ಬೆಂಗಳೂರಿನಲ್ಲಿ ಭಿಕ್ಷುಕರಿಗೆ ಶಾಕ್ ಕೊಟ್ಟ ಪೊಲೀಸ್ ಕಮಿಷನರ್ ಪಂತ್; ಸಿಗ್ನಲ್​ಗಳಲ್ಲಿ ಭಿಕ್ಷೆ ಬೇಡಿದ್ರೆ ಅಂದರ್​ ಆಗ್ತೀರಿ

ಭಿಕ್ಷುಕರಿಂದ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ. ಅಲ್ಲದೇ ಭಿಕ್ಷೆ ಬೇಡುವಾಗ ಹಣ ಕೊಡದವರ ಜೊತೆ ಅನುಚಿತವಾಗಿ ವರ್ತಿಸುತ್ತಾರೆ. ಹೀಗಾಗಿ ಟ್ರಾಫಿಕ್ ಸಿಗ್ನಲ್​ಗಳಲ್ಲಿ ಭಿಕ್ಷೆ ಬೇಡುವುದನ್ನು ತಪ್ಪಿಸುವಂತೆ ಪೊಲೀಸ್​ ಸಿಬ್ಬಂದಿಗೆ ಕಮಿಷನರ್ ಸೂಚನೆ ನೀಡಿದ್ದಾರೆ. ಲಾ ಅಂಡ್ ಆರ್ಡರ್ ಹಾಗೂ ಟ್ರಾಫಿಕ್ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸುವಂತೆಯೂ ಅವರು ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಭಿಕ್ಷುಕರಿಗೆ ಶಾಕ್ ಕೊಟ್ಟ ಪೊಲೀಸ್ ಕಮಿಷನರ್ ಪಂತ್; ಸಿಗ್ನಲ್​ಗಳಲ್ಲಿ ಭಿಕ್ಷೆ ಬೇಡಿದ್ರೆ ಅಂದರ್​ ಆಗ್ತೀರಿ
ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್​
ಸಾಧು ಶ್ರೀನಾಥ್​

Updated on: Feb 16, 2021 | 12:34 PM

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಭಿಕ್ಷುಕರ ಹಾವಳಿ ಹೆಚ್ಚಾಗಿದೆ; ಅದರಲ್ಲೂ ಸಿಗ್ನಲ್​ಗಳಲ್ಲಿ ಭಿಕ್ಷೆ ಬೇಡುವವರಿಂದ ಕಿರಿಕಿರಿ ಜಾಸ್ತಿಯಾಗಿದೆ ಎನ್ನುವವರಿಗೆ ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಸಮಾಧಾನದ ಸುದ್ದಿ ನೀಡಿದ್ದಾರೆ. ಟ್ರಾಫಿಕ್​ ಸಿಗ್ನಲ್​ಗಳಲ್ಲಿ ಭಿಕ್ಷೆ ಬೇಡಿದ್ರೆ ಹುಷಾರ್ ಎಂದು ಎಚ್ಚರಿಕೆ ನೀಡಿರುವ ಕಮಿಷನರ್ ಪಂತ್ ಅವರು ಟ್ರಾಫಿಕ್ ಸಿಗ್ನಲ್​ನಲ್ಲಿ ಭಿಕ್ಷೆ ಬೇಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ತಮ್ಮ ಪೊಲೀಸರಿಗೆ ಆದೇಶ ನೀಡಿದ್ದಾರೆ.

ಭಿಕ್ಷುಕರಿಂದ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ. ಅಲ್ಲದೇ ಭಿಕ್ಷೆ ಬೇಡುವಾಗ ಹಣ ಕೊಡದವರ ಜೊತೆ ಅನುಚಿತವಾಗಿ ವರ್ತಿಸುತ್ತಾರೆ. ಹೀಗಾಗಿ ಟ್ರಾಫಿಕ್ ಸಿಗ್ನಲ್​ಗಳಲ್ಲಿ ಭಿಕ್ಷೆ ಬೇಡುವುದನ್ನು ತಪ್ಪಿಸುವಂತೆ ಪೊಲೀಸ್​ ಸಿಬ್ಬಂದಿಗೆ ಕಮಿಷನರ್ ಸೂಚನೆ ನೀಡಿದ್ದಾರೆ. ಲಾ ಅಂಡ್ ಆರ್ಡರ್ ಹಾಗೂ ಟ್ರಾಫಿಕ್ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸುವಂತೆಯೂ ಅವರು ಸೂಚನೆ ನೀಡಿದ್ದಾರೆ. ಎಲ್ಲಾ ಡಿಸಿಪಿ ವಿಭಾಗಗಳಲ್ಲಿ ಭಿಕ್ಷೆ ಬೇಡುವುದನ್ನು ತಪ್ಪಿಸಲು ಸೂಚನೆ ನೀಡಿರುವ ಪೊಲೀಸ್ ಕಮಿಷನರ್ ಕಮಲ್ ಪಂತ್ ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ರಮಕ್ಕೆ ಸೂಚನೆ ನೀಡಿದ್ದಾರೆ.

Also Read:
ರಾತ್ರಿ ಊಟಕ್ಕಾಗಿ ಹಣ ಸಂಗ್ರಹಿಸಲು.. ಜೋಳಿಗೆ ಹಿಡಿದು ಭಿಕ್ಷೆ ಬೇಡಿದ ಸಾರಿಗೆ ಸಿಬ್ಬಂದಿ

Published On - 9:54 am, Tue, 16 February 21

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us