AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಸೈಕೋ ಕಿಲ್ಲರ್​​ನ ಬಂಧನ, ಒಂಟಿ ಸೆಕ್ಯುರಿಟಿ ಗಾರ್ಡ್​​ಗಳೇ ಈತನ ಟಾರ್ಗೆಟ್​

ಆರ್​.ಟಿ ನಗರ, ಸಂಜಯ ನಗರ, ಜೆಸಿ ನಗರ, ಕೆಜಿ ಹಳ್ಳಿಯಲ್ಲಿ ಸೆಕ್ಯುರಿಟಿ ಗಾರ್ಡ್​​​ಗಳನ್ನು ಕೊಲೆ ಮಾಡಿದ್ದ ಸೈಕೋ ಕಿಲ್ಲರ್​​ನನ್ನು ಆರ್​​. ಟಿ ನಗರ ಪೊಲೀಸರು ಬಂಧಿಸಿದ್ದಾರೆ.

Bengaluru News: ಸೈಕೋ ಕಿಲ್ಲರ್​​ನ ಬಂಧನ, ಒಂಟಿ ಸೆಕ್ಯುರಿಟಿ ಗಾರ್ಡ್​​ಗಳೇ ಈತನ ಟಾರ್ಗೆಟ್​
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on: Jun 27, 2023 | 3:02 PM

Share

ಬೆಂಗಳೂರು: ಒಂಟಿ ಸೆಕ್ಯುರಿಟಿ ಗಾರ್ಡ್​​ಗಳನ್ನು (Security Guard) ಹುಡುಕಿ ಕೊಲೆ ಮಾಡುತ್ತಿದ್ದ ಸೈಕೋ ಕಿಲ್ಲರ್​​ನನ್ನು (Psycho killer) ಆರ್​​. ಟಿ ನಗರ ಪೊಲೀಸರು ಬಂಧಿಸಿದ್ದಾರೆ. ತೌಸೀಪ್​​​ ಕೊಲೆ ಆರೋಪಿ. ಆರೋಪಿ ತೌಸೀಪ್​​ ವಿಚಿತ್ರ ಸೈಕೋಪಾತ್​​ ಆಗಿದ್ದು ಹಲವು ಪೋಲಿಸ್​ ಠಾಣೆಗಳಿಗೆ ಬೇಕಾಗಿದ್ದನು. ಮಧ್ಯರಾತ್ರಿ ಕಂಠಪೂರ್ತಿ ಕುಡಿದು, ಮಾದಕ ವಸ್ತುಗಳಿಂದ ನಶೆ ಏರಿಸಿಕೊಂಡು ಬರುವ ಈತ ನಸುಕಿನ ಜಾವ ಎರಡಿಂದ ಮೂರು ಗಂಟೆ ಅವಧಿಯಲ್ಲಿ ಒಂಟಿ ಸೆಕ್ಯುರಿಟಿ ಗಾರ್ಡ್​​ಗಳನ್ನು ಹುಡುಕಿ ಕೊಲ್ಲುತ್ತಿದ್ದನು.

ಈತ ಈಗಾಗಲೇ ಆರ್​.ಟಿ ನಗರ, ಸಂಜಯ ನಗರ, ಜೆಸಿ ನಗರ, ಕೆಜಿ ಹಳ್ಳಿಯಲ್ಲಿ ಸೆಕ್ಯುರಿಟಿ ಗಾರ್ಡ್​​​ಗಳನ್ನು ಕೊಲೆ ಮಾಡಿದ್ದಾನೆ. ಈ ಹಿಂದೆ ಮಾಜಿ ಮುಖ್ಯಮಂತ್ರಿ ಮನೆ ಬಳಿಯೂ ಸೆಕ್ಯುರಿಟಿಗೆ ಚಾಕುವಿನಿಂದ ಇರಿದಿದ್ದನು.

ಇದನ್ನೂ ಓದಿ: ಹಣ ಡಬಲ್ ಮಾಡಿಕೊಡುವುದಾಗಿ ಹೇಳಿ ವಂಚನೆ; ಕೊಟ್ಟ ದುಡ್ಡು ವಾಪಾಸ್​ ಕೇಳಲು ಬಂದಾಕೆಯನ್ನೇ ಕಿಡ್ನಾಪ್​ಗೆ​ ಯತ್ನ

ಈತ ಸದಾ ಸೊಲ್ಯುಶನ್​​ ಹಾಗೂ ಡ್ಯಾಗರ್ ಅನ್ನು ಜೇಬಿನಲ್ಲಿ ಇಟ್ಟುಕೊಂಡು ತಿರುಗುತ್ತಿದ್ದನು. ​​ಹಲವು ಪೊಲೀಸ್​ ಠಾಣೆಗಳಲ್ಲಿ ಈತನ ವಿರುದ್ಧ ದೂರು ದಾಖಲಾಗಿದ್ದವು. ಈ ಹಿನ್ನೆಲೆ ಮೂರು ದಿನಗಳ ಕಾಲ ಹಗಲು ರಾತ್ರಿ ಪೊಲೀಸರು ಈತನ ಹಿಂದೆ ಬಿದ್ದಿದ್ದರು. ಕೊನೆಗೆ ಆರ್​.ಟಿ ನಗರ 80 FT ರೋಡ್​​ ಬಳಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಈ ವೇಳೆ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಲು ಯತ್ನಿಸಿದರೂ ಫಲಕಾರಿಯಾಗಲಿಲ್ಲ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ