AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಬಾಡೂಟ ಮಾಡಿ, ಮನೆಯಲ್ಲಿ ಇದ್ದ ಕೋಟ್ಯಾಂತರ ಮೌಲ್ಯದ ಚಿನ್ನ, ಬೆಳ್ಳಿ ದೋಚಿದ್ದ ಆರೋಪಿ ಅರೆಸ್ಟ್

ಬೆಂಗಳೂರಿನ ಕೊಟ್ಟಿಗೆಪಾಳ್ಯ ನಿವಾಸಿ ಪವನ್ ಎಂಬುವ ವ್ಯಕ್ತಿ ರೆವತಿ ಎಂಬುವರ ಮನೆಯಲ್ಲಿ ಬಾಡುಟ ಮಾಡಿಕೊಂಡು ಹೋಗಿದ್ದನು. ಹೋಗುವಾಗ ಮನೆಯಲ್ಲಿದ್ದ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ಗಮನಿಸಿದ್ದನು. ಬಳಿಕ ಪವನ್​ ಏನು ಮಾಡಿದ ಈ ಸ್ಟೋರಿ ಓದಿ..

ಬೆಂಗಳೂರು: ಬಾಡೂಟ ಮಾಡಿ, ಮನೆಯಲ್ಲಿ ಇದ್ದ ಕೋಟ್ಯಾಂತರ ಮೌಲ್ಯದ ಚಿನ್ನ, ಬೆಳ್ಳಿ ದೋಚಿದ್ದ ಆರೋಪಿ ಅರೆಸ್ಟ್
ಸಾಂದರ್ಭಿಕ ಚಿತ್ರ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: ವಿವೇಕ ಬಿರಾದಾರ|

Updated on:Dec 29, 2023 | 1:10 PM

Share

ಬೆಂಗಳೂರು, ಡಿಸೆಂಬರ್​ 29: ಉಂಡ ಮನೆಗೆ ಕನ್ನ ಹಾಕುವುದೆಂದರೆ ಇದೆ. ಬಾಡೂಟ ಸವಿದಿದ್ದ ಮನೆಯಲ್ಲೇ ಕಳ್ಳತನ ಮಾಡಿದ್ದ ಆರೋಪಿಯನ್ನು ಮಾದನಾಯಕನಹಳ್ಳಿ ಠಾಣೆ ಪೊಲೀಸರು (Police) ಬಂಧಿಸಿದ್ದಾರೆ. ಕೊಟ್ಟಿಗೆಪಾಳ್ಯ ನಿವಾಸಿ ಪವನ್ ಬಂಧಿತ ಆರೋಪಿ. ಬಂಧಿತ ಅರೋಪಿ ಬಳಿಯಿಂದ 17 ಕೆಜಿ ಬೆಳ್ಳಿ ಮತ್ತು 400 ಗ್ರಾಂ ಚಿನ್ನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ರೇವತಿ ಎಂಬುವರು ಆಗಸ್ಟ್​ನಲ್ಲಿ ತಮ್ಮ ಮನೆಯಲ್ಲಿ ದೇವರ ಪೂಜೆ ಮಾಡಿಸಿದ್ದರು. ಪೂಜೆ ಬಳಿಕ ದೇವರ ಮೆರವಣಿಗೆ ಮಾಡಿದ್ದರು. ಮೆರವಣಿಗೆ ಸಮಯದಲ್ಲಿ ದೇವರಿಗೆ ಚಿನ್ನ ಮತ್ತು ಬೆಳ್ಳಿ ಆಭರಣಗಳಿಂದ ಅಲಂಕರಿಸಿದ್ದರು. ಸಂಬಂಧಿಕರಿಗೆ ಮತ್ತು ಏರಿಯಾದವರಿಗೆ ಬಾಡೂಟ ಊಟ ಹಾಕಿಸಿದ್ದರು. ಈ ಬಾಡೂಟಕ್ಕೆ ಪವನ್​ ಕೂಡ ಬಂದಿದ್ದನು. ಈ ಸಮಯದಲ್ಲೇ ಪವನ್​ ದೇವರ ಮುಂದೆ ಇಡಲಾಗಿದ್ದ ಮತ್ತು ಅಲಂಕರಿಸಲಾಗಿದ್ದ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ಗಮನಿಸಿದ್ದನು.

ಇದನ್ನೂ ಓದಿ: ಆ ಇಬ್ಬರು ಕಿರಾತಕರು ಆಟೋಗಳನ್ನೇ ಕಳ್ಳತನ ಮಾಡ್ತಿದ್ರು! ಯಾಕೆ ಗೊತ್ತಾ?

ಇದಾದ ನಂತರ ಪವನ್​ ಈ ಆಭರಣಗಳನ್ನು ಕಳ್ಳತನ ಮಾಡಲು ಹೊಂಚು ಹಾಕಿದ್ದನು. ಇತ್ತ ರೇವತಿ ಕುಟುಂಬ ಸೆಪ್ಟೆಂಬರ್​ 7 ರಂದು ಮೈಸೂರಿಗೆ ಹೋಗಿದ್ದರು. ಇದನ್ನು ತಿಳಿದ ಪವನ್​ ಅಂದೇ ರೇವತಿ ಅವರ ಮನೆಗೆ ಕಳ್ಳತನ ಮಾಡಲು ಬಂದನು. ಮೊದಲೆ ಪ್ಲಾನ್​ ಮಾಡಿದ್ದ ಪವನ್​ ರೇವತಿ ಅವರ ಮನೆಯ ಟೆರೆಸ್ ಮೇಲೆ ಹೋಗಿ ಅಲ್ಲಿಂದ ಕಳೆಗೆ ಇಳಿದು, ಗ್ಯಾಸ್ ಕಟರ್​ನಿಂದ ಕಿಟಕಿಯ ರಾಡ್​​ಗಳನ್ನು ಕಟ್ ಮಾಡಿ ಮನೆಯೊಳಗೆ ನುಗ್ಗಿದ್ದಾನೆ. ಬಳಿಕ ಚಿನ್ನ ಮತ್ತು ಬೆಳ್ಳಿಯನ್ನು ದೋಚಿ ಪರಾರಿಯಾಗಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:06 pm, Fri, 29 December 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ