AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾಗಿದ್ದರೂ 2 ಗರ್ಲ್ ಫ್ರೆಂಡ್ಸ್​​ಗಾಗಿ ಕಳ್ಳತನಕ್ಕೆ ಇಳಿದಿದ್ದ ಆರೋಪಿ ಬಂಧನ

ಹಲಸೂರು ಗೇಟ್ ಪೊಲೀಸರು ಕಳ್ಳತನ ಪ್ರಕರಣವನ್ನು ಬೇಧಿಸಿದ್ದಾರೆ. ಆಸಿಫ್ ಎಂಬ ಆರೋಪಿಯನ್ನು ಬಂಧಿಸಲಾಗಿದೆ. ಆಸಿಫ್ ತನ್ನ ಪ್ರಿಯತಮೆಯರಿಗಾಗಿ ಬೈಕ್ ಕಳ್ಳತನ, ದರೋಡೆ ಮತ್ತು ಕೊಲೆಯ ಯತ್ನದಂತಹ ಅಪರಾಧಗಳನ್ನು ಎಸಗಿದ್ದನು. ಅವನ ವಿರುದ್ಧ ಏಳು ಪ್ರಕರಣಗಳು ದಾಖಲಾಗಿವೆ. ಇನ್ನೊಂದು ಪ್ರಕರಣದಲ್ಲಿ, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಮೂವರು ಅಂತರರಾಜ್ಯ ಕಳ್ಳರನ್ನು ಬಂಧಿಸಿದ್ದಾರೆ.

ಮದುವೆಯಾಗಿದ್ದರೂ 2 ಗರ್ಲ್ ಫ್ರೆಂಡ್ಸ್​​ಗಾಗಿ ಕಳ್ಳತನಕ್ಕೆ ಇಳಿದಿದ್ದ ಆರೋಪಿ ಬಂಧನ
ಆರೋಪಿ ಆಸಿಫ್​, ಪೊಲೀಸ್​ ಠಾಣೆ
Jagadisha B
| Updated By: ವಿವೇಕ ಬಿರಾದಾರ|

Updated on: Dec 08, 2024 | 12:49 PM

Share

ಬೆಂಗಳೂರು, ಡಿಸೆಂಬರ್​​ 08: ಪ್ರಿಯತಮೆಯರಿಗಾಗಿ ಕಳ್ಳತನಕ್ಕೆ ಇಳಿದಿದ್ದ ಆರೋಪಿಯನ್ನು 14 ವರ್ಷದ ಬಳಿಕ ಹಲಸೂರು ಗೇಟ್​​ ಪೊಲೀಸರು (Police) ಬಂಧಿಸಿದ್ದಾರೆ. ಆಸಿಫ್ ಬಂಧಿತ ಆರೋಪಿ. ಮದುವೆಯಾಗಿದ್ದ ಆಸಿಫ್​​ಗೆ ಇಬ್ಬರು ಗರ್ಲ್ ಫ್ರೆಂಡ್ಸ್ ಇದ್ದರು. ಗರ್ಲ್ ಫ್ರೆಂಡ್ಸ್​​ಗಾಗಿ ಬೈಕ್ ಕಳ್ಳತನ, ದರೋಡೆ, ಕೊಲೆಯತ್ನ ಕೂಡ ಮಾಡಿದ್ದನು. ಕದ್ದ ಬೈಕ್​ನಲ್ಲಿ ಪ್ರಿಯತಮೆಯರನ್ನು ಜಾಲಿ ರೈಡ್​ಗೆ ಕರೆದೊಯ್ಯುತ್ತಿದ್ದನು. ಬಳಿಕ, ಪ್ರಿಯತಮೆಯನ್ನು ಡ್ರಾಪ್ ಮಾಡಿ ಅಲ್ಲಿಯೇ ಬೈಕ್ ಬಿಟ್ಟು ಬರುತ್ತಿದ್ದನು.

ಆರೋಪಿ ಆಸಿಫ್​ ವಿರುದ್ಧ ವಿವಿಧ ಠಾಣೆಗಳಲ್ಲಿ ಏಳು ಪ್ರಕರಣ ದಾಖಲಾಗಿವೆ. ಆರೋಪಿ ಆಸಿಫ್​ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡು ತಿರುಗಾಡುತ್ತಿದ್ದನು. ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ 2014ರಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಭಾಗಿಯಾಗಿದ್ದನು. ಹೀಗಾಗಿ, ಹಲಸೂರು ಗೇಟ್ ಪೊಲೀಸರು ಆರೋಪಿ ಆಸಿಫ್​​ಗಾಗಿ ಹುಡುಕಾಟ ನಡೆಸಿದ್ದರು.

ಆರೋಪಿ ಆಸಿಫ್​​​ನ ದಿನಚರಿ ತಿಳಿದು ಪೊಲೀಸರು ಬೆನ್ನುಹತ್ತಿದ್ದರು. ಕೊನೆಗೂ ಹಲಸೂರು ಗೇಟ್ ಪೊಲೀಸರು ಆರೋಪಿ ಆಸಿಫ್​​ನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ಇದನ್ನೂ ಓದಿ: ಗಂಡನಿದ್ದರೂ ಬೇರೊಬ್ಬನೊಂದಿಗೆ ಲವ್ವಿಡವ್ವಿ: ಪ್ರಿಯಕರನಿಂದ ಗೃಹಿಣಿಯ ಬರ್ಬರ ಹತ್ಯೆ

ಮೂವರು ಅಂತಾರಾಜ್ಯ ಕಳ್ಳರನ್ನು ಬಂಧನ

ಮೂವರು ಅಂತಾರಾಜ್ಯ ಕಳ್ಳರನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸೈಯದ್ ರಿಯಾನ್ (19), ಶಿವಕುಮಾರ (25), ಅಪ್ಪು (20) ಬಂಧಿತ ಆರೋಪಿಗಳು. ಗ್ಯಾಂಗ್ 33 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೈಚಳಕ ತೋರಿಸಿತ್ತು. ಆರೋಪಿಗಳು ಆಂಧ್ರದಲ್ಲಿ ಕಳ್ಳತನದ ವೇಳೆ ಓರ್ವ ಮಹಿಳೆಯನ್ನು ಕೊಲೆ ಮಾಡಿದ್ದರು. ಪೊಲೀಸರ ಕಣ್ತತಪ್ಪಿಸಿ ಆಂಧ್ರಕ್ಕೆ ತೆರಳುವಾಗ ಆರೋಪಿಗಳು ದೊಡ್ಡಬಳ್ಳಾಪುರದ ದೊಡ್ಡಬಳ್ಳಾಪುರ ತಾಲೂಕಿನ ಗುಂಜೂರು ಗ್ರಾಮದ ಬಳಿ ಮೂರು ಕಡೆ ಸರಗಳ್ಳತನ ಮಾಡಿದ್ದರು.

ಮೈಸೂರಿನಲ್ಲಿ ಒಂದೇ ದಿನ ಮೂರು ಕಡೆ ಸರಗಳ್ಳತನ ಮಾಡಿದ್ದರು. ಸರಗಳ್ಳತನ ಪ್ರಕರಣ ಬೆನ್ನತ್ತಿದ್ದ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪಿಐ ಸಾದಿಕ್ ಪಾಷಾ ಆ್ಯಂಡ್​ ಟೀಮ್ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಕಳವು ಮಾಲು ಜಪ್ತಿಯಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ