AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಕ್ಕದ ಮನೆ ದಂಪತಿಯ ಸರಸ ಸಲ್ಲಾಪದಿಂದ ಕಿರಿಕಿರಿ, ಪೊಲೀಸ್​ ಠಾಣೆಗೆ ದೂರು ನೀಡಿದ ಮಹಿಳೆ

ಬೆಂಗಳೂರಿನ ಪೊಲೀಸ್​ ಠಾಣೆಯೊಂದರಲ್ಲಿ ವಿಚಿತ್ರ ದೂರು ದಾಖಲಾಗಿದೆ. ಪಕ್ಕದ ಮನೆಯ ದಂಪತಿ ಸರಸ ಸಲ್ಲಾಪದಿಂದ ಕಿರಿಕಿರಿಯಾಗುತ್ತಿದೆ ಎಂದು 44 ವರ್ಷದ ಮಹಿಳೆ ಗಿರಿನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 504, 506, 509, 34ರಡಿ ಪ್ರಕರಣ ದಾಖಲಾಗಿದೆ.

ಪಕ್ಕದ ಮನೆ ದಂಪತಿಯ ಸರಸ ಸಲ್ಲಾಪದಿಂದ ಕಿರಿಕಿರಿ, ಪೊಲೀಸ್​ ಠಾಣೆಗೆ ದೂರು ನೀಡಿದ ಮಹಿಳೆ
ಪಕ್ಕದ ಮನೆ ದಂಪತಿಯ ಸರಸ ಸಲ್ಲಾಪದಿಂದ ಕಿರಿಕಿರಿ, ಪೊಲೀಸ್​ ಠಾಣೆಗೆ ದೂರು
Shivaprasad B
| Edited By: |

Updated on: Mar 20, 2024 | 8:49 AM

Share

ಬೆಂಗಳೂರು, ಮಾರ್ಚ್​ 20: ಬೆಂಗಳೂರಿನ (Bengaluru) ಗಿರಿನಗರ ಪೊಲೀಸ್ (Police)​ ಠಾಣೆಯಲ್ಲಿ ವಿಚಿತ್ರ ದೂರೊಂದು ದಾಖಲಾಗಿದೆ. ಪಕ್ಕದ ಮನೆ ದಂಪತಿ ಸರಸ ಸಲ್ಲಾಪದಿಂದ ಕಿರಿಕಿರಿಯಾಗುತ್ತಿದೆ ಎಂದು 44 ವರ್ಷದ ಮಹಿಳೆಯೊಬ್ಬರು ದೂರು ದಾಖಲಸಿದ್ದಾರೆ. ಆವಲಹಳ್ಳಿ, ಬಿಡಿಎ ಲೇಔಟ್​ ನಲ್ಲಿ ಮಹಿಳೆ ವಾಸವಾಗಿದ್ದಾರೆ. ಮಹಿಳೆಯ ಮನೆಯ ಬಾಗಿಲಿಗೆ ಪಕ್ಕದ ಮನೆಯ ಬೆಡ್​ ರೂಮ್​ ಇದೆ. ಪಕ್ಕದ ಮನೆಯಲ್ಲಿ ವಾಸವಾಗಿರುವ ದಂಪತಿ ಬೆಡ್ ರೂಮ್ ಕಿಟಕಿ ತೆರೆದು ಸರಸ ಸಲ್ಲಾಪದಲ್ಲಿ ತೊಡಗುವ ಮೂಲಕ ಬಹಳ ವಿಕೃತ ಮತ್ತು ಅಸಹ್ಯ ಮನಸ್ಥಿತಿಯಿಂದ ನಡೆದುಕೊಂಡಿದ್ದಾರೆ.

ಈ ಬಗ್ಗೆ, ಬಹಳ ಮುಜುಗರಕ್ಕೆ ಒಳಗಾಗಿ ಮಹಿಳೆ, ದಯವಿಟ್ಟು ಬೆಡ್ ರೂಮ್ ಕಿಟಕಿ ಹಾಕಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಇದಕ್ಕೆ ಪಕ್ಕದ ಮನೆಯ ವ್ಯಕ್ತಿ ಅವಾಚ್ಯ ಶಬ್ದಗಳಿಂದ ಮಹಿಳೆ ಹಾಗೂ ಅವರ ಕುಟುಂಬದ ಸದಸ್ಯರಿಗೆ ನಿಂದಿಸಿದ್ದಾನೆ. ಅಲ್ಲದೆ ಮಹಿಳೆ ಮೇಲೆ ಅತ್ಯಾಚಾರ ಎಸಗುವುದಾಗಿ ಮತ್ತು ಕೊಲೆ, ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಅಲ್ಲದೆ ಪಕ್ಕದ ಮನೆಯ ಮನೆ ಮಾಲೀಕ ಚಿಕ್ಕಣ್ಣ ಮತ್ತು ಅವರ ಮಗ ಮಂಜುನಾಥ್ ಮಹಿಳೆ ಕುಟುಂಬದ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ.

ಇದನ್ನೂ ಓದಿ: ಅನೈತಿಕ ಸಂಬಂಧದ ಶಂಕೆ; ಮಾರಕಾಸ್ತ್ರಗಳಿಂದ ಕೊಚ್ಚಿ ಜೋಡಿ ಕೊಲೆ

ಅಲ್ಲದೆ ಕೆಲವು ಯುವಕರನ್ನು ಕರೆಸಿ, ಎಲ್ಲರೂ ತುಂಬಾ ಅವಾಚ್ಯ ಶಬ್ದಗಳಿಂದ ನಿಂದಿಸಿ ಮಹಿಳೆ ಮತ್ತು ಮಹಿಳೆಯ ಕುಟುಂಬಕ್ಕೆ ಬೆದರಿಕೆ ಹಾಕಿದ್ದಾರೆ. ಇವರಿಂದ ಸೂಕ್ತ ರಕ್ಷಣೆ ನೀಡಿ ಮತ್ತು ಇವರುಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮಹಿಳೆ ದೂರು ದಾಖಲಿಸಿದ್ದಾರೆ.

ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 504, 506, 509, 34ರಡಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು!
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು!