AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyber Crime: ಬೆಂಗಳೂರಿನಲ್ಲಿ ಷೇರು ಹೂಡಿಕೆ ನೆಪದಲ್ಲಿ ₹5.17 ಕೋಟಿ ವಂಚನೆ

ಪ್ರತ್ಯೇಕ ಘಟನೆ: ಸೈಬರ್​ ವಂಚಕರ ಬಲೆಗೆ ಬಿದ್ದು ಬೆಂಗಳೂರಿನ ಅಶೋಕ್ ತಿರುಪಲಪ್ಪ ಎಂಬುವರು ಬರೊಬ್ಬರಿ 5.17 ಕೋಟಿ ರೂಪಾಯಿ ಕಳೆದುಕೊಂಡಿದ್ದಾರೆ. ಮತ್ತೊಂದು ಘಟನೆಯಲ್ಲಿ ಸಂಜಯನಗರದ ಆರ್​ಎಮ್​ವಿ 2ನೇ ಹಂತದಲ್ಲಿರುವ ಮಾಜಿ ಮೇಯರ್ ಆರ್.ನಾರಾಯಣಸ್ವಾಮಿ ಅವರ ಮನೆಯಲ್ಲಿನ ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನವಾಗಿದೆ.

Cyber Crime: ಬೆಂಗಳೂರಿನಲ್ಲಿ ಷೇರು ಹೂಡಿಕೆ ನೆಪದಲ್ಲಿ ₹5.17 ಕೋಟಿ ವಂಚನೆ
ಸಾಂದರ್ಭಿಕ ಚಿತ್ರ
ರಾಚಪ್ಪಾಜಿ ನಾಯ್ಕ್
| Edited By: |

Updated on: Apr 21, 2024 | 7:52 AM

Share

ಬೆಂಗಳೂರು, ಏಪ್ರಿಲ್​ 21: ನಗರದಲ್ಲಿ ಸೈಬರ್​ ಕ್ರೈಂ (Cyber Crime) ಪ್ರಕರಣಗಳು ದಿನದಿಂದ ದಿನಕ್ಕ ಹೆಚ್ಚಾಗುತ್ತಿವೆ. ಸೈಬರ್​ ವಂಚಕರ ಬಲೆಗೆ ಬಿದ್ದು ವ್ಯಕ್ತಿಯೊಬ್ಬರು 5.17 ಕೋಟಿ ರೂ. ಕಳೆದುಕೊಂಡಿದ್ದಾರೆ. ಅಶೋಕ್ ತಿರುಪಲಪ್ಪ ವಂಚನೆಗೊಳಗಾದ ವ್ಯಕ್ತಿ. ವಂಚಕರು ಅಶೋಕ್ ತಿರುಪಲಪ್ಪ ವಾಟ್ಸ್ ಆ್ಯಪ್​ಗೆ Www.byc-app.com ಎಂಬ ಲಿಂಕ್​ ಅನ್ನು ಕಳುಹಿಸಿ ತೆರೆಯಲು ಹೇಳಿದ್ದಾರೆ. ಬಳಿಕ ಲಿಂಕ್ ಓಪನ್ ಮಾಡಿ ಷೇರು ಖರೀದಿಸುವಂತೆ ಹೇಳಿದ್ದಾರೆ. ಇದರಿಂದ ನಿಮಗೆ ಅಧಿಕ ಲಾಭ ಬರುತ್ತೆ ಎಂದು ನಂಬಿಸಿದ್ದಾರೆ. ಅದರಂತೆ ಅಶೋಕ್ ತಿರುಪಲಪ್ಪ ಅವರು ಲಿಂಕ್​ ಓಪನ್​ ಮಾಡಿ ಆ್ಯಪ್ ಡೌನ್ ಲೋಡ್ ಮಾಡಿದ್ದಾರೆ.

ಬಳಿಕ ಅಶೋಕ್ ತಿರುಪಲಪ್ಪ ಅವರ ಅಕೌಂಟ್​​ನಿಂದ ವಂಚಕರು ಹಂತ ಹಂತವಾಗಿ ಹಣ ಕದ್ದಿದ್ದಾರೆ. ವಂಚಕರು ಅಶೋಕ್ ತಿರುಪಲಪ್ಪ ಅಕೌಂಟ್​​ನಿಂದ ಬರೊಬ್ಬರಿ 5.18 ಕೋಟಿ ಹಣ ದೋಚಿದ್ದಾರೆ. ಘಟನೆ ಸಂಬಂಧ ಸಿಟಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಇದೇ ಮೊದಲ ಬಾರಿಗೆ ಬೃಹತ್ ಮೊತ್ತದ ಹಣ ವಂಚಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಸೋದರ ಮಾವನ ಮನೆ ಲೂಟಿ ಮಾಡಿದ ಕಿಲಾಡಿ ಅಳಿಯ

ಮಾಜಿ ಮೇಯರ್ ಮನೆಯಲ್ಲಿ ಕಳ್ಳತನ, ಕೋಟಿ ಮೌಲ್ಯದ ಚಿನ್ನಾಭರಣ ಲೂಟಿ

ಬೆಂಗಳೂರು: ಸಂಜಯನಗರದ ಆರ್​ಎಮ್​ವಿ 2ನೇ ಹಂತದಲ್ಲಿರುವ ಮಾಜಿ ಮೇಯರ್ ಆರ್.ನಾರಾಯಣಸ್ವಾಮಿ ಅವರ ಮನೆಯಲ್ಲಿನ ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನವಾಗಿದೆ. ಸೆಕ್ಯೂರಿಟಿ ಗಾರ್ಡ್ ನರಬಹದ್ದೂರ ಶಾಯಿ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಮನೆಯನ್ನು ದೋಚಿ ಪರಾರಿಯಾಗಿದ್ದಾನೆ.

99,75,000 ರೂ. ಮೌಲ್ಯದ 1,425 ಗ್ರಾಂ. ಚಿನ್ನಾಭರಣ, 18,92,000 ರೂ. ಮೌಲ್ಯದ 22 ಕೆ.ಜಿ ಬೆಳ್ಳಿ ವಸ್ತುಗಳು, 6.50 ಲಕ್ಷ ರೂ. ಮೌಲ್ಯದ 3 ವಾಚ್​ಗಳು, 4 ಲಕ್ಷ ರೂ. ನಗದು. ಒಟ್ಟು 1,29,17,000 ಮೌಲ್ಯದ ಚಿನ್ನಾಭರಣ, ಬೆಳ್ಳಿ, ವಾಚ್​ಗಳು ಮತ್ತು ನಗದು ಕಳ್ಳತನವಾಗಿದೆ. ಮಾಜಿ ಮೇಯರ್​ ಆರ್.ನಾರಾಯಣ ಸ್ವಾಮಿ ಅವರು ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಸೆಕ್ಯೂರಿಟಿ ಗಾರ್ಡ್ ನರಬಹದ್ದೂರ ಶಾಯಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ