AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಬಿಲ್ಡಿಂಗ್​ಗಳನ್ನು ಹಾರಿ ವಿಡಿಯೋ ಚಿತ್ರೀಕರಿಸಿ ಯುವತಿಯರನ್ನು ಮಂಚಕ್ಕೆ ಕರೆಯುತ್ತಿದ್ದ ಕಾಮುಕ ಅರೆಸ್ಟ್

ನಾಲ್ಕು ವರ್ಷದಿಂದ ಯಾವುದೇ ಕೆಲಸವಿಲ್ಲದೇ ಅಡ್ಡಾಡುತ್ತಿದ್ದ ನಿರಂಜನ್, ಹೆಣ್ಣು ಮಕ್ಕಳ ವಿಡಿಯೋ ಮಾಡೋದನ್ನೇ ಕಯಾಲಿಮಾಡಿಕೊಂಡಿದ್ದ. ವಿಡಿಯೋ ಚಿತ್ರೀಕರಣ ಮಾಡಿ ಹೆಣ್ಣು ಮಕ್ಕಳನ್ನು ಮಂಚಕ್ಕೆ ಕರೆಯುತ್ತಿದ್ದ.

ಬೆಂಗಳೂರಿನ ಬಿಲ್ಡಿಂಗ್​ಗಳನ್ನು ಹಾರಿ ವಿಡಿಯೋ ಚಿತ್ರೀಕರಿಸಿ ಯುವತಿಯರನ್ನು ಮಂಚಕ್ಕೆ ಕರೆಯುತ್ತಿದ್ದ ಕಾಮುಕ ಅರೆಸ್ಟ್
ನಿರಂಜನ್
TV9 Web
| Updated By: ಆಯೇಷಾ ಬಾನು|

Updated on:Dec 08, 2022 | 11:23 AM

Share

ಬೆಂಗಳೂರು: ಸಿನಿಮಾ ಸ್ಟೈಲಲ್ಲಿ ಬಿಲ್ಡಿಂಗ್ ಟು ಬಿಲ್ಡಿಂಗ್ ಜಂಪ್ ಮಾಡುವ ಕಾಮುಕನನ್ನು ಬೆಂಗಳೂರು ಆಗ್ನೇಯ ವಿಭಾಗದ ಸೈಬರ್ ಪೊಲೀಸರು ಬಂಧಿಸಿದ್ದಾರೆ. ಬಿಲ್ಡಿಂಗ್ ಜಂಪ್ ಮಾಡಿ ಹೆಣ್ಣು ಮಕ್ಕಳು ಸ್ನಾನ ಮಾಡುವ, ಬಟ್ಟೆ ಬದಲಾಯಿಸುವ ನಗ್ನ, ಅರೆನಗ್ನ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ. ಪಾಂಡಿಚೇರಿ ಮೂಲದ ನಿರಂಜನ್ ಬಂಧಿತ ಆರೋಪಿ.

ನಾಲ್ಕು ವರ್ಷದಿಂದ ಯಾವುದೇ ಕೆಲಸವಿಲ್ಲದೇ ಅಡ್ಡಾಡುತ್ತಿದ್ದ ನಿರಂಜನ್, ಹೆಣ್ಣು ಮಕ್ಕಳ ವಿಡಿಯೋ ಮಾಡೋದನ್ನೇ ಕಯಾಲಿಮಾಡಿಕೊಂಡಿದ್ದ. ವಿಡಿಯೋ ಚಿತ್ರೀಕರಣ ಮಾಡಿ ಹೆಣ್ಣು ಮಕ್ಕಳನ್ನು ಮಂಚಕ್ಕೆ ಕರೆಯುತ್ತಿದ್ದ. ಮಂಚಕ್ಕೆ ಬಾರದಿದ್ರೆ ವಿಡಿಯೋ ವೈರಲ್ ಮಾಡೋದಾಗಿ ಬೆದರಿಕೆ ಹಾಕುತ್ತಿದ್ದ. ಸದ್ಯ ಯುವತಿಯೊಬ್ಬಳ ದೂರಿನ ಮೇರೆಗೆ ಆಗ್ನೇಯ ವಿಭಾಗದ ಸೈಬರ್ ಪೊಲೀಸರು ಆರೋಪಿ ನಿರಂಜನ್​ನನ್ನು ಟ್ರ್ಯಾಪ್ ಮಾಡಿ ಬಂಧಿಸಿದ್ದಾರೆ. ಮೊದಲನೇ ಬಾರಿಗೆ ಟ್ರ್ಯಾಪ್ ಮಾಡಿದಾಗ ಯುವತಿಯನ್ನ ಭೇಟಿ ಮಾಡಿ ಆರೋಪಿ ನಿರಂಜನ್ ವಾಪಸ್ಸು ಹೋಗಿದ್ದ. ಎರಡನೇ ದಿನ ರೂಮ್ ಬುಕ್ ಮಾಡಿ ಯುವತಿಯನ್ನ ಕರೆಯಿಸಿದ್ದ. ಈ ವೇಳೆ ರೆಂಡ್ ಹ್ಯಾಂಡಾಗಿ ಆರೋಪಿಯನ್ನು ಬಂಧಿಸಲಾಗಿದೆ.

ಆಗ್ನೇಯ ವಿಭಾಗದ ಪಿಜಿಯೊಂದರಲ್ಲಿ ವಾಸವಿದ್ದ ಆರೋಪಿ, ಪಿಜಿಯ ಪಕ್ಕದಲ್ಲೇ ಇದ್ದ ಹೆಣ್ಣು ಮಕ್ಕಳ ಬ್ಲಾಕ್ ನಲ್ಲಿ ವಿಡಿಯೋ ಚಿತ್ರೀಕರಣ ಮಾಡಿದ್ದ. ಸದ್ಯ ಆರೋಪಿ ಮೊಬೈಲ್ನಲ್ಲಿ 20 ರಿಂದ 30ಕ್ಕೂ ಹೆಚ್ಚು ವಿಡಿಯೋಗಳು ಪತ್ತೆಯಾಗಿವೆ. ಹೀಗಾಗಿ ಆರೋಪಿ ಬಂಧಿಸಿ ತನಿಖೆ ಮುಂದುವರೆಸಲಾಗಿದೆ.

ಇದನ್ನೂ ಓದಿ: ತುಮಕೂರು: ಅಂತ್ಯ ಸಂಸ್ಕಾರಕ್ಕೆ ಶಾಸಕ ಗುಬ್ಬಿ ಶ್ರೀನಿವಾಸ್ ಬರಬೇಕೆಂದು ಡೆತ್ ನೋಟ್ ಬರೆದು ಯುವಕ‌ ಆತ್ಮಹತ್ಯೆ

ಅಣ್ಣ-ತಂಗಿ ಜೋಡಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಟ್ವಿಸ್ಟ್

ಧಾರವಾಡದ ನವಲಗುಂದದಲ್ಲಿ ಜೋಡಿಯೊಂದು ಆತ್ಮಹತ್ಯೆ ಮಾಡಿಕೊಂಡಿತ್ತು. ಮೊದಲಿಗೆ ಆತ್ಮಹತ್ಯೆ ಮಾಡಿಕೊಂಡವರಿಬ್ಬರೂ ಸಂಬಂಧದಲ್ಲಿ ಅಣ್ಣ-ತಂಗಿಯಾಗಿದ್ದ ಕಾರಣ ಇದಕ್ಕೆ ಪ್ರೀತಿಯ ವಿಚಾರ ಬಂದಿರಲಿಲ್ಲ. ಆದ್ರೆ ಈಗ ಅಕ್ಕ- ತಂಗಿಯರ ಮಕ್ಕಳಾಗಿದ್ದ ಕುಮಾರ ಮತ್ತು ದೀಪಾ ಆತ್ಮಹತ್ಯೆಗೆ ಅವರಿಬ್ಬರಲ್ಲಿದ್ದ ಪ್ರೀತಿನೇ ಕಾರಣ ಎನ್ನಲಾಗುತ್ತಿದೆ.

ಕುಮಾರ ಆಗಾಗ ನೀರಲಕಟ್ಟಿ ಗ್ರಾಮಕ್ಕೆ ಬರುತ್ತಿದ್ದ. ಕುಮಾರ ಮತ್ತು ದೀಪಾ ಅಣ್ಣ ತಂಗಿಯರಾಗಿದ್ದ ಕಾರಣಕ್ಕೆ ಯಾರಿಗೂ ಸಂಶಯ ಇರಲಿಲ್ಲ. ಆದ್ರೆ ಕುಮಾರ ತಂಗಿಯನ್ನೇ ಪ್ರೀತಿಸಲಾರಂಭಿಸಿದ್ದ. ಎರಡು ದಿನಗಳ ಹಿಂದೆ ಕಾಲೇಜಿಗೆ ಹೋಗಿದ್ದ ದೀಪಾ ಮನೆಗೆ ವಾಪಸ್ ಬಾರದೇ ನಾಪತ್ತೆಯಾಗಿದ್ದಳು. ಮತ್ತೊಂದೆಡೆ ಕುಮಾರ ಕೂಡ ನಾಪತ್ತೆಯಾಗಿದ್ದ. ಹೀಗಾಗಿ ಇಬ್ಬರೂ ಎಲ್ಲಿಯಾದರೂ ಹೋಗಿರಬಹುದು ಬರುತ್ತಾರೆಂದು ಕುಟುಂಬಸ್ಥರು ಸುಮ್ಮನಾಗಿದ್ದರು. ಎರಡು ದಿನಗಳಿಂದ ನವಲಗುಂದ ಲಾಡ್ಜ್‌ನಲ್ಲೇ ಇದ್ದ ಕುಮಾರ್ ಮತ್ತು ದೀಪಾ ತಮ್ಮ ಸ್ನೇಹಿತರ ಸಹಾಯದಿಂದ ಅಶೋಕ ಲಾಡ್ಜ್‌ನಲ್ಲಿ ರೂಮ್ ಪಡೆದಿದ್ದರು. ತಮ್ಮ ಸಂಬಂಧದ ಬಗ್ಗೆ ಪಶ್ಚಾತ್ತಾಪ ಪಟ್ಟು ಇಬ್ಬರೂ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಯಾದ ರೂಮ್‌ನಲ್ಲಿ ಇಬ್ಬರ ಬ್ಯಾಗ್‌ ಪತ್ತೆಯಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:23 am, Thu, 8 December 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?