AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಯುವತಿ ಕೊಲೆ: ಸ್ನೇಹಿತೆಯನ್ನ ಕಾಪಾಡಿ ಜೀವ ಕಳೆದುಕೊಂಡ ಕೃತಿ ಕುಮಾರಿ

ಕೋರಮಂಗಲದ ವಿಆರ್ ಲೇಔಟ್​​​ನ ಪಿಜಿಯೊಂದರಲ್ಲಿ ಯುವತಿಯ ಕತ್ತು ಕೊಯ್ದು ಬರ್ಬರವಾಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆ ಮಾಡಿದ ಆರೋಪಿ ಅಭಿಷೇಕ್​​ನ ವಿಕೃತಿಗಳು ಬಯಲಾಗಿವೆ. ಆರೋಪಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಬೆಂಗಳೂರು ಯುವತಿ ಕೊಲೆ: ಸ್ನೇಹಿತೆಯನ್ನ ಕಾಪಾಡಿ ಜೀವ ಕಳೆದುಕೊಂಡ ಕೃತಿ ಕುಮಾರಿ
ಕೊಲೆಯಾದ ಕೃತಿ ಕುಮಾರಿ
Jagadisha B
| Edited By: |

Updated on:Jul 26, 2024 | 3:06 PM

Share

ಬೆಂಗಳೂರು, ಜುಲೈ 26: ಕೋರಮಂಗಲದ (Kormangala) ವಿಆರ್ ಲೇಔಟ್​​​ನ ಪಿಜಿಯೊಂದರಲ್ಲಿ ಯುವತಿಯ ಕತ್ತು ಕೊಯ್ದು ಬರ್ಬರವಾಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆ ಮಾಡಿದ ಆರೋಪಿ ಅಭಿಷೇಕ್​​ನ ವಿಕೃತಿಗಳು ಬಯಲಾಗಿವೆ. ಹಾಗೆ ಆರೋಪಿ ಅಭಿಷೇಕ್​ ಕೊಲೆ ಮಾಡಲು ಕಾರಣವೇನು ಎಂಬುವುದು ಪೊಲೀಸರ (Police) ತನಿಖೆಯಲ್ಲಿ ತಿಳಿದುಬಂದಿದೆ. ಕೊಲೆ ಮಾಡಿದ ಆರೋಪಿ ಅಭಿಷೇಕ್​ ಭೋಪಾಲ್ ಮೂಲದವ.

ಅಭಿಷೇಕ್ ಹಾಗೂ ಕೊಲೆಯಾದ ಕೃತಿ ಕುಮಾರಿ‌ಯ ಸ್ನೇಹಿತೆ ಪರಸ್ಪರ ಪ್ರೀತಿಸುತ್ತಿದ್ದರು. ಕೃತಿ ಕುಮಾರಿ ಹಾಗೂ ಅಭಿಷೇಕ್ ಪ್ರಿಯತಮೆ ಇಬ್ಬರು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಕೃತಿ ಕುಮಾರಿ ಹಾಗೂ ಅಭಿಷೇಕ್ ಪ್ರಿಯತಮೆ ಜೊತೆಗೆ ಒಂದೇ ಪಿಜಿಯಲ್ಲಿ ವಾಸವಾಗಿದ್ದರು. ಈ ಪಿಜಿಗೆ ಅಭಿಷೇಕ್ ಆಗಾಗ ಬಂದು ಹೋಗುತ್ತಿದ್ದನು.

ಪ್ರೇಮದಲ್ಲಿ ಬಿರುಕು

ಅಭಿಷೇಕ್ ಭೋಪಾಲ್​ನಲ್ಲಿ ಯಾವುದೇ ಕೆಲಸ ಕೆಲಸ ಮಾಡುತ್ತಿರಲಿಲ್ಲ. ಆಗಾಗ ಭೋಪಾಲ್​ನಿಂದ ಬೆಂಗಳೂರಿಗೆ ಬಂದು ಪ್ರೇಯಸಿ ಜೊತೆ ಸುತ್ತಾಡಿಕೊಂಡು ಹೋಗುತ್ತಿದ್ದನು. ಕೆಲಸಕ್ಕೆ ಸೇರು ಅಂತ ಅಭಿಷೇಕ್​ಗೆ ಪ್ರೇಯಸಿ ಹೇಳುತ್ತಿದ್ದಳು. ಬಲವಂತಕ್ಕೆ ಕೆಲಸಕ್ಕೆ ಸೇರಿದ್ದಾಗಿ ಅಭಿಷೇಕ್​​ ಪ್ರೇಯಸಿಗೆ ಹೇಳಿದ್ದನಂತೆ. ಆದರೆ ಇದು ಸಹ ಸುಳ್ಳು ಎಂದು ಅಭಿಷೇಕ್​ನ ಪ್ರೇಯಸಿಗೆ ಗೊತ್ತಾಗಿತ್ತು. ಹೀಗಾಗಿ ಅಭಿಷೇಕ್​ನನ್ನು ಅವಾಯ್ಡ್ ಮಾಡಲು ಆರಂಭಿಸಿದ್ದಳು. ಇದರಿಂದ ಕೋಪಗೊಂಡ ಅಭಿಷೇಕ್​ ಆಗಾಗ ಬಂದು ಪಿಜಿ ಬಳಿ ಗಲಾಟೆ ಮಾಡುತ್ತಿದ್ದನು.

ಇದನ್ನೂ ಓದಿ: ಪ್ರಿಯಕರನನ್ನು ತುಂಡು ತುಂಡಾಗಿ ಕೊಯ್ದು ಗೆಳತಿಯ ಮನೆಯಲ್ಲಿ ಹೂತಿಟ್ಟ ಯುವತಿ

ಸ್ನೇಹಿತೆಯನ್ನ ಕಾಪಾಡಿ ಜೀವ ಕಳೆದುಕೊಂಡ ಯುವತಿ

ಕೊಲೆ ಮಾಡುವುದಕ್ಕಿಂತ ಮೂರು ದಿನದ ಮುಂಚೆ ಬೆಂಗಳೂರಿನಲ್ಲಿ ಅಭಿಷೇಕ್​ ಬಾಡಿಗೆ ಮನೆ ಮಾಡಿದ್ದನು. ಈ ಬಾಡಿಗೆ ಮನೆಯಲ್ಲಿ ಪ್ರೇಯಸಿಯನ್ನು ಇರಿಸಿದ್ದನು. ಆದರೆ ಇದು ಆಕೆಗೆ ಇಷ್ಟವಿರಲಿಲ್ಲ. ಆದರೆ ಈ ಮನೆಯಲ್ಲಿ ಇರಲು ಆಗದೆ ಅಭಿಷೇಕ್​ ಪ್ರಯೇಸಿಗೆ ಇರಲು ಆಗದೆ ಒದ್ದಾಡಿದ್ದಳು. ನನ್ನನ್ನು ಇಲ್ಲಿಂದ ಕರೆದುಕೊಂಡು ಹೋಗುವೆ ಗೆಳತಿ ಕೃತಿ ಕುಮಾರಿಗೆ ಅಭಿಷೇಕ್​ ಪ್ರೇಯಸಿಗೆ ಹೇಳಿದ್ದಾಳೆ.

ಬಳಿಕ ಕೃತಿ ಕುಮಾರಿ ತನ್ನ ಸ್ನೇಹಿತರೊಂದಿಗೆ ತೆರಳಿ ಗೆಳತಿಯನ್ನು ತನ್ನ ಪಿಜಿಗೆ ಕರೆತಂದಿದ್ದಳು. ಈ ವಿಚಾರ ಗೊತ್ತಾಗುತ್ತಿದ್ದಂತೆ ಕೋಪಗೊಂಡ ಅಭಿಷೇಕ್​, ಮಂಗಳವಾರ ರಾತ್ರಿ‌ 11.30ರ ಸುಮಾರಿಗೆ ಪಿಜಿಗೆ ಹೋಗಿದ್ದಾನೆ. ಒಳ ಹೋಗಿ ಕೃತಿ ಕುಮಾರಿ ಇದ್ದ ಕೋಣೆ ಬಾಗಿಲು ತಟ್ಟಿದ್ದಾನೆ. ಕೃತಿ ಕುಮಾರಿ ಬಾಗಿಲು ತೆಗೆಯುತ್ತಿದ್ದಂತೆ, ಚಾಕು ಇರಿದು ಕೊಲೆ ಮಾಡಿದ್ದಾನೆ.

ಸದ್ಯ ಆರೋಪಿ ಅಭಿಷೇಕ್ ಹೊರ ರಾಜ್ಯಕ್ಕೆ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಆರೋಪಿಗಾಗಿ ಕೋರಮಂಗಲ ಪೊಲೀಸರು ಬಲೆ ಬೀಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:52 am, Fri, 26 July 24

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?