Cyber Crime: ಬೆಂಗಳೂರಿನಲ್ಲಿ ಷೇರು ಹೂಡಿಕೆ ನೆಪದಲ್ಲಿ ₹5.17 ಕೋಟಿ ವಂಚನೆ

ಪ್ರತ್ಯೇಕ ಘಟನೆ: ಸೈಬರ್​ ವಂಚಕರ ಬಲೆಗೆ ಬಿದ್ದು ಬೆಂಗಳೂರಿನ ಅಶೋಕ್ ತಿರುಪಲಪ್ಪ ಎಂಬುವರು ಬರೊಬ್ಬರಿ 5.17 ಕೋಟಿ ರೂಪಾಯಿ ಕಳೆದುಕೊಂಡಿದ್ದಾರೆ. ಮತ್ತೊಂದು ಘಟನೆಯಲ್ಲಿ ಸಂಜಯನಗರದ ಆರ್​ಎಮ್​ವಿ 2ನೇ ಹಂತದಲ್ಲಿರುವ ಮಾಜಿ ಮೇಯರ್ ಆರ್.ನಾರಾಯಣಸ್ವಾಮಿ ಅವರ ಮನೆಯಲ್ಲಿನ ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನವಾಗಿದೆ.

Cyber Crime: ಬೆಂಗಳೂರಿನಲ್ಲಿ ಷೇರು ಹೂಡಿಕೆ ನೆಪದಲ್ಲಿ ₹5.17 ಕೋಟಿ ವಂಚನೆ
ಸಾಂದರ್ಭಿಕ ಚಿತ್ರ
Follow us
| Updated By: ವಿವೇಕ ಬಿರಾದಾರ

Updated on: Apr 21, 2024 | 7:52 AM

ಬೆಂಗಳೂರು, ಏಪ್ರಿಲ್​ 21: ನಗರದಲ್ಲಿ ಸೈಬರ್​ ಕ್ರೈಂ (Cyber Crime) ಪ್ರಕರಣಗಳು ದಿನದಿಂದ ದಿನಕ್ಕ ಹೆಚ್ಚಾಗುತ್ತಿವೆ. ಸೈಬರ್​ ವಂಚಕರ ಬಲೆಗೆ ಬಿದ್ದು ವ್ಯಕ್ತಿಯೊಬ್ಬರು 5.17 ಕೋಟಿ ರೂ. ಕಳೆದುಕೊಂಡಿದ್ದಾರೆ. ಅಶೋಕ್ ತಿರುಪಲಪ್ಪ ವಂಚನೆಗೊಳಗಾದ ವ್ಯಕ್ತಿ. ವಂಚಕರು ಅಶೋಕ್ ತಿರುಪಲಪ್ಪ ವಾಟ್ಸ್ ಆ್ಯಪ್​ಗೆ Www.byc-app.com ಎಂಬ ಲಿಂಕ್​ ಅನ್ನು ಕಳುಹಿಸಿ ತೆರೆಯಲು ಹೇಳಿದ್ದಾರೆ. ಬಳಿಕ ಲಿಂಕ್ ಓಪನ್ ಮಾಡಿ ಷೇರು ಖರೀದಿಸುವಂತೆ ಹೇಳಿದ್ದಾರೆ. ಇದರಿಂದ ನಿಮಗೆ ಅಧಿಕ ಲಾಭ ಬರುತ್ತೆ ಎಂದು ನಂಬಿಸಿದ್ದಾರೆ. ಅದರಂತೆ ಅಶೋಕ್ ತಿರುಪಲಪ್ಪ ಅವರು ಲಿಂಕ್​ ಓಪನ್​ ಮಾಡಿ ಆ್ಯಪ್ ಡೌನ್ ಲೋಡ್ ಮಾಡಿದ್ದಾರೆ.

ಬಳಿಕ ಅಶೋಕ್ ತಿರುಪಲಪ್ಪ ಅವರ ಅಕೌಂಟ್​​ನಿಂದ ವಂಚಕರು ಹಂತ ಹಂತವಾಗಿ ಹಣ ಕದ್ದಿದ್ದಾರೆ. ವಂಚಕರು ಅಶೋಕ್ ತಿರುಪಲಪ್ಪ ಅಕೌಂಟ್​​ನಿಂದ ಬರೊಬ್ಬರಿ 5.18 ಕೋಟಿ ಹಣ ದೋಚಿದ್ದಾರೆ. ಘಟನೆ ಸಂಬಂಧ ಸಿಟಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಇದೇ ಮೊದಲ ಬಾರಿಗೆ ಬೃಹತ್ ಮೊತ್ತದ ಹಣ ವಂಚಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಸೋದರ ಮಾವನ ಮನೆ ಲೂಟಿ ಮಾಡಿದ ಕಿಲಾಡಿ ಅಳಿಯ

ಮಾಜಿ ಮೇಯರ್ ಮನೆಯಲ್ಲಿ ಕಳ್ಳತನ, ಕೋಟಿ ಮೌಲ್ಯದ ಚಿನ್ನಾಭರಣ ಲೂಟಿ

ಬೆಂಗಳೂರು: ಸಂಜಯನಗರದ ಆರ್​ಎಮ್​ವಿ 2ನೇ ಹಂತದಲ್ಲಿರುವ ಮಾಜಿ ಮೇಯರ್ ಆರ್.ನಾರಾಯಣಸ್ವಾಮಿ ಅವರ ಮನೆಯಲ್ಲಿನ ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನವಾಗಿದೆ. ಸೆಕ್ಯೂರಿಟಿ ಗಾರ್ಡ್ ನರಬಹದ್ದೂರ ಶಾಯಿ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಮನೆಯನ್ನು ದೋಚಿ ಪರಾರಿಯಾಗಿದ್ದಾನೆ.

99,75,000 ರೂ. ಮೌಲ್ಯದ 1,425 ಗ್ರಾಂ. ಚಿನ್ನಾಭರಣ, 18,92,000 ರೂ. ಮೌಲ್ಯದ 22 ಕೆ.ಜಿ ಬೆಳ್ಳಿ ವಸ್ತುಗಳು, 6.50 ಲಕ್ಷ ರೂ. ಮೌಲ್ಯದ 3 ವಾಚ್​ಗಳು, 4 ಲಕ್ಷ ರೂ. ನಗದು. ಒಟ್ಟು 1,29,17,000 ಮೌಲ್ಯದ ಚಿನ್ನಾಭರಣ, ಬೆಳ್ಳಿ, ವಾಚ್​ಗಳು ಮತ್ತು ನಗದು ಕಳ್ಳತನವಾಗಿದೆ. ಮಾಜಿ ಮೇಯರ್​ ಆರ್.ನಾರಾಯಣ ಸ್ವಾಮಿ ಅವರು ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಸೆಕ್ಯೂರಿಟಿ ಗಾರ್ಡ್ ನರಬಹದ್ದೂರ ಶಾಯಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು