AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಬೊಮನ್ ಇರಾನಿ ಸೋದರ ಸಂಬಂಧಿ ಮನೆಯಲ್ಲಿ ಕಳ್ಳತನ ಮಾಡಿದ್ದ ತಾಯಿ-ಮಗ ಬೆಂಗಳೂರಿನಲ್ಲಿ ಅರೆಸ್ಟ್

ಐಪಿಎಲ್ ಬೆಟ್ಟಿಂಗ್​ನಿಂದ ಆದ ನಷ್ಟ ಸರಿದೂಗಿಸಲು ತಾಯಿ-ಮಗ ಕಳ್ಳತನದ ಕೃತ್ಯ ಆರಂಭಿಸಿದ್ದರು ಎಂದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ.

ನಟ ಬೊಮನ್ ಇರಾನಿ ಸೋದರ ಸಂಬಂಧಿ ಮನೆಯಲ್ಲಿ ಕಳ್ಳತನ ಮಾಡಿದ್ದ ತಾಯಿ-ಮಗ ಬೆಂಗಳೂರಿನಲ್ಲಿ ಅರೆಸ್ಟ್
ಬೊಮನ್ ಇರಾನಿ (ಸಂಗ್ರಹ ಚಿತ್ರ)
TV9 Web
| Edited By: |

Updated on:Apr 07, 2022 | 10:43 AM

Share

ಬೆಂಗಳೂರು: ಬಾಲಿವುಡ್ ನಟ ಬೊಮನ್ ಇರಾನಿ ಸೋದರ ಸಂಬಂಧಿ, ಖುರ್ಷೀದ್ ಇರಾನಿ ಮನೆಯಲ್ಲಿ ಕಳ್ಳತನ ನಡೆಸುತ್ತಿದ್ದ ಮನೆಯ ಕೆಲಸದಾಕೆ ಮತ್ತು ಆಕೆಯ ಮಗನನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಅಬ್ಬಾಸ್ ಅಲಿ ರಸ್ತೆಯ, ಎಂಬಸ್ಸಿ ಕ್ರೌನ್ ಅಪಾರ್ಟ್​ಮೆಂಟ್​ನಲ್ಲಿ ಕಳೆದ ಮೂರು ವರ್ಷಗಳಿಂದ ಈ ಖದೀಮರು ಸ್ವಲ್ಪ ಸ್ವಲ್ಪವೇ ಸಂಪತ್ತನ್ನು ದೋಚುತ್ತಿದ್ದರು. ಹೀಗೆ ಕಳ್ಳತನವಾಗುತ್ತಿದ್ದದ್ದನ್ನು ಈ ಡಿಸೆಂಬರ್​ನಲ್ಲಿ ಖುರ್ಷೀದ್ ಇರಾನಿ ಗಮನಿಸಿ ಪೊಲೀಸರಿಗೆ ದೂರು ನೀಡಿದ್ದರು.

ಬೆಂಗಳೂರು ಪೂರ್ವ ವಿಭಾಗದ ಪೊಲೀಸರು ಕಳ್ಳತನ ನಡೆಸುತ್ತಿದ್ದ ಮನೆಕೆಲಸದವಳು ಮತ್ತು ಆತನ ಮಗನನ್ನು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಕೆ.ಜಿ. ಹಳ್ಳಿಯ ಮೇರಿ ಅಲೈಸ್ (65) ಮತ್ತು ಮೈಕೆಲ್ ವಿನ್ಸೆಂಟ್ (22) ಕಳ್ಳತನ ನಡೆಸುತ್ತಿದ್ದ ಆರೋಪಿಗಳು.

ಖುರ್ಷೀದ್ ಇರಾನಿ ನೀಡಿದ ದೂರಿನಂತೆ, 700 ಗ್ರಾಂ ತೂಕದ ಒಟ್ಟು ಏಳು ಚಿನ್ನದ ಬಿಸ್ಕೆಟ್​ಗಳು, ₹ 85 ಲಕ್ಷ ಹಣ, ₹ 11 ಲಕ್ಷ ಮೊತ್ತದ 15 ಸಾವಿರ ಅಮೆರಿಕ ಡಾಲರ್ ಮನೆಯಿಂದ ಕಳುವಾಗಿತ್ತು.

ಕಳ್ಳತನ ಮಾಡುತ್ತಿದ್ದ ತಾಯಿ ಮೆರಿ ಅಲೈಸ್ ಕಳೆದ 25 ವರ್ಷಗಳಿಂದ ಖುರ್ಷೀದ್ ಇರಾನಿ ಮನೆಯಲ್ಲಿ ಕೆಲಸ ಮಾಡುತ್ತಿದ್ದರು. ಮಗ ವಿನ್ಸೆಂಟ್ ಅನಿಮೇಷನ್ ಕೋರ್ಸ್ ನಡೆಸುತ್ತಿದ್ದ. ಐಪಿಎಲ್ ಬೆಟ್ಟಿಂಗ್​ನಲ್ಲೂ ಆತ ತೊಡಗಿಸಿಕೊಂಡು ನಷ್ಟ ಅನುಭವಿಸಿದ್ದ ಎಂದು ತಿಳಿದುಬಂದಿದೆ. ಐಪಿಎಲ್ ಬೆಟ್ಟಿಂಗ್​ನಿಂದ ಆದ ನಷ್ಟ ಸರಿದೂಗಿಸಲು ತಾಯಿ-ಮಗ ಕಳ್ಳತನದ ಕೃತ್ಯ ಆರಂಭಿಸಿದ್ದರು ಎಂದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ.

Published On - 7:02 pm, Mon, 14 December 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್