AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಬಾಡಿಗೆ ಮನೆ ನೋಡಲು ಹೋಗಿದ್ದ ವಿದ್ಯಾರ್ಥಿಗಳನ್ನು ಕೂಡಿಹಾಕಿ ಹಲ್ಲೆ

ಇಬ್ಬರು ವಿದ್ಯಾರ್ಥಿಗಳು ಯಲಹಂಕ ನ್ಯೂ ಟೌನ್ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಬಾಡಿಗೆ ಮನೆ ನೋಡಲು ಹೋಗಿದ್ದರು. ಈ ವೇಳೆ ಗುಂಪೊಂದು ಈ ಇಬ್ಬರನ್ನೂ ಅಪಹರಿಸಿ ಕೋಣೆಯಲ್ಲಿ ಕೂಡಿಹಾಕಿದೆ. ಬಳಿಕ ಅವರ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿ, ಸಿಗರೇಟಿನಿಂದ ಸುಟ್ಟಿದ್ದಾರೆ.

ಬೆಂಗಳೂರು: ಬಾಡಿಗೆ ಮನೆ ನೋಡಲು ಹೋಗಿದ್ದ ವಿದ್ಯಾರ್ಥಿಗಳನ್ನು ಕೂಡಿಹಾಕಿ ಹಲ್ಲೆ
ಸಾಂದರ್ಭಿಕ ಚಿತ್ರ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: ವಿವೇಕ ಬಿರಾದಾರ|

Updated on: Apr 24, 2024 | 1:46 PM

Share

ಬೆಂಗಳೂರು, ಏಪ್ರಿಲ್​ 24: ಬಾಡಿಗೆ ಮನೆ (Rented house) ನೋಡಲು ಹೋಗಿದ್ದ ವಿದ್ಯಾರ್ಥಿಗಳನ್ನು (Students) ಕೂಡಿ ಹಾಕಿ ಹಲ್ಲೆ ಮಾಡಿದ ಘಟನೆ ಯಲಹಂಕ ನ್ಯೂ ಟೌನ್ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿದ್ಯಾರ್ಥಿಗಳಾದ ಕೃಷ್ಣ ಬಾಜಪೇಯಿ ಮತ್ತು ಯುವರಾಜ್ ಮೇಲೆ ಹಲ್ಲೆ ಮಾಡಲಾಗಿದೆ.

ಇಬ್ಬರೂ ರಾಜಾನುಕುಂಟೆಯ ಖಾಸಗಿ ಕಾಲೇಜಿನ ವ್ಯಾಸಾಂಗ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳು ಬಾಡಿಗೆ ಮನೆ ನೋಡಲು ಹೋಗಿದ್ದಾಗ, ಗುಂಪೊಂದು, ಇಬ್ಬರನ್ನೂ ಅಪಹರಿಸಿದೆ. ಬಳಿಕ ಒಂದು ಕೋಣೆಯಲ್ಲಿ ಕೂಡಿಹಾಕಿ ಇಬ್ಬರ ಮೇಲೆ ರಾಡ್​​ನಿಂದ ಹಲ್ಲೆ ನಡೆಸಿ ಸಿಗರೇಟ್​​ನಿಂದ ಸುಟ್ಟಿದೆ. ಮತ್ತೊಂದು ವಿದ್ಯಾರ್ಥಿಗಳ ಗುಂಪು ಕೃಷ್ಣರ ಮೇಲೆ ಹಲ್ಲೆ ನಡೆಸಿ, ಬೆತ್ತಲೆಗೊಳಿಸಿ ವಿಡಿಯೋ ರೆಕಾರ್ಡ್ ಮಾಡಿದೆ. ಅಲ್ಲದೆ 50 ಸಾವಿರಕ್ಕೂ ಹೆಚ್ಚು ಹಣ ವರ್ಗಾವಣೆ ಮಾಡಿಸಿಕೊಂಡಿದೆ.

ಕಾಲೇಜಿನಲ್ಲಿ ಎರಡು ಗುಂಪು ಕಟ್ಟಿಕೊಂಡಿದ್ದ ವಿದ್ಯಾರ್ಥಿಗಳು

15 ದಿನಗಳ ಹಿಂದೆ ಕಾಲೇಜಿನಲ್ಲಿ ಎರಡು ಗ್ಯಾಂಗ್​ ನಡುವೆ ಗಲಾಟೆ ಆಗಿತ್ತು. ಇದೇ ವಿಚಾರಕ್ಕೆ ಒಂದು ಗ್ಯಾಂಗ್ ಈ ಇಬ್ಬರನ್ನು ಅಪಹರಿಸಿ ಹಲ್ಲೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಯಲಹಂಕ ನ್ಯೂಟೌನ್ ಪೊಲೀಸ್​​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, 7 ಆರೋಪಿಗಳನ್ನು ಬಂಧಿಸಿದ್ದಾರೆ. ಹಲ್ಲೆಗೊಳಗಾದವರು, ಕೃತ್ಯ ಎಸಗಿದವರು ಹೊರರಾಜ್ಯದ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ. ವಿಚಾರಣೆ ವೇಳೆ ಆರೋಪಿಗಳು 5 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದ ಮಾಹಿತಿ ಬಹಿರಂಗವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ