ಕುಡಿದು ಬಂದು ರಸ್ತೆ ಬದಿ ಮಲಗಿದ್ದವರ ತಲೆ ಮೇಲೆ ಕಲ್ಲು ಎತ್ತಿಹಾಕಿ ಸಾಯಿಸುತ್ತಿದ್ದ ಕಿಲ್ಲರ್‌ ಅಂದರ್‌!

ಬೆಂಗಳೂರಿನಲ್ಲಿ ಕಳೆದ ಒಂದು ವಾರದಲ್ಲಿ ಎರಡು ಕೊಲೆಗಳು ನಡೆದಿದ್ದವು. ಅದು ಜಯನಗರ 7ನೇ ಬಡಾವಣೆ ಮತ್ತು ಸಿಟಿ ಮಾರ್ಕೆಟ್ ಹಿಂಭಾಗದ ಕಾಂಪ್ಲೆಕ್ಸ್​​ನಲ್ಲಿ. ಈ ಎರಡೂ ಕೊಲೆಗಳನ್ನು ಒಬ್ಬನೇ ಮಾಡಿದ್ದನು. ಈ ವಿಚಾರ ತಿಳಿದ ಪೊಲೀಸರು ಆರೋಪಿಗಾಗಿ ಕಾರ್ಯಾಚರಣೆ ನಡೆಸಿ, ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕುಡಿದು ಬಂದು ರಸ್ತೆ ಬದಿ ಮಲಗಿದ್ದವರ ತಲೆ ಮೇಲೆ ಕಲ್ಲು ಎತ್ತಿಹಾಕಿ ಸಾಯಿಸುತ್ತಿದ್ದ ಕಿಲ್ಲರ್‌ ಅಂದರ್‌!
ಆರೋಪಿ ಗಿರೀಶ್​, ಬನಶಂಕರಿ ಪೊಲೀಸ್​ ಠಾಣೆ
Follow us
| Updated By: ವಿವೇಕ ಬಿರಾದಾರ

Updated on: May 26, 2024 | 10:54 AM

ಬೆಂಗಳೂರು, ಮೇ 26: ನಟೋರಿಯಸ್​ ಕೊಲೆಗಾರ ಗಿರೀಶ್​ನನ್ನು ಬೆಂಗಳೂರಿನ (Bengaluru) ಬನಶಂಕರಿ ಠಾಣೆ ಪೊಲೀಸರು (Police) ಬಂಧಿಸಿದ್ದಾರೆ. ಆರೋಪಿ ಗಿರೀಶ್​​ ಒಂದೇ ವಾರದಲ್ಲಿ ಎರಡು ಕೊಲೆ ಮಾಡಿದ್ದನು. ಕುಡಿದು ಬಂದು ರಸ್ತೆ ಬದಿ ಮಲಗಿದ್ದವರನ್ನು ಆರೋಪಿ ಗಿರೀಶ್ ಕೊಲೆ ಮಾಡುತ್ತಿದ್ದನು. ​​

ಕುಡಿದ ಮತ್ತಿನಲ್ಲಿ ಮೇ 12ರಂದು ಜಯನಗರ 7ನೇ ಬಡಾವಣೆಯಲ್ಲಿ ರಸ್ತೆ ಬದಿಯಲ್ಲಿ ಮಲಗಿದ್ದ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದನು. ​ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಮತ್ತೆ ಮೇ 18ರಂದು ಸಿಟಿ ಮಾರ್ಕೆಟ್ ಹಿಂಭಾಗದ ಕಾಂಪ್ಲೆಕ್ಸ್​​ನಲ್ಲಿ ಮಲಗಿದ್ದ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದನು. ಸಿಟಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಾಗಿ ಎರಡೂ ಠಾಣೆ ಪೊಲೀಸರು ಬಲೆ ಬೀಸಿದ್ದರು. ಇದೀಗ ಬನಶಂಕರಿ ಠಾಣೆ ಪೊಲೀಸರು ಆರೋಪಿ ಗಿರೀಶ್​ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ಬಾತ್​​ ರೂಮ್​ನ​ಲ್ಲಿ ಯುವತಿ ಶವ ಪತ್ತೆ ಕೇಸ್​: ಪ್ರಬುದ್ಧಳ ಕೈ ಕೋಯ್ದು ಕೊಲೆಗೈದ ಬಾಲಕ

ಡ್ರಗ್ ಪೆಡ್ಲರ್ ಬಂಧಿಸಿದ ಪೊಲೀಸರು

ನಗರದ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ಡ್ರಗ್ ಪೆಡ್ಲರ್ ರೂಪೇಶ್​​ನನ್ನು ಬಂಧಿಸಿದ್ದಾರೆ. ಆರೋಪಿ ರೂಪೇಶ್ ಆಫ್ರಿಕಾ, ನೈಜೀರಿಯನ್ ಪೆಡ್ಲರ್​ಗಳಿಂದ ಡ್ರಗ್ಸ್​​ ತರಿಸಿಕೊಳ್ಳುತ್ತಿದ್ದನು. ಬಳಿಕ ನಗರದಲ್ಲಿ ನಡೆಯುತ್ತಿದ್ದ ಪಾರ್ಟಿಗಳಿಗೆ ಡ್ರಗ್ಸ್​ ಸಪ್ಲೈ ಮಾಡುತ್ತಿದ್ದನು.

ಇದನ್ನು ತಿಳಿದ ಪೊಲೀಸರು ಆರೋಪಿ ರೂಪೇಶ್​ನನ್ನು ಬಂಧಿಸಿದ್ದಾರೆ. ಬಂಧಿತನಿಂದ 120 ಗ್ರಾಂ ಸಿಂಥೆಟಿಕ್ ಡ್ರಗ್, ಎಮ್​ಡಿಎಮ್​ಎ ವಶಕ್ಕೆ ಪಡೆದುಕೊಳ್ಳಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ