AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮಹಿಳೆಯ ಬೆದರಿಸಿ ಹಣ ಸುಲಿಗೆ ಪ್ರಕರಣ: ನಾಲ್ವರು ಸಂಚಾರಿ ಪೊಲೀಸರ ಅಮಾನತು

Bengaluru Traffic Police: ರಸ್ತೆ ಮಧ್ಯದಲ್ಲಿ ಪ್ರಯಾಣಿಕರನ್ನು ತಡೆದು ಸುಲಿಗೆ ಮಾಡುವ ಟ್ರಾಫಿಕ್ ಪೊಲೀಸರಿಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಈ ಪ್ರಕರಣದ ಮೂಲಕ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಅಷ್ಟಕ್ಕೂ ಮಹಿಳೆ ಒಬ್ಬರಿಂದ ಹಣಸುಲಿಗೆ ಮಾಡಿದ ಈ ಪ್ರಕರಣ ನಡೆದಿದ್ದು ಯಾವಾಗ? ನಂತರ ಏನಾಯ್ತು ಎಂಬ ಮಾಹಿತಿ ಇಲ್ಲಿದೆ.

ಬೆಂಗಳೂರಿನಲ್ಲಿ ಮಹಿಳೆಯ ಬೆದರಿಸಿ ಹಣ ಸುಲಿಗೆ ಪ್ರಕರಣ: ನಾಲ್ವರು ಸಂಚಾರಿ ಪೊಲೀಸರ ಅಮಾನತು
ಸಾಂದರ್ಭಿಕ ಚಿತ್ರ
Jagadisha B
| Edited By: |

Updated on:Feb 28, 2024 | 7:52 AM

Share

ಬೆಂಗಳೂರು, ಫೆಬ್ರವರಿ 28: ಮಹಿಳೆಯೊಬ್ಬರನ್ನು ಬೆದರಿಸಿ ಹಣ ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರು ಸಂಚಾರ ಪೊಲೀಸರನ್ನು (Bengaluru Traffic Police) ಅಮಾನತುಗೊಳಿಸಿ ಬೆಂಗಳೂರು ಪೊಲೀಸ್ ಆಯುಕ್ತ (Bengaluru Police Commissioner) ದಯಾನಂದ್ ಆದೇಶ ಹೊರಡಿಸಿದ್ದಾರೆ. ಜೀವನ್ ಭೀಮಾ ನಗರ ಸಂಚಾರ ಠಾಣೆ ಇನ್​ಸ್ಪೆಕ್ಟರ್ ವೆಂಕಟಾಚಲಪತಿ, ಹೆಡ್ ಕಾನ್ಸ್​ಟೇಬಲ್​ಗಳಾದ ಗಿರೀಶ್, ಹುಚ್ಚು ಸಾಬ್ ಮತ್ತು ಕಾನ್ಸ್ ಟೇಬಲ್ ಬಸಪ್ಪ ಇವರನ್ನು ಅಮಾನತುಗೊಳಿಸಲಾಗಿದೆ.

ಕಳೆದ ಶನಿವಾರ ಇಸ್ರೋ ಜಂಕ್ಷನ್ ಬಳಿ ಡ್ರಂಕ್ ಅಂಡ್ ಡ್ರೈವ್ ತಪಾಸಣೆ ನಡೆಸಲಾಗುತ್ತಿತ್ತು. ಆ ಸಂದರ್ಭದಲ್ಲಿ ಮದ್ಯಪಾನ ಮಾಡಿ ಚಾಲನೆ ಮಾಡಿರುವುದಾಗಿ ಆರೋಪಿಸಿ ಮಹಿಳೆಯನ್ನು ಬೆದರಿಸಿ 8,000 ರೂಪಾಯಿ ಸುಲಿಗೆ ಮಾಡಿದ ಆರೋಪ ವೆಂಕಟಾಚಲಪತಿ ಹಾಗೂ ಇತರರ ಮೇಲೆ ಕೇಳಿ ಬಂದಿತ್ತು.

ಸಂಚಾರ ಪೊಲೀಸರು ತಮ್ಮ ಮಗಳಿಂದ ಹಣ ಸುಲಿಗೆ ಮಾಡಿದ್ದಾರೆ ಎಂದು ಸಂತ್ರಸ್ತ ಮಹಿಳೆಯ ತಂದೆ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪೊಲೀಸ್ ಆಯುಕ್ತರನ್ನು ಟ್ಯಾಗ್ ಮಾಡಿ ದೂರು ನೀಡಿದ್ದರು. ನಂತರ ಈ ಬಗ್ಗೆ ತನಿಖೆಗೆ ಆದೇಶಿಸಲಾಗಿತ್ತು. ಪೂರ್ವ ಸಂಚಾರ ಡಿಸಿಪಿ ಕುಲದೀಪ ಕುಮಾರ್ ಜೈನ್ ಇಲಾಖೆ ಮಟ್ಟದ ತನಿಖೆ ನಡೆಸಿ ಆಯುಕ್ತರಿಗೆ ವರದಿ ಸಲ್ಲಿಸಿದ್ದರು. ಈ ವರದಿಯ ಆಧಾರದಲ್ಲಿ ಪೊಲೀಸ್ ಆಯುಕ್ತರು ಶಿಸ್ತು ಕ್ರಮ ಕೈಗೊಂಡಿದ್ದಾರೆ.

ಪಾದಚಾರಿಗಳಿಗೆ ಬೈಕ್ ಡಿಕ್ಕಿ

ರಸ್ತೆ ದಾಟುತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಇಬ್ಬರು ಪಾದಚಾರಿಗಳು ಗಾಯಗೊಂಡ ಘಟನೆ ಬೆಂಗಳೂರಿನ ಬ್ಯಾಟರಾನಪುರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೈಸೂರು ರಸ್ತೆಯ ಗುಡ್ಡದಹಳ್ಳಿಯ ಗಿರಿಯಾಸ್ ಶೋರೂಮ್ ಬಳಿ ನಡೆದಿದೆ. ಬೈಕ್ ಡಿಕ್ಕಿಯ ಪರಿಣಾಮವಾಗಿ ಇಬ್ಬರೂ ಗಾಯಗೊಂಡಿದ್ದು, ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ಮಂಗಳೂರು: SSLC ಪ್ರಿಪರೇಟರಿ ಪರೀಕ್ಷೆ ನಂತರ ನಾಪತ್ತೆಯಾಗಿದ್ದ ನಾಲ್ವರು ನದಿ ಬಳಿ ಶವವಾಗಿ ಪತ್ತೆ

ಘಟನೆ ಬಳಿಕ ಬ್ಯಾಟರಾಯನಪುರ ಸಂಚಾರ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:51 am, Wed, 28 February 24

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ