Cyber Crime: ಬೆಂಗಳೂರಿನಲ್ಲಿ ಷೇರು ಹೂಡಿಕೆ ನೆಪದಲ್ಲಿ ₹5.17 ಕೋಟಿ ವಂಚನೆ

ಪ್ರತ್ಯೇಕ ಘಟನೆ: ಸೈಬರ್​ ವಂಚಕರ ಬಲೆಗೆ ಬಿದ್ದು ಬೆಂಗಳೂರಿನ ಅಶೋಕ್ ತಿರುಪಲಪ್ಪ ಎಂಬುವರು ಬರೊಬ್ಬರಿ 5.17 ಕೋಟಿ ರೂಪಾಯಿ ಕಳೆದುಕೊಂಡಿದ್ದಾರೆ. ಮತ್ತೊಂದು ಘಟನೆಯಲ್ಲಿ ಸಂಜಯನಗರದ ಆರ್​ಎಮ್​ವಿ 2ನೇ ಹಂತದಲ್ಲಿರುವ ಮಾಜಿ ಮೇಯರ್ ಆರ್.ನಾರಾಯಣಸ್ವಾಮಿ ಅವರ ಮನೆಯಲ್ಲಿನ ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನವಾಗಿದೆ.

Cyber Crime: ಬೆಂಗಳೂರಿನಲ್ಲಿ ಷೇರು ಹೂಡಿಕೆ ನೆಪದಲ್ಲಿ ₹5.17 ಕೋಟಿ ವಂಚನೆ
ಸಾಂದರ್ಭಿಕ ಚಿತ್ರ
Edited By: ವಿವೇಕ ಬಿರಾದಾರ

Updated on: Apr 21, 2024 | 7:52 AM

ಬೆಂಗಳೂರು, ಏಪ್ರಿಲ್​ 21: ನಗರದಲ್ಲಿ ಸೈಬರ್​ ಕ್ರೈಂ (Cyber Crime) ಪ್ರಕರಣಗಳು ದಿನದಿಂದ ದಿನಕ್ಕ ಹೆಚ್ಚಾಗುತ್ತಿವೆ. ಸೈಬರ್​ ವಂಚಕರ ಬಲೆಗೆ ಬಿದ್ದು ವ್ಯಕ್ತಿಯೊಬ್ಬರು 5.17 ಕೋಟಿ ರೂ. ಕಳೆದುಕೊಂಡಿದ್ದಾರೆ. ಅಶೋಕ್ ತಿರುಪಲಪ್ಪ ವಂಚನೆಗೊಳಗಾದ ವ್ಯಕ್ತಿ. ವಂಚಕರು ಅಶೋಕ್ ತಿರುಪಲಪ್ಪ ವಾಟ್ಸ್ ಆ್ಯಪ್​ಗೆ Www.byc-app.com ಎಂಬ ಲಿಂಕ್​ ಅನ್ನು ಕಳುಹಿಸಿ ತೆರೆಯಲು ಹೇಳಿದ್ದಾರೆ. ಬಳಿಕ ಲಿಂಕ್ ಓಪನ್ ಮಾಡಿ ಷೇರು ಖರೀದಿಸುವಂತೆ ಹೇಳಿದ್ದಾರೆ. ಇದರಿಂದ ನಿಮಗೆ ಅಧಿಕ ಲಾಭ ಬರುತ್ತೆ ಎಂದು ನಂಬಿಸಿದ್ದಾರೆ. ಅದರಂತೆ ಅಶೋಕ್ ತಿರುಪಲಪ್ಪ ಅವರು ಲಿಂಕ್​ ಓಪನ್​ ಮಾಡಿ ಆ್ಯಪ್ ಡೌನ್ ಲೋಡ್ ಮಾಡಿದ್ದಾರೆ.

ಬಳಿಕ ಅಶೋಕ್ ತಿರುಪಲಪ್ಪ ಅವರ ಅಕೌಂಟ್​​ನಿಂದ ವಂಚಕರು ಹಂತ ಹಂತವಾಗಿ ಹಣ ಕದ್ದಿದ್ದಾರೆ. ವಂಚಕರು ಅಶೋಕ್ ತಿರುಪಲಪ್ಪ ಅಕೌಂಟ್​​ನಿಂದ ಬರೊಬ್ಬರಿ 5.18 ಕೋಟಿ ಹಣ ದೋಚಿದ್ದಾರೆ. ಘಟನೆ ಸಂಬಂಧ ಸಿಟಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಇದೇ ಮೊದಲ ಬಾರಿಗೆ ಬೃಹತ್ ಮೊತ್ತದ ಹಣ ವಂಚಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಸೋದರ ಮಾವನ ಮನೆ ಲೂಟಿ ಮಾಡಿದ ಕಿಲಾಡಿ ಅಳಿಯ

ಮಾಜಿ ಮೇಯರ್ ಮನೆಯಲ್ಲಿ ಕಳ್ಳತನ, ಕೋಟಿ ಮೌಲ್ಯದ ಚಿನ್ನಾಭರಣ ಲೂಟಿ

ಬೆಂಗಳೂರು: ಸಂಜಯನಗರದ ಆರ್​ಎಮ್​ವಿ 2ನೇ ಹಂತದಲ್ಲಿರುವ ಮಾಜಿ ಮೇಯರ್ ಆರ್.ನಾರಾಯಣಸ್ವಾಮಿ ಅವರ ಮನೆಯಲ್ಲಿನ ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನವಾಗಿದೆ. ಸೆಕ್ಯೂರಿಟಿ ಗಾರ್ಡ್ ನರಬಹದ್ದೂರ ಶಾಯಿ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಮನೆಯನ್ನು ದೋಚಿ ಪರಾರಿಯಾಗಿದ್ದಾನೆ.

99,75,000 ರೂ. ಮೌಲ್ಯದ 1,425 ಗ್ರಾಂ. ಚಿನ್ನಾಭರಣ, 18,92,000 ರೂ. ಮೌಲ್ಯದ 22 ಕೆ.ಜಿ ಬೆಳ್ಳಿ ವಸ್ತುಗಳು, 6.50 ಲಕ್ಷ ರೂ. ಮೌಲ್ಯದ 3 ವಾಚ್​ಗಳು, 4 ಲಕ್ಷ ರೂ. ನಗದು. ಒಟ್ಟು 1,29,17,000 ಮೌಲ್ಯದ ಚಿನ್ನಾಭರಣ, ಬೆಳ್ಳಿ, ವಾಚ್​ಗಳು ಮತ್ತು ನಗದು ಕಳ್ಳತನವಾಗಿದೆ. ಮಾಜಿ ಮೇಯರ್​ ಆರ್.ನಾರಾಯಣ ಸ್ವಾಮಿ ಅವರು ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಸೆಕ್ಯೂರಿಟಿ ಗಾರ್ಡ್ ನರಬಹದ್ದೂರ ಶಾಯಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
Follow Us