AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದು ಬಂದು ರಸ್ತೆ ಬದಿ ಮಲಗಿದ್ದವರ ತಲೆ ಮೇಲೆ ಕಲ್ಲು ಎತ್ತಿಹಾಕಿ ಸಾಯಿಸುತ್ತಿದ್ದ ಕಿಲ್ಲರ್‌ ಅಂದರ್‌!

ಬೆಂಗಳೂರಿನಲ್ಲಿ ಕಳೆದ ಒಂದು ವಾರದಲ್ಲಿ ಎರಡು ಕೊಲೆಗಳು ನಡೆದಿದ್ದವು. ಅದು ಜಯನಗರ 7ನೇ ಬಡಾವಣೆ ಮತ್ತು ಸಿಟಿ ಮಾರ್ಕೆಟ್ ಹಿಂಭಾಗದ ಕಾಂಪ್ಲೆಕ್ಸ್​​ನಲ್ಲಿ. ಈ ಎರಡೂ ಕೊಲೆಗಳನ್ನು ಒಬ್ಬನೇ ಮಾಡಿದ್ದನು. ಈ ವಿಚಾರ ತಿಳಿದ ಪೊಲೀಸರು ಆರೋಪಿಗಾಗಿ ಕಾರ್ಯಾಚರಣೆ ನಡೆಸಿ, ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕುಡಿದು ಬಂದು ರಸ್ತೆ ಬದಿ ಮಲಗಿದ್ದವರ ತಲೆ ಮೇಲೆ ಕಲ್ಲು ಎತ್ತಿಹಾಕಿ ಸಾಯಿಸುತ್ತಿದ್ದ ಕಿಲ್ಲರ್‌ ಅಂದರ್‌!
ಆರೋಪಿ ಗಿರೀಶ್​, ಬನಶಂಕರಿ ಪೊಲೀಸ್​ ಠಾಣೆ
ರಾಚಪ್ಪಾಜಿ ನಾಯ್ಕ್
| Edited By: |

Updated on: May 26, 2024 | 10:54 AM

Share

ಬೆಂಗಳೂರು, ಮೇ 26: ನಟೋರಿಯಸ್​ ಕೊಲೆಗಾರ ಗಿರೀಶ್​ನನ್ನು ಬೆಂಗಳೂರಿನ (Bengaluru) ಬನಶಂಕರಿ ಠಾಣೆ ಪೊಲೀಸರು (Police) ಬಂಧಿಸಿದ್ದಾರೆ. ಆರೋಪಿ ಗಿರೀಶ್​​ ಒಂದೇ ವಾರದಲ್ಲಿ ಎರಡು ಕೊಲೆ ಮಾಡಿದ್ದನು. ಕುಡಿದು ಬಂದು ರಸ್ತೆ ಬದಿ ಮಲಗಿದ್ದವರನ್ನು ಆರೋಪಿ ಗಿರೀಶ್ ಕೊಲೆ ಮಾಡುತ್ತಿದ್ದನು. ​​

ಕುಡಿದ ಮತ್ತಿನಲ್ಲಿ ಮೇ 12ರಂದು ಜಯನಗರ 7ನೇ ಬಡಾವಣೆಯಲ್ಲಿ ರಸ್ತೆ ಬದಿಯಲ್ಲಿ ಮಲಗಿದ್ದ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದನು. ​ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಮತ್ತೆ ಮೇ 18ರಂದು ಸಿಟಿ ಮಾರ್ಕೆಟ್ ಹಿಂಭಾಗದ ಕಾಂಪ್ಲೆಕ್ಸ್​​ನಲ್ಲಿ ಮಲಗಿದ್ದ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದನು. ಸಿಟಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಾಗಿ ಎರಡೂ ಠಾಣೆ ಪೊಲೀಸರು ಬಲೆ ಬೀಸಿದ್ದರು. ಇದೀಗ ಬನಶಂಕರಿ ಠಾಣೆ ಪೊಲೀಸರು ಆರೋಪಿ ಗಿರೀಶ್​ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ಬಾತ್​​ ರೂಮ್​ನ​ಲ್ಲಿ ಯುವತಿ ಶವ ಪತ್ತೆ ಕೇಸ್​: ಪ್ರಬುದ್ಧಳ ಕೈ ಕೋಯ್ದು ಕೊಲೆಗೈದ ಬಾಲಕ

ಡ್ರಗ್ ಪೆಡ್ಲರ್ ಬಂಧಿಸಿದ ಪೊಲೀಸರು

ನಗರದ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ಡ್ರಗ್ ಪೆಡ್ಲರ್ ರೂಪೇಶ್​​ನನ್ನು ಬಂಧಿಸಿದ್ದಾರೆ. ಆರೋಪಿ ರೂಪೇಶ್ ಆಫ್ರಿಕಾ, ನೈಜೀರಿಯನ್ ಪೆಡ್ಲರ್​ಗಳಿಂದ ಡ್ರಗ್ಸ್​​ ತರಿಸಿಕೊಳ್ಳುತ್ತಿದ್ದನು. ಬಳಿಕ ನಗರದಲ್ಲಿ ನಡೆಯುತ್ತಿದ್ದ ಪಾರ್ಟಿಗಳಿಗೆ ಡ್ರಗ್ಸ್​ ಸಪ್ಲೈ ಮಾಡುತ್ತಿದ್ದನು.

ಇದನ್ನು ತಿಳಿದ ಪೊಲೀಸರು ಆರೋಪಿ ರೂಪೇಶ್​ನನ್ನು ಬಂಧಿಸಿದ್ದಾರೆ. ಬಂಧಿತನಿಂದ 120 ಗ್ರಾಂ ಸಿಂಥೆಟಿಕ್ ಡ್ರಗ್, ಎಮ್​ಡಿಎಮ್​ಎ ವಶಕ್ಕೆ ಪಡೆದುಕೊಳ್ಳಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Rachappaji Naik S
Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ