AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಸೈಕೋ ಕಿಲ್ಲರ್​​ನ ಬಂಧನ, ಒಂಟಿ ಸೆಕ್ಯುರಿಟಿ ಗಾರ್ಡ್​​ಗಳೇ ಈತನ ಟಾರ್ಗೆಟ್​

ಆರ್​.ಟಿ ನಗರ, ಸಂಜಯ ನಗರ, ಜೆಸಿ ನಗರ, ಕೆಜಿ ಹಳ್ಳಿಯಲ್ಲಿ ಸೆಕ್ಯುರಿಟಿ ಗಾರ್ಡ್​​​ಗಳನ್ನು ಕೊಲೆ ಮಾಡಿದ್ದ ಸೈಕೋ ಕಿಲ್ಲರ್​​ನನ್ನು ಆರ್​​. ಟಿ ನಗರ ಪೊಲೀಸರು ಬಂಧಿಸಿದ್ದಾರೆ.

Bengaluru News: ಸೈಕೋ ಕಿಲ್ಲರ್​​ನ ಬಂಧನ, ಒಂಟಿ ಸೆಕ್ಯುರಿಟಿ ಗಾರ್ಡ್​​ಗಳೇ ಈತನ ಟಾರ್ಗೆಟ್​
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Jun 27, 2023 | 3:02 PM

Share

ಬೆಂಗಳೂರು: ಒಂಟಿ ಸೆಕ್ಯುರಿಟಿ ಗಾರ್ಡ್​​ಗಳನ್ನು (Security Guard) ಹುಡುಕಿ ಕೊಲೆ ಮಾಡುತ್ತಿದ್ದ ಸೈಕೋ ಕಿಲ್ಲರ್​​ನನ್ನು (Psycho killer) ಆರ್​​. ಟಿ ನಗರ ಪೊಲೀಸರು ಬಂಧಿಸಿದ್ದಾರೆ. ತೌಸೀಪ್​​​ ಕೊಲೆ ಆರೋಪಿ. ಆರೋಪಿ ತೌಸೀಪ್​​ ವಿಚಿತ್ರ ಸೈಕೋಪಾತ್​​ ಆಗಿದ್ದು ಹಲವು ಪೋಲಿಸ್​ ಠಾಣೆಗಳಿಗೆ ಬೇಕಾಗಿದ್ದನು. ಮಧ್ಯರಾತ್ರಿ ಕಂಠಪೂರ್ತಿ ಕುಡಿದು, ಮಾದಕ ವಸ್ತುಗಳಿಂದ ನಶೆ ಏರಿಸಿಕೊಂಡು ಬರುವ ಈತ ನಸುಕಿನ ಜಾವ ಎರಡಿಂದ ಮೂರು ಗಂಟೆ ಅವಧಿಯಲ್ಲಿ ಒಂಟಿ ಸೆಕ್ಯುರಿಟಿ ಗಾರ್ಡ್​​ಗಳನ್ನು ಹುಡುಕಿ ಕೊಲ್ಲುತ್ತಿದ್ದನು.

ಈತ ಈಗಾಗಲೇ ಆರ್​.ಟಿ ನಗರ, ಸಂಜಯ ನಗರ, ಜೆಸಿ ನಗರ, ಕೆಜಿ ಹಳ್ಳಿಯಲ್ಲಿ ಸೆಕ್ಯುರಿಟಿ ಗಾರ್ಡ್​​​ಗಳನ್ನು ಕೊಲೆ ಮಾಡಿದ್ದಾನೆ. ಈ ಹಿಂದೆ ಮಾಜಿ ಮುಖ್ಯಮಂತ್ರಿ ಮನೆ ಬಳಿಯೂ ಸೆಕ್ಯುರಿಟಿಗೆ ಚಾಕುವಿನಿಂದ ಇರಿದಿದ್ದನು.

ಇದನ್ನೂ ಓದಿ: ಹಣ ಡಬಲ್ ಮಾಡಿಕೊಡುವುದಾಗಿ ಹೇಳಿ ವಂಚನೆ; ಕೊಟ್ಟ ದುಡ್ಡು ವಾಪಾಸ್​ ಕೇಳಲು ಬಂದಾಕೆಯನ್ನೇ ಕಿಡ್ನಾಪ್​ಗೆ​ ಯತ್ನ

ಈತ ಸದಾ ಸೊಲ್ಯುಶನ್​​ ಹಾಗೂ ಡ್ಯಾಗರ್ ಅನ್ನು ಜೇಬಿನಲ್ಲಿ ಇಟ್ಟುಕೊಂಡು ತಿರುಗುತ್ತಿದ್ದನು. ​​ಹಲವು ಪೊಲೀಸ್​ ಠಾಣೆಗಳಲ್ಲಿ ಈತನ ವಿರುದ್ಧ ದೂರು ದಾಖಲಾಗಿದ್ದವು. ಈ ಹಿನ್ನೆಲೆ ಮೂರು ದಿನಗಳ ಕಾಲ ಹಗಲು ರಾತ್ರಿ ಪೊಲೀಸರು ಈತನ ಹಿಂದೆ ಬಿದ್ದಿದ್ದರು. ಕೊನೆಗೆ ಆರ್​.ಟಿ ನಗರ 80 FT ರೋಡ್​​ ಬಳಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಈ ವೇಳೆ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಲು ಯತ್ನಿಸಿದರೂ ಫಲಕಾರಿಯಾಗಲಿಲ್ಲ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ