ಬೆಂಗಳೂರು ಯುವತಿ ಕೊಲೆ: ಸ್ನೇಹಿತೆಯನ್ನ ಕಾಪಾಡಿ ಜೀವ ಕಳೆದುಕೊಂಡ ಕೃತಿ ಕುಮಾರಿ

ಕೋರಮಂಗಲದ ವಿಆರ್ ಲೇಔಟ್​​​ನ ಪಿಜಿಯೊಂದರಲ್ಲಿ ಯುವತಿಯ ಕತ್ತು ಕೊಯ್ದು ಬರ್ಬರವಾಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆ ಮಾಡಿದ ಆರೋಪಿ ಅಭಿಷೇಕ್​​ನ ವಿಕೃತಿಗಳು ಬಯಲಾಗಿವೆ. ಆರೋಪಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಬೆಂಗಳೂರು ಯುವತಿ ಕೊಲೆ: ಸ್ನೇಹಿತೆಯನ್ನ ಕಾಪಾಡಿ ಜೀವ ಕಳೆದುಕೊಂಡ ಕೃತಿ ಕುಮಾರಿ
ಕೊಲೆಯಾದ ಕೃತಿ ಕುಮಾರಿ
Follow us
| Updated By: ವಿವೇಕ ಬಿರಾದಾರ

Updated on:Jul 26, 2024 | 3:06 PM

ಬೆಂಗಳೂರು, ಜುಲೈ 26: ಕೋರಮಂಗಲದ (Kormangala) ವಿಆರ್ ಲೇಔಟ್​​​ನ ಪಿಜಿಯೊಂದರಲ್ಲಿ ಯುವತಿಯ ಕತ್ತು ಕೊಯ್ದು ಬರ್ಬರವಾಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆ ಮಾಡಿದ ಆರೋಪಿ ಅಭಿಷೇಕ್​​ನ ವಿಕೃತಿಗಳು ಬಯಲಾಗಿವೆ. ಹಾಗೆ ಆರೋಪಿ ಅಭಿಷೇಕ್​ ಕೊಲೆ ಮಾಡಲು ಕಾರಣವೇನು ಎಂಬುವುದು ಪೊಲೀಸರ (Police) ತನಿಖೆಯಲ್ಲಿ ತಿಳಿದುಬಂದಿದೆ. ಕೊಲೆ ಮಾಡಿದ ಆರೋಪಿ ಅಭಿಷೇಕ್​ ಭೋಪಾಲ್ ಮೂಲದವ.

ಅಭಿಷೇಕ್ ಹಾಗೂ ಕೊಲೆಯಾದ ಕೃತಿ ಕುಮಾರಿ‌ಯ ಸ್ನೇಹಿತೆ ಪರಸ್ಪರ ಪ್ರೀತಿಸುತ್ತಿದ್ದರು. ಕೃತಿ ಕುಮಾರಿ ಹಾಗೂ ಅಭಿಷೇಕ್ ಪ್ರಿಯತಮೆ ಇಬ್ಬರು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಕೃತಿ ಕುಮಾರಿ ಹಾಗೂ ಅಭಿಷೇಕ್ ಪ್ರಿಯತಮೆ ಜೊತೆಗೆ ಒಂದೇ ಪಿಜಿಯಲ್ಲಿ ವಾಸವಾಗಿದ್ದರು. ಈ ಪಿಜಿಗೆ ಅಭಿಷೇಕ್ ಆಗಾಗ ಬಂದು ಹೋಗುತ್ತಿದ್ದನು.

ಪ್ರೇಮದಲ್ಲಿ ಬಿರುಕು

ಅಭಿಷೇಕ್ ಭೋಪಾಲ್​ನಲ್ಲಿ ಯಾವುದೇ ಕೆಲಸ ಕೆಲಸ ಮಾಡುತ್ತಿರಲಿಲ್ಲ. ಆಗಾಗ ಭೋಪಾಲ್​ನಿಂದ ಬೆಂಗಳೂರಿಗೆ ಬಂದು ಪ್ರೇಯಸಿ ಜೊತೆ ಸುತ್ತಾಡಿಕೊಂಡು ಹೋಗುತ್ತಿದ್ದನು. ಕೆಲಸಕ್ಕೆ ಸೇರು ಅಂತ ಅಭಿಷೇಕ್​ಗೆ ಪ್ರೇಯಸಿ ಹೇಳುತ್ತಿದ್ದಳು. ಬಲವಂತಕ್ಕೆ ಕೆಲಸಕ್ಕೆ ಸೇರಿದ್ದಾಗಿ ಅಭಿಷೇಕ್​​ ಪ್ರೇಯಸಿಗೆ ಹೇಳಿದ್ದನಂತೆ. ಆದರೆ ಇದು ಸಹ ಸುಳ್ಳು ಎಂದು ಅಭಿಷೇಕ್​ನ ಪ್ರೇಯಸಿಗೆ ಗೊತ್ತಾಗಿತ್ತು. ಹೀಗಾಗಿ ಅಭಿಷೇಕ್​ನನ್ನು ಅವಾಯ್ಡ್ ಮಾಡಲು ಆರಂಭಿಸಿದ್ದಳು. ಇದರಿಂದ ಕೋಪಗೊಂಡ ಅಭಿಷೇಕ್​ ಆಗಾಗ ಬಂದು ಪಿಜಿ ಬಳಿ ಗಲಾಟೆ ಮಾಡುತ್ತಿದ್ದನು.

ಇದನ್ನೂ ಓದಿ: ಪ್ರಿಯಕರನನ್ನು ತುಂಡು ತುಂಡಾಗಿ ಕೊಯ್ದು ಗೆಳತಿಯ ಮನೆಯಲ್ಲಿ ಹೂತಿಟ್ಟ ಯುವತಿ

ಸ್ನೇಹಿತೆಯನ್ನ ಕಾಪಾಡಿ ಜೀವ ಕಳೆದುಕೊಂಡ ಯುವತಿ

ಕೊಲೆ ಮಾಡುವುದಕ್ಕಿಂತ ಮೂರು ದಿನದ ಮುಂಚೆ ಬೆಂಗಳೂರಿನಲ್ಲಿ ಅಭಿಷೇಕ್​ ಬಾಡಿಗೆ ಮನೆ ಮಾಡಿದ್ದನು. ಈ ಬಾಡಿಗೆ ಮನೆಯಲ್ಲಿ ಪ್ರೇಯಸಿಯನ್ನು ಇರಿಸಿದ್ದನು. ಆದರೆ ಇದು ಆಕೆಗೆ ಇಷ್ಟವಿರಲಿಲ್ಲ. ಆದರೆ ಈ ಮನೆಯಲ್ಲಿ ಇರಲು ಆಗದೆ ಅಭಿಷೇಕ್​ ಪ್ರಯೇಸಿಗೆ ಇರಲು ಆಗದೆ ಒದ್ದಾಡಿದ್ದಳು. ನನ್ನನ್ನು ಇಲ್ಲಿಂದ ಕರೆದುಕೊಂಡು ಹೋಗುವೆ ಗೆಳತಿ ಕೃತಿ ಕುಮಾರಿಗೆ ಅಭಿಷೇಕ್​ ಪ್ರೇಯಸಿಗೆ ಹೇಳಿದ್ದಾಳೆ.

ಬಳಿಕ ಕೃತಿ ಕುಮಾರಿ ತನ್ನ ಸ್ನೇಹಿತರೊಂದಿಗೆ ತೆರಳಿ ಗೆಳತಿಯನ್ನು ತನ್ನ ಪಿಜಿಗೆ ಕರೆತಂದಿದ್ದಳು. ಈ ವಿಚಾರ ಗೊತ್ತಾಗುತ್ತಿದ್ದಂತೆ ಕೋಪಗೊಂಡ ಅಭಿಷೇಕ್​, ಮಂಗಳವಾರ ರಾತ್ರಿ‌ 11.30ರ ಸುಮಾರಿಗೆ ಪಿಜಿಗೆ ಹೋಗಿದ್ದಾನೆ. ಒಳ ಹೋಗಿ ಕೃತಿ ಕುಮಾರಿ ಇದ್ದ ಕೋಣೆ ಬಾಗಿಲು ತಟ್ಟಿದ್ದಾನೆ. ಕೃತಿ ಕುಮಾರಿ ಬಾಗಿಲು ತೆಗೆಯುತ್ತಿದ್ದಂತೆ, ಚಾಕು ಇರಿದು ಕೊಲೆ ಮಾಡಿದ್ದಾನೆ.

ಸದ್ಯ ಆರೋಪಿ ಅಭಿಷೇಕ್ ಹೊರ ರಾಜ್ಯಕ್ಕೆ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಆರೋಪಿಗಾಗಿ ಕೋರಮಂಗಲ ಪೊಲೀಸರು ಬಲೆ ಬೀಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:52 am, Fri, 26 July 24

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್