Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಬರ್​ ಕ್ರೈಂ: 5.17 ಕೋಟಿ ರೂ. ಕಳೆದುಕೊಂಡ ಬೆಂಗಳೂರು ಉದ್ಯಮಿ

ಬೆಂಗಳೂರಿನಲ್ಲಿ ಸೈಬರ್​ ಕಳ್ಳರ ಹಾವಳಿ ಹೆಚ್ಚಾಗಿದೆ. ಅನೇಕ ವಿಧವಾದ ಸೈಬರ್​ ಕಳ್ಳತನ ಪ್ರಕರಣ ಬೆಳಕಿಗೆ ಬರುತ್ತಿವೆ. ಸೈಬರ್​ ಕಳ್ಳರ ಹಾವಳಿ ಪೊಲೀಸರ ನಿದ್ದೆಗೆಡೆಸಿದೆ. ಸೈಬರ್​ ಕ್ರೈಂ ಬಗ್ಗೆ ಪೊಲೀಸರು ಅದೆಷ್ಟು ಜಾಗೃತಿ ಮೂಡಿಸುತ್ತಿದ್ದರೂ, ಜನರು ಮಾತ್ರ ವಂಚನೆಗೆ ಒಳಗಾಗುತ್ತಿದ್ದಾರೆ. ಇದೀಗ ಉದ್ಯಮಿಯೊಬ್ಬರು ಸೈಬರ್​ ಜಾಲದಲ್ಲಿ ಸಿಲುಕಿ 5.17 ಕೋಟಿ ರೂ ಕಳೆದುಕೊಂಡಿದ್ದಾರೆ.

ಸೈಬರ್​ ಕ್ರೈಂ: 5.17 ಕೋಟಿ ರೂ. ಕಳೆದುಕೊಂಡ ಬೆಂಗಳೂರು ಉದ್ಯಮಿ
ಸಾಂದರ್ಭಿಕ ಚಿತ್ರ
Follow us
Praveen Sahu
| Updated By: ವಿವೇಕ ಬಿರಾದಾರ

Updated on: May 06, 2024 | 12:06 PM

ಬೆಂಗಳೂರು, ಮೇ 06: ನಗರದಲ್ಲಿ ಸೈಬರ್​ (Cyber Crime) ಕಳ್ಳರ ಹಾವಳಿ ಮುಂದುವರೆದಿದೆ. ಸೈಬರ್​ ಕಳ್ಳರ ಜಾಲಕ್ಕೆ ಸಿಲುಕಿ ಅದೆಷ್ಟೋ ಜನರು ಕೋಟ್ಯಾಂತರ ರೂಪಾಯಿ ಹಣ ಕಳೆದುಕೊಂಡಿದ್ದಾರೆ. ಇದೀಗ ಸೈಬರ್​​ ಕಳ್ಳರ ಜಾಲಕ್ಕೆ ಸಿಲುಕಿ ವ್ಯಕ್ತಿಯೊಬ್ಬ 5.17 ಕೋಟಿ ರೂ. ಕಳೆದುಕೊಂಡಿದ್ದಾರೆ. ಉದ್ಯಮಿ ಅಶೋಕ್ ತಿರುಪಲಪ್ಪ ವಂಚನೆಗೆ ಒಳಗಾದವರು. ಇದೇ ವರ್ಷ ಫೆಬ್ರವರಿ 3 ರಂದು ಅಶೋಕ್​ ಅವರ ವಾಟ್ಸಪ್​ಗೆ ಅಪರಿಚಿತ ನಂಬರ್​​ನಿಂದ https://www.bys-app.com ಬರುತ್ತದೆ. ಆದರೆ ಅಶೋಕ್​ ಈ ಲಿಂಕ್​ ಅನ್ನು ತೆರೆದಿರುವುದಿಲ್ಲ.

ಸ್ವಲ್ಪ ಸಮಯದಲ್ಲಿ ಬಳಿಕ ಅಶೋಕ್​ ಅವರನ್ನು ವೈ-5-ಎವರ್ ಕೋರ್ ಫೈನಾನ್ಸಿಯಲ್ ಲೀಡರ್ ಎಂಬ ವಾಟ್ಸಪ್​ ಗ್ರೂಪ್​ಗೆ ಆ್ಯಡ್​ ಮಾಡಲಾಗುತ್ತದೆ. ಬಳಿಕ ತೇಜಸ್ ಖೋಡೆ, ಗೋಪಾಲ್ ಕಾವಲ್ರೆಡ್ಡಿ, ಕೇರೋಲಿನ್ ಕ್ರುಕ್ಸ್ ಎಂಬ ಅಪರಿಚಿತರು ಅಶೋಕ್​ ಅವರಿಗೆ ಕರೆ ಮಾಡಿ “ಲಿಂಕ್ ಮೇಲೆ ಕ್ಲಿಕ್​ ಮಾಡಿ ಆ್ಯಪ್​ ಡೌನ್​​ಲೋಡ್​ ಮಾಡಿ. ಆ ಆ್ಯಪ್​ನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಬರುತ್ತದೆ ಎಂದು ಪ್ರೇರೇಪಿಸಿದ್ದಾರೆ.

ಇದನ್ನೂ ಓದಿ: ವಿಡಿಯೋ ಕಾಲ್​​ನಲ್ಲಿ ಬೆಂಗಳೂರು ಮಹಿಳೆಯ ಬೆತ್ತಲಾಗಿಸಿ 14.57 ಲಕ್ಷ ರೂ. ಎಗರಿಸಿದ ಸೈಬರ್ ವಂಚಕರು!

ಸ್ವಲ್ಪ ದಿನಗಳ ಬಳಿಕ ಅಶೋಕ್ ಆ್ಯಪ್​ ಡೌಲೋಡ್​ ಮಾಡುತ್ತಾರೆ. ಬಳಿಕ ಅಶೋಕ್​ ತಮ್ಮ ಎಸ್​ಬಿಐ ಅಕೌಂಟ್​ನಿಂದ ಆರೋಪಿಗಳು ಸೂಚಿಸಿದ ಅಕೌಂಟ್​ಗೆ ಹಂತ ಹಂತವಾಗಿ ಹಣ ಹಾಕಲು ಆರಂಭಿಸುತ್ತಾರೆ. ಹೀಗೆ ಬರೊಬ್ಬರಿ 5.17 ಕೋಟಿ ರೂ. ಹಣವನ್ನು ಅಶೋಕ್​ ಆರೋಪಿಗಳು ಸೂಚಿಸಿದ ಅಕೌಂಟ್​ಗೆ ಹಾಕುತ್ತಾರೆ. ಇದಾದ ಬಳಿಕ ಆರೋಪಿಗಳು ಮತ್ತೆ ಅಶೋಕ್​ ಅವರನ್ನು ಸಂಪರ್ಕಿಸಿ ಇನ್ನಷ್ಟು ಹಣ ಹೂಡಿಕೆ ಮಾಡುವಂತೆ ಹೇಳುತ್ತಾರೆ.

ಆಗ ಅಶೋಕ್​ ಇದಕ್ಕೆ ಒಪ್ಪದೆ, ಮೊದಲು ಹೂಡಿಕೆ ಮಾಡಿದ್ದ ಹಣವನ್ನು ಮರಳಿ ಪಡೆಯಲು ಆ್ಯಪ್​​ನಲ್ಲಿ ಪ್ರಯತ್ನಿಸುತ್ತಾರೆ. ಆದರೆ ಅದು ಸಾಧ್ಯವಾಗುವುದಿಲ್ಲ. ಆಗ ಅಶೋಕ್​ ಅವರಿಗೆ ತಾನು ಮೋಸ ಹೋಗಿದ್ದೇನೆ ಎಂದು ತಿಳಿಯುತ್ತದೆ. ಕೊನೆಗೆ ಅಶೋಕ್​ ಸೈಬರ್​ ಕ್ರೈಂ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸುತ್ತಾರೆ. ಅಶೋಕ್​ ದೂರಿನ ಅನ್ವಯ ಸೈಬರ್​ ಕ್ರೈಂ ಪೊಲೀಸರು Fyers Securities Pvt Ltd, Eercore Company ಎಂಬ ಕಂಪನಿಗಳ ಮೇಲೆ ಎಫ್​ಐಆರ್ ದಾಖಲಿಸಿದ್ದಾರೆ. ಸೈಬರ್ ಕ್ರೈಂ ಪೊಲೀಸರು ತನಿಖೆ ನಡೆಸಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್