AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ವಿವೇಕನಗರ ಪೊಲೀಸರ ಕಾರ್ಯಾಚರಣೆ; ಕಳವಾಗಿದ್ದ 40 ಲಕ್ಷ ರೂ. ಮೌಲ್ಯದ ಫೋನ್​ ಸಹಿತ ಕಳ್ಳರ ಬಂಧನ

ಸಾರ್ವಜನಿಕರಿಂದ ಮೊಬೈಲ್ ಫೋನ್ ದೋಚುತ್ತಿದ್ದ ಮೂವರು ಕಳ್ಳರ ತಂಡವನ್ನು ಬೆಂಗಳೂರಿನ ವಿವೇಕನಗರ ಪೊಲೀಸರು ಬಂಧಿಸಿದ್ದು, ಸುಮಾರು 40 ಲಕ್ಷ ರೂ. ಮೌಲ್ಯದ 109 ಕದ್ದ ಫೋನ್​ಗಳನ್ನು ವಶಪಡಿಸಿಕೊಂಡಿದ್ದಾರೆ.

Bengaluru: ವಿವೇಕನಗರ ಪೊಲೀಸರ ಕಾರ್ಯಾಚರಣೆ; ಕಳವಾಗಿದ್ದ 40 ಲಕ್ಷ ರೂ. ಮೌಲ್ಯದ ಫೋನ್​ ಸಹಿತ ಕಳ್ಳರ ಬಂಧನ
ವಶಪಡಿಸಿಕೊಂಡ ಫೋನ್​ ಜತೆ ಪೊಲೀಸರು
ಗಣಪತಿ ಶರ್ಮಾ
|

Updated on: Mar 22, 2023 | 7:23 PM

Share

ಬೆಂಗಳೂರು: ಸಾರ್ವಜನಿಕರಿಂದ ಮೊಬೈಲ್ ಫೋನ್ ದೋಚುತ್ತಿದ್ದ (Mobile Phone theft) ಮೂವರು ಕಳ್ಳರ ತಂಡವನ್ನು ಬೆಂಗಳೂರಿನ ವಿವೇಕನಗರ (Vivekanagar Police) ಪೊಲೀಸರು ಬಂಧಿಸಿದ್ದು, ಸುಮಾರು 40 ಲಕ್ಷ ರೂ. ಮೌಲ್ಯದ 109 ಕದ್ದ ಫೋನ್​ಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ಗೋರಿಪಾಳ್ಯ ನಿವಾಸಿಗಳಾದ ಎಜಾಜ್ ಪಾಷಾ (20), ಸುಹೇಲ್ (20), ಮಹಮ್ಮದ್ ಸಕ್ಲೇನ್ (23) ಎಂದು ಗುರುತಿಸಲಾಗಿದೆ. ವಶಪಡಿಸಿಕೊಂಡ ಫೋನ್‌ಗಳಲ್ಲಿ 40 ಐಫೋನ್‌ಗಳು. ಈ ಗ್ಯಾಂಗ್ ಹೆಚ್ಚಾಗಿ ಫೋನ್‌ನಲ್ಲಿ ಮಾತನಾಡಿಕೊಂಡು ಹೋಗುತ್ತಿರುವ ಪಾದಚಾರಿಗಳನ್ನೇ ಗುರಿಯಾಗಿಸಿಕೊಂಡು ದಾಳಿ ಮಾಡುತ್ತಿತ್ತು. ಅವರಿಂದ ಫೋನ್​ಗಳನ್ನು ಅಪಹರಿಸಿಕೊಳ್ಳುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಬಂಧ ವಿವೇಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

2022 ರ ನವೆಂಬರ್​​​ನಲ್ಲಿ ದಾಖಲಾದ ದೂರಿನ ಅನ್ವಯ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದರು. ಕೋರಮಂಗಲ ನಿವಾಸಿಯೊಬ್ಬರು ಕಳ್ಳರು ಫೋನ್ ಕಿತ್ತುಕೊಂಡಿರುವ ಬಗ್ಗೆ ದೂರು ನೀಡಿದ್ದರು. ಆರೋಪಿಯನ್ನು ಸೆರೆ ಹಿಡಿಯಲು 300ಕ್ಕೂ ಹೆಚ್ಚು ಸಿಸಿಟಿವಿ ದೃಶ್ಯಗಳನ್ನು ತಿಂಗಳುಗಟ್ಟಲೆ ಸ್ಕ್ಯಾನ್ ಮಾಡಿ ಪೊಲೀಸರು ಪರಿಶೀಲನೆ ನಡೆಸಿದ್ದರು. ಗೋರಿಪಾಳ್ಯ ವೃತ್ತದಲ್ಲಿ ನಿಲ್ಲಿಸಿದ್ದ ಬೈಕ್‌ ಅನ್ನು ಕಳ್ಳತನ ಮಾಡಲು ಬಂದಿದ್ದ ವೇಳೆ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳು ಸಂಘಟಿತವಾಗಿ ಕಳ್ಳತನದಲ್ಲಿ ಶಾಮೀಲಾಗಿದ್ದಲ್ಲದೆ, ಹೆಚ್ಚಾಗಿ ವಸತಿ ಪ್ರದೇಶಗಳ ಐಫೋನ್ ಬಳಕೆದಾರರನ್ನು ಗುರಿಯಾಗಿಸಿಕೊಂಡಿದ್ದರು ಎಂಬುದು ವಿಚಾರಣೆಯಿಂದ ತಿಳಿದುಬಂದಿದೆ. ಕದ್ದ ಬೈಕ್​ನಲ್ಲಿ ತೆರಳಿ ಕೋರಮಂಗಲ, ಅಶೋಕ್ ನಗರ ಮತ್ತು ವಿಲ್ಸನ್ ಗಾರ್ಡನ್ ಮತ್ತು ಇತರ ಪ್ರದೇಶಗಳಲ್ಲಿ ಮೊಬೈಲ್ ಫೋನ್ ಕಳವು ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಕೋಲಾರ: ತಮ್ಮ ಊರಿನ ಯುವತಿಗೆ ಹೋಳಿ ಹಚ್ಚಿದನೆಂದು ಸ್ನೇಹಿತನನ್ನೇ ಕಿಡ್ನಾಪ್ ಮಾಡಿ ಬೆತ್ತಲೆಗೊಳಿಸಿ ಹಲ್ಲೆ

ಕದ್ದ ಫೋನ್‌ಗಳನ್ನು ಹೈದರಾಬಾದ್​ನ ಸಂಡೇ ಮಾರುಕಟ್ಟೆಗೆ ರವಾನಿಸಲಾಗುತ್ತಿತ್ತು. ಅಲ್ಲಿ ಫೋನ್‌ಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡಲಾಗುತ್ತಿತ್ತು. ಕೆಲವು ಫೋನ್​ಗಳನ್ನು ಬಿಚ್ಚಿ ಬಿಡಿ ಭಾಗಗಳನ್ನು ಮಾರಾಟ ಮಾಡಲಾಗುತ್ತಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮೈಸೂರಿನಲ್ಲಿಯೂ ಕಳವಾಗಿದ್ದ ಮೊಬೈಲ್​ಗಳ ಪತ್ತೆ

ಮೊಬೈಲ್ ಕಳೆದುಕೊಂಡವರಿಗೆ ಯುಗಾದಿ ಹಬ್ಬದ ದಿನವೇ ಮೈಸೂರು ಪೊಲೀಸರು ಸಿಹಿ ಸುದ್ದಿ ನೀಡಿದ್ದಾರೆ. 2.79 ಲಕ್ಷ ರೂ. ಮೌಲ್ಯದ 19 ಮೊಬೈಲ್‌ಗಳನ್ನು ಪತ್ತೆ ಮಾಡಿದ ಪೊಲೀಸರು ಅವರುಗಳನ್ನು ವಾರಸುದಾರರಿಗೆ ವಾಪಸ್ ನೀಡಿದ್ದಾರೆ. ಕಳೆದು ಹೋಗಿದ್ದ ಮೊಬೈಲ್‌ಗಳನ್ನು ತಂತ್ರಜ್ಞಾನ ಬಳಸಿ ಪತ್ತೆ ಹಚ್ಚಲಾಗಿದೆ. ಮೊಬೈಲ್‌ನಲ್ಲಿ ಬಳಕೆಯಾಗುತ್ತಿದ್ದ ಸಿಮ್ ನಂಬರ್, ಲೊಕೇಶನ್ ವಿವರಗಳನ್ನು ಪಡೆದು ಪತ್ತೆ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮೋಬೈಲ್​ ಫೋನ್​ಗಳು​ ಕಳೆದುಹೋಗಿದ್ದ ಸಂಬಂಧ ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು