ ಕಾನ್ಸ್​ಟೇಬಲ್ ಶವವಾಗಿ ಪತ್ತೆ ಆಗಿರುವಂತಹ ಘಟನೆ ಜಿಲ್ಲೆಯ ಕಾರ್ಕಳ ತಾಲೂಕಿನ ಪುಲ್ಕೇರಿ ಗ್ರಾಮದಲ್ಲಿ ನಡೆದಿದೆ. ಪುಲ್ಕೇರಿ ಸಮೀಪ ಬಾವಿಯಲ್ಲಿ ಶೃತಿನ್ ಶೆಟ್ಟಿ(35) ಮೃತದೇಹ ಪತ್ತೆ ಆಗಿದೆ. ಮೃತ ಶೃತಿನ್ ಶೆಟ್ಟಿ ಕಾರ್ಕಳ ನಗರ ಠಾಣೆ ಹೆಡ್ ಕಾನ್ಸ್‌ಟೇಬಲ್ ಆಗಿದ್ದರು.

ಇದನ್ನೂ ಓದಿ: ಸೇನೆಗೆ ಸೇರಿಸುವುದಾಗಿ 150ಕ್ಕೂ ಹೆಚ್ಚು ಯುವಕರಿಂದ 1 ಕೋಟಿ ರೂ. ವಂಚನೆ: ಗಂಡ, ಹೆಂಡತಿ ಅಂದರ್​​

ಅ.19ರಂದು ನಾಪತ್ತೆಯಾಗಿದ್ದರು. ಅಸಹಜ ಸಾವು ಎಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. 2008ರ ಬ್ಯಾಚ್​ನಲ್ಲಿ ಪೊಲೀಸ್ ಇಲಾಖೆಗೆ ಸೇರಿದ್ದರು. ಅಕ್ಟೋಬರ್ 18, 19ರಂದು ರಜೆ ಮೇಲೆ ತೆರಳಿದ್ದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ