AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿ ವಿಶೇಷ ದರ್ಶನ ಮಾಡಿಸುತ್ತೇನೆಂದು ಟೀಂ ಇಂಡಿಯಾದ ಮಾಜಿ ಕ್ಯಾಪ್ಟನ್‌ ಧೋನಿ ಮ್ಯಾನೇಜರ್‌ಗೆ ವಂಚನೆ

ಕಳೆದ ವರ್ಷ ಅಕ್ಟೋಬರ್​​ 26 ರಂದು ಅಪರಿಚಿತ ವ್ಯಕ್ತಿಯೊಬ್ಬ ಎಮ್​ಎಸ್​ಧೋನಿ ಅವರ ಮ್ಯಾನೇಜರ್ ಸ್ವಾಮಿನಾಥನ್​ ಅವರಿಗೆ ಕರೆ ಮಾಡಿ ನಾನು ಎನ್​​. ಎಸ್​​ ನಕುಲ್​​ ಐಎಎಸ್ ಅಧಿಕಾರಿಯಾಗಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪಿಎ ಎಂದು ಪರಿಚಯಿಸಿಕೊಂಡಿದ್ದಾನೆ. ಮುಂದೇನಾಯ್ತು ಈ ಸ್ಟೋರಿ ಓದಿ..

ತಿರುಪತಿ ವಿಶೇಷ ದರ್ಶನ ಮಾಡಿಸುತ್ತೇನೆಂದು ಟೀಂ ಇಂಡಿಯಾದ ಮಾಜಿ ಕ್ಯಾಪ್ಟನ್‌ ಧೋನಿ ಮ್ಯಾನೇಜರ್‌ಗೆ ವಂಚನೆ
ಎಮ್​ಎಸ್​ ಧೋನಿ, ಎಫ್​ಐಆರ್​​
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Feb 03, 2024 | 8:47 AM

Share

ಬೆಂಗಳೂರು, ಫೆಬ್ರವರಿ 03: ಭಾರತ ಪುರುಷರ ಕ್ರಿಕೆಟ್​ ತಂಡದ ಮಾಜಿ ನಾಯಕ ಎಮ್​​ಎಸ್​​ ಧೋನಿ (MS Dhoni) ಅವರ ಮ್ಯಾನೇಜರ್ ಅವರಿಗೆ ವಂಚಿಸಲಾಗಿದ್ದು, ಹೆಚ್​ಎಸ್​ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಿರುಪತಿಯಲ್ಲಿ (Tirupati) ವಿಶೇಷ ದರ್ಶನ ಮಾಡಿಸುತ್ತೇನೆ ಅಂತ ಹೇಳಿ ಎಮ್​ಎಸ್​ಧೋನಿ ಅವರ ಮ್ಯಾನೇಜರ್ ಸ್ಚಾಮಿನಾಥನ್ ಅವರಿಂದ  6.5 ಲಕ್ಷ ರೂ. ಪಡೆದು ವಂಚಿಸಲಾಗಿದೆ.

ಕಳೆದ ವರ್ಷ ಅಕ್ಟೋಬರ್​​ 26 ರಂದು ಅಪರಿಚಿತ ವ್ಯಕ್ತಿಯೊಬ್ಬ ಸ್ವಾಮಿನಾಥನ್​ ಅವರಿಗೆ ಕರೆ ಮಾಡಿ ನಾನು ಎನ್​​. ಎಸ್​​ ನಕುಲ್​​ ಐಎಎಸ್ ಅಧಿಕಾರಿಯಾಗಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪಿಎ ಎಂದು ಪರಿಚಯಿಸಿಕೊಂಡಿದ್ದಾನೆ. ಬಳಿಕ ನ್ಯಾಯಾಧೀಶರಾದ ಕೆಸಿ ಭಾನು ಅವರ ಮಗ ಸಂದೀಪ್​​ ಅವರು ಎಮ್​ಎಸ್​ ಧೋನಿ ಅವರನ್ನು ಭೇಟಿಯಾಗಬೇಕೆಂದು ನಕುಲ್​​ ಸ್ವಾಮಿನಾಥ್​ನ ಅವರಿಗೆ ಹೇಳಿದ್ದಾನೆ.

ನಂತರ ಅಕ್ಟೋಬರ್​ 29 ರಂದು ಸಂದೀಪ್​ ಹಾಗೂ ಆತನ ಸ್ನೇಹಿತ ಸಲ್ಮಾನ್ ಬೆಂಗಾಲ್​​ ಹೋಟೆಲ್​​ನಲ್ಲಿ ಸ್ವಾಮಿನಾಥನ್​ ಮತ್ತು ಎಮ್​ಎಸ್​ ಧೋನಿ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ತಿರುಪತಿ ವಿಶೇಷ ದರ್ಶನ ಮಾಡಿಸುತ್ತೇವೆ ಯಾವಾಗ ಬೇಕಾದರೂ ಕರೆ ಮಾಡಿ ಎಂದು ಹೇಳಿದ್ದಾರೆ. ಬಳಿಕ ನವೆಂಬರ್​ 11 ರಂದು ಸಂದೀಪ್​ ಸ್ವಾಮಿನಾಥನ್​ ಅವರಿಗೆ ಕರೆ ಮಾಡಿ “ವಿಶೇಷ ದರ್ಶನ 12 ಜನರಿಗೆ ನೀಡಲಾಗುವುದು ಎಂದು ತಿಳಿಸಿದ್ದಾನೆ.

ಇದನ್ನೂ ಓದಿ:  Salman Khan: ಸಲ್ಮಾನ್ ಖಾನ್ ಹೆಸರಲ್ಲಿ ವಂಚನೆ; ಎಚ್ಚರಿಕೆ ಕೊಟ್ಟ ಭಾಯಿಜಾನ್

ಆಗ ಸ್ವಾಮಿನಾಥನ್​​ ತಾನು ದುಬೈನಲ್ಲಿದ್ದೇನೆ ಬೇರೆ ಯಾರಿಗಾದರು ನೀಡಿ ಎಂದು ಹೇಳಿದ್ದಾರೆ. ಆಗ ಸಂದೀಪ್​ ನೀವೆ ಯಾರಿಗಾದರೂ ಪ್ರೊಟೋಕಾಲ್​ ಲೆಟರ್​ ನೀಡಿ ಎಂದು ಸ್ವಾಮಿನಾಥನ್​ ಅವರಿಗೆ ಅವರಿಗೆ ಹೇಳಿದ್ದಾನೆ. ಆಗ ಸ್ವಾಮಿನಾಥನ್​​ ಕೂಡ್ಲುಗೇಟ್​​ನಲ್ಲಿ ಶಾಲೆ ನಡೆಸುತ್ತಿರುವ ತಮ್ಮ ಸ್ನೇಹಿತ ವಿನೀತ್​ ಚಂದ್ರಶೇಖರ್​ ಅವರಿಗೆ ನೀಡಿ ಎಂದು ಹೇಳಿ ಹೇಳಿದ್ದಾರೆ. ನಂತರ ಡಿಸೆಂಬರ್​ 20 ರಂದು ನಾಗೇಶ್ವರ ರಾವ್​ ಎಂಬುವರು ವಿನೀತ್​​ ಚಂದ್ರಶೇಖರ್​ ಅವರಿಗೆ ಕರೆ ಮಾಡಿ ತಾನು ಸಚಿವೆ ನಿರ್ಮಲ ಸೀತಾರಾಮನ್​ ಅವರ ಪಿಎ ಎಂದು ಹೇಳಿದ್ದಾನೆ.

ಬಳಿಕ ಡೊನೇಷನ್​ ಮಾಡಲು ಇಚ್ಛೆಯಿದ್ದಲ್ಲಿ ಸಾಯಿ ಕ್ರಿಯೇಷನ್ ಟ್ರಸ್ಟ್​​ಗೆ ಹಣ ಹಾಕುವಂತೆ ವಿನೀತ್​ ಅವರಿಗೆ ನಾಗೇಶ್ವರ ರಾವ್​ ಹೇಳಿದ್ದಾನೆ. ಅದರಂತೆ ವಿನೀತ್​​ ಅವರು ಡಿಸೆಂಬರ್​​ 22 ರಂದು 3,33,333 ರೂಪಾಯಿಯನ್ನು ವರ್ಗಾವಣೆ ಮಾಡಿದ್ದಾರೆ. ನಂತರ ತಿರುಪತಿ ವಿಶೇಷ ದರ್ಶನ, ರೂಮ್​ ಹಾಗೂ ಇತ್ಯಾದಿ ಖರ್ಚುಗಳೆಂದು ಹೇಳಿ 3 ಲಕ್ಷ ರೂ. ಅನ್ನು ಗೂಗಲ್​ ಪೇ ಮಾಡಿಸಿಕೊಂಡಿದ್ದಾನೆ. ಕೆಲವು ದಿನಗಳ ಬಳಿಕ ಹಣ ಕೇಳಿದರೆ ಕೊಡುತ್ತೇನೆಂದು ಹೇಳುತ್ತಾ ಇದುವರೆಗೂ ಹಣ ನೀಡದೆ ಒಟ್ಟು 6,33,333 ರೂ. ಪಡೆದು ಮೋಸ ಮಾಡಿದ್ದಾರೆ ಎಂದು ಸ್ವಾಮಿನಾಥನ್​ ಅವರು ದೂರು ದಾಖಲಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:20 am, Sat, 3 February 24

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?