AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮ್ಯಾಟ್ರಿಮೋನಿಯಲ್ಲಿ ಯುವತಿಯರ ಪರಿಚಯ: ಲಕ್ಷಾಂತರ ಹಣ ಕಸಿದ ವಂಚಕ ದೆಹಲಿಯಲ್ಲಿ ಅರೆಸ್ಟ್

ತಾನು ಕನ್ಸಟ್ರಕ್ಷನ್ ವ್ಯವಹಾರ ಮಾಡುತ್ತಿದ್ದು ತುರ್ತಾಗಿ ಹಣದ ಅವಶ್ಯಕತೆ ಇದೆ ಎನ್ನುತ್ತಿದ್ದ. ಈತನನ್ನ ನಂಬುತ್ತಿದ್ದ ಹುಡುಗಿಯರು ಅಕೌಂಟ್​ಗೆ ಹಣ ಹಾಕುತ್ತಿದ್ದರು.

ಮ್ಯಾಟ್ರಿಮೋನಿಯಲ್ಲಿ ಯುವತಿಯರ ಪರಿಚಯ: ಲಕ್ಷಾಂತರ ಹಣ ಕಸಿದ ವಂಚಕ ದೆಹಲಿಯಲ್ಲಿ ಅರೆಸ್ಟ್
ಬಂಧಿತ ಆರೋಪಿ ಬ್ರೈಟ್
ಪೃಥ್ವಿಶಂಕರ
|

Updated on:Nov 28, 2020 | 3:38 PM

Share

ಬೆಂಗಳೂರು: ಮದುವೆಯಾಗುತ್ತೇನೆಂದು ನಂಬಿಸಿ ಲಕ್ಷ ಲಕ್ಷ ಹಣ ಪಡೆದು ವಂಚಿಸಿದ್ದ ವ್ಯಕ್ತಿಯನ್ನು ವೈಟ್ ಫೀಲ್ಡ್ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬ್ರೈಟ್ (25)ಬಂಧಿತ ಆರೋಪಿಯಾಗಿದ್ದು, ಮ್ಯಾಟ್ರಿಮೋನಿಯಲ್ಲಿ ಯುವತಿಯರ ಪರಿಚಯ ಮಾಡಿಕೊಳ್ತಿದ್ದ. ಬಳಿಕ ಮದುವೆಯಾಗುವುದಾಗಿ ನಂಬಿಸುತ್ತಿದ್ದ ಆಸಾಮಿ, ತಾನು ಕನ್ಸಟ್ರಕ್ಷನ್ ವ್ಯವಹಾರ ಮಾಡುತ್ತಿದ್ದು ತುರ್ತಾಗಿ ಹಣದ ಅವಶ್ಯಕತೆ ಇದೆ ಎನ್ನುತ್ತಿದ್ದ. ಈತನನ್ನ ನಂಬುತ್ತಿದ್ದ ಹುಡುಗಿಯರು ಅಕೌಂಟ್​ಗೆ ಹಣ ಹಾಕುತ್ತಿದ್ದರು. ಹಣ ಪಡೆದ ನಂತರ ಅಕೌಂಟ್ ಬ್ಲಾಕ್ ಆಗಿದೆ ಎಂದು ಮತ್ತೊಂದು ಅಕೌಂಟ್​ಗೆ ಹಣ ಹಾಕಿಸಿಕೊಂಡು ಯುವತಿಯರನ್ನು ವಂಚಿಸುತ್ತಿದ್ದ.

ಮದುವೆ ಹೆಸರಲ್ಲಿ ಹಲವಾರು ಯುವತಿಯರಿಗೆ ಈ ಅಸಾಮಿ ವಂಚಿಸಿದ್ದಾನೆ. ಇತ್ತೀಚಿಗೆ ವೈಟ್ ಫೀಲ್ಡ್ ಮೂಲದ ಯುವತಿಗೆ ಮದುವೆಯಾಗುವುದಾಗಿ ಹೇಳಿ ಸುಮಾರು 24 ಲಕ್ಷ ಹಣ ಪಡೆದು ವಂಚನೆ ಮಾಡಿದ್ದ. ಈ ಬಗ್ಗೆ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಕೈಗೆತ್ತಿಕೊಂಡ ವೈಟ್ ಫೀಲ್ಡ್ ಸಿಇಎನ್ ಠಾಣಾ ಪೊಲೀಸರು Cyber Crime, Economic Offences and Narcotics (CEN) police stations ಆರೋಪಿಯನ್ನು ದೆಹಲಿಯಲ್ಲಿ ಬಂಧಿಸಿದ್ದಾರೆ.

Published On - 3:34 pm, Sat, 28 November 20

Follow Us
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ