AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಜೈಲು ಶಿಕ್ಷೆಗೊಳಗಾಗಿದ್ದ ಅಪರಾಧಿ ಬಂಧನ

2012ರಲ್ಲಿ ಅಪಘಾತ ಪ್ರಕರಣವೊಂದರಲ್ಲಿ ಆಂಥೋನಿ ರಾಜ್‌ಗೆ ಕೋರ್ಟ್ 10 ತಿಂಗಳು 15 ದಿನ ಜೈಲು ಶಿಕ್ಷೆ ಪ್ರಕಟಿಸಿತ್ತು.

9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಜೈಲು ಶಿಕ್ಷೆಗೊಳಗಾಗಿದ್ದ ಅಪರಾಧಿ ಬಂಧನ
ಬಂಧಿತ ಆಂಥೋನಿ ರಾಜ್ ಜತೆ ಪೊಲೀಸ್ ಸಿಬ್ಬಂದಿ
TV9 Web
| Edited By: |

Updated on: Sep 28, 2021 | 4:39 PM

Share

ಬೆಂಗಳೂರು: 9 ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ ಅಪರಾಧಿಯೋರ್ವನನ್ನು ಬೆಂಗಳೂರಿನ ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ. ಅಪರಾಧಿ ಆಂಥೋನಿ ರಾಜ್(44) ಬಂಧಿತ ಅಪರಾಧಿ. 2012ರಲ್ಲಿ ಅಪಘಾತ ಪ್ರಕರಣವೊಂದರಲ್ಲಿ ಆಂಥೋನಿ ರಾಜ್‌ಗೆ ಕೋರ್ಟ್ 10 ತಿಂಗಳು 15 ದಿನ ಜೈಲು ಶಿಕ್ಷೆ ಪ್ರಕಟಿಸಿತ್ತು. ಆದರೆ ಶಿಕ್ಷೆ ಪ್ರಕಟವಾದ ಬಳಿಕ ಆಂಥೋನಿ ರಾಜ್ ತಲೆಮರೆಸಿಕೊಂಡಿದ್ದ. ಇದೀಗ ಪೊಲೀಸರಿಂದ ಬಂಧನಕ್ಕೊಳಪಟ್ಟ ನಂತರ ಆಂಥೋನಿ ರಾಜ್​ಗೆ ಮತ್ತೆ ದಂಡ ಮತ್ತು ಜೈಲುಶಿಕ್ಷೆಯನ್ನು ಕೋರ್ಟ್ ವಿಧಿಸಿದೆ.

2010ರಲ್ಲಿ ಟ್ರಾಕ್ಟರ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿ ಅಂಥೋನಿ ಕೌಸಲ್ ಕುಮಾರ್ (8) ಎಂಬ ಮಗುವಿನ ಮೇಲೆ ಟ್ರಾಕ್ಟರ್ ಹರಿಸಿದ ಪ್ರಕರಣದಲ್ಲಿ ಬಂಧಿಸಲ್ಪಟ್ಟಿದ್ದ. ಈ ಸಂಬಂಧ ಐಪಿಸಿ ಸೆಕ್ಷನ್ 279, 304ಎ ಅಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಆರೋಪಿ ಆಂಥೋನಿ ರಾಜ್​ 2012ರಲ್ಲಿ ಕೋರ್ಟ್ 10 ತಿಂಗಳು 15 ದಿನಗಳ ಕಾಲ ಜೈಲು ಶಿಕ್ಷೆ ಪ್ರಕಟಿಸಿತ್ತು. ಆದರೆ ಆರೋಪಿ ಅಂಥೋನಿ ರಾಜ್ ತಲೆಮರೆಸಿಕೊಂಡಿದ್ದ. 9 ವರ್ಷಗಳಿಂದ ಪೊಲೀಸರಿಗೆ ಸಿಗದೆ ಓಡಾಡುತ್ತಿದ್ದ. ಇದೀಗ ಬ್ಯಾಟರಾಯನಪುರ ಸಂಚಾರಿ ಪೊಲೀಸರು ಆಂಥೋನಿ ರಾಜ್​ನನ್ನು ಬಂಧಿಸಿದ್ದಾರೆ. ಅತಿಯಾಗಿ ಮದ್ಯಪಾನ ಮಾಡ್ತಿದ್ದ ಅಂಥೋನಿ ರಿಹ್ಯಾಬಿಲಿಟೇಷನ್ ಸೆಂಟರ್‌ನಲ್ಲಿದ್ದ. ಕೊನೆಗೂ ಸೋಮನಹಳ್ಳಿ ಸೆಂಟ್ ಮದರ್ ತೆರೆಸ್ ರಿಹಾಬ್ ಸೆಂಟರ್​ನಲ್ಲಿ ಇಷ್ಟು ಕಾಲ ಆಂಥೋನಿ ವಾಸವಿದ್ದ. ಇದನ್ನು ಅರಿತ ಪೊಲೀಸರು ಪೊಲೀಸ್ ಕಾನ್ಸ್ಟೇಬಲ್ ಓರ್ವರನ್ನು ರಿಹ್ಯಾಬಿಟೇಶನ್ ಕೇಂದ್ರಕ್ಕೆ ಸೇರಿಸುವ ನೆಪದಲ್ಲಿ ಆಂಥೋನಿ ರಾಜ್​ನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: 

ಮತ್ತೆ ಸರ್ಕಾರದ ಅಂಗಳಕ್ಕೆ ಬಾಬಾಬುಡನ್​ಗಿರಿ ದತ್ತಪೀಠ ಪೂಜಾ ವಿಧಾನ ವಿಚಾರ

ಲ್ಯಾಂಡ್​ಸ್ಯಾಟ್​ 9 ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ ನಾಸಾ; ಏನಿದರ ವಿಶೇಷತೆ?

(Bengaluru Police arrest convicted felon who has been jailed for 9 years)

Follow Us
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!