‘ಇನ್ಮುಂದೆ ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ್ರೆ ಅಮಾನತು ಶಿಕ್ಷೆ’

ಬೆಂಗಳೂರು: ಇನ್ಮುಂದೆ ನಗರದ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಲು ಹಿಂದೇಟು ಹಾಕಿದ್ರೆ ಅಮಾನತು ಶಿಕ್ಷೆ ನೀಡಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ. ತಮ್ಮ ವ್ಯಾಪ್ತಿಗೆ ಬರಲ್ಲವೆಂದು ದೂರು ದಾಖಲಿಸಿಕೊಳ್ಳದಿದ್ರೆ ಅಥವಾ ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ್ರೆ ಅಮಾನತು ಮಾಡಲಾಗುವುದು. ಯಾರೇ ದೂರು ಕೊಟ್ರೂ ಮೊದಲು ಕೇಸ್ ದಾಖಲಿಸಿ, ಆನಂತರ ಸಂಬಂಧಪಟ್ಟ ಠಾಣೆಗೆ ವರ್ಗಾಯಿಸಲು ಭಾಸ್ಕರ್ ರಾವ್ ಎಲ್ಲ ಠಾಣೆಗಳಿಗೂ ಸೂಚನೆ ನೀಡಿದ್ದಾರೆ. ಸುರಕ್ಷಾ ಆ್ಯಪ್ ದೂರುಗಳಿಗೆ ತಕ್ಷಣ ಸ್ಪಂದಿಸಿ: ಇದರ ಜೊತೆಗೆ […]

‘ಇನ್ಮುಂದೆ ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ್ರೆ ಅಮಾನತು ಶಿಕ್ಷೆ’
ಸಾಧು ಶ್ರೀನಾಥ್​

Updated on: Dec 12, 2019 | 5:46 PM

ಬೆಂಗಳೂರು: ಇನ್ಮುಂದೆ ನಗರದ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಲು ಹಿಂದೇಟು ಹಾಕಿದ್ರೆ ಅಮಾನತು ಶಿಕ್ಷೆ ನೀಡಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ.

ತಮ್ಮ ವ್ಯಾಪ್ತಿಗೆ ಬರಲ್ಲವೆಂದು ದೂರು ದಾಖಲಿಸಿಕೊಳ್ಳದಿದ್ರೆ ಅಥವಾ ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ್ರೆ ಅಮಾನತು ಮಾಡಲಾಗುವುದು. ಯಾರೇ ದೂರು ಕೊಟ್ರೂ ಮೊದಲು ಕೇಸ್ ದಾಖಲಿಸಿ, ಆನಂತರ ಸಂಬಂಧಪಟ್ಟ ಠಾಣೆಗೆ ವರ್ಗಾಯಿಸಲು ಭಾಸ್ಕರ್ ರಾವ್ ಎಲ್ಲ ಠಾಣೆಗಳಿಗೂ ಸೂಚನೆ ನೀಡಿದ್ದಾರೆ.

ಸುರಕ್ಷಾ ಆ್ಯಪ್ ದೂರುಗಳಿಗೆ ತಕ್ಷಣ ಸ್ಪಂದಿಸಿ:
ಇದರ ಜೊತೆಗೆ ಸುರಕ್ಷಾ ಆ್ಯಪ್ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು. ದೂರು ಬಂದ ಕೂಡಲೇ ಹೊಯ್ಸಳ ವಾಹನದಲ್ಲಿ ಪೊಲೀಸರು ಸ್ಥಳಕ್ಕೆ ಹೋಗಬೇಕು. ಹೊಯ್ಸಳ ಇಲ್ಲದಿದ್ರೆ ಇನ್ಸ್​ ಪೆಕ್ಟರ್ ಮೊದಲು ಜೀಪ್ ಕಳುಹಿಸಲಿ, ಇನ್ಸ್​ಪೆಕ್ಟರ್ ಬೇಕಿದ್ರೆ ಬಸ್​ನಲ್ಲಿ ಬರಲಿ ಖಡಕ್ ಸೂಚನೆ ನೀಡಿದ್ದಾರೆ.

Published On - 5:45 pm, Thu, 12 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us