AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಬರ್ ಕ್ರೈಂ ತಡೆಯಲು ಬೆಂಗಳೂರು ಪೊಲೀಸರು ಯಶಸ್ವಿ; ವಂಚಕರ ಖಾತೆಗೆ ಹೋಗಬೇಕಿದ್ದ 48 ಕೋಟಿ ರೂಪಾಯಿ ವಾಪಸ್!

2020ರ ಡಿಸೆಂಬರ್​ 22ರಂದು ICR ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಗೋಲ್ಡನ್​ ಹವರ್ ಕಾನ್ಸೆಪ್ಟ್​ ಜಾರಿಗೊಳಿಸಿದ್ದರು.

ಸೈಬರ್ ಕ್ರೈಂ ತಡೆಯಲು ಬೆಂಗಳೂರು ಪೊಲೀಸರು ಯಶಸ್ವಿ; ವಂಚಕರ ಖಾತೆಗೆ ಹೋಗಬೇಕಿದ್ದ 48 ಕೋಟಿ ರೂಪಾಯಿ ವಾಪಸ್!
ಸೈಬರ್ ಕ್ರೈಂ
TV9 Web
| Edited By: |

Updated on:Jun 01, 2021 | 11:25 PM

Share

ಬೆಂಗಳೂರು: ಸೈಬರ್​ ಕ್ರೈಂ​ ಇನ್ಸಿಡೆಂಟ್​ ರಿಪೋರ್ಟ್​ ವ್ಯವಸ್ಥೆಗೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಈ ವಿಧಾನದ ಮೂಲಕ ಸೈಬರ್​ ವಂಚಕರ ಖಾತೆಗೆ ಹೋಗಬೇಕಿದ್ದ ಹಣ ವಾಪಸ್ ಪಡೆಯಲಾಗಿದೆ. ಕಳೆದ ತಿಂಗಳಲ್ಲಿ ಬರೋಬ್ಬರಿ 48 ಕೋಟಿ ರೂಪಾಯಿ ಜಪ್ತಿ ಮಾಡಲಾಗಿದೆ. 48 ಕೋಟಿ ಹಣ ಹಿಂಪಡೆದಿರುವ ಬೆಂಗಳೂರು ಪೊಲೀಸರು, ವಂಚಕರ ಖಾತೆಗೆ ಹೋಗಬೇಕಿದ್ದ ಹಣವನ್ನು ಉಳಿಸಿದ್ದಾರೆ. ದಾಖಲಾದ ಒಟ್ಟು 3175 ಪ್ರಕರಣಗಳ ಪೈಕಿ ವಂಚಕರ 1312 ಬ್ಯಾಂಕ್​ ಖಾತೆ ಫ್ರೀಜ್ ಮಾಡಲಾಗಿದೆ.

2020ರ ಡಿಸೆಂಬರ್​ 22ರಂದು ICR ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಗೋಲ್ಡನ್​ ಹವರ್ ಕಾನ್ಸೆಪ್ಟ್​ ಜಾರಿಗೊಳಿಸಿದ್ದರು. ಅದರಂತೆ ಸೈಬರ್​ ವಂಚನೆಯಾದ 1 ಗಂಟೆ ಅವಧಿ ಗೋಲ್ಡನ್​ ಹವರ್ ಆಗಿರಲಿದೆ. ಆ ಅವಧಿಯಲ್ಲಿ 112 ಸಂಖ್ಯೆಯ ಮೂಲಕ ಸೈಬರ್​ ವಂಚನೆ ದೂರು ನೀಡಬೇಕು. 112 ಸಂಖ್ಯೆಗೆ ಕರೆ ಮಾಡಿ ಸೂಕ್ತ ಮಾಹಿತಿ ನೀಡಿದರೆ ಸಾಕು. ಖಾತೆಯಿಂದ ಯಾವುದೇ ಹಣ ವರ್ಗಾವಣೆಯಾಗದಂತೆ ತಡೆ ನೀಡಲಾಗುತ್ತದೆ.

ಈ ಕ್ರಮದಿಂದ ವರ್ಗಾವಣೆಯಾದ ಹಣ ವಂಚಕರ ಖಾತೆಯಿಂದ ವಾಪಸ್ ಮೋಸಕ್ಕೆ ಒಳಗಾದವರ ಖಾತೆಗೆ ಬರುತ್ತದೆ. ಗೋಲ್ಡನ್ ಹವರ್​ ಸದ್ಬಳಕೆ ಮಾಡಿಕೊಂಡರೆ ವಂಚನೆಗೆ ತಡೆ ಒಡ್ಡಬಹುದು. ಇದರಿಂದ ಸೈಬರ್​ ವಂಚನೆಗೊಳಗಾಗುವುದನ್ನು ತಗ್ಗಿಸಲು ಸಾಧ್ಯವಿದೆ. ಹೀಗೆ ಈ ವಿಧಾನದ ಮೂಲಕ ಬರೋಬ್ಬರಿ 48 ಕೋಟಿ ರೂಪಾಯಿಯನ್ನು ವಾಪಸ್ ಪಡೆಯಲಾಗಿದೆ. ಇದರಿಂದ ICR ವ್ಯವಸ್ಥೆ ಪ್ರಾಯೋಗಿಕ ಹಂತದಲ್ಲೇ ಯಶಸ್ಸು ಸಾಧಿಸಿದಂತಾಗಿದೆ.

ಗೋಲ್ಡನ್ ಹವರ್ ವ್ಯವಸ್ಥೆ ಬಳಸುವುದು ಹೀಗೆ:

– ನಿಮಗೆ ಯಾವುದೇ ರೀತಿಯ ಸೈಬರ್ ವಂಚನೆಯಾದರೆ. ನೀವು ನಿಮ್ಮ ಖಾತೆಯಿಂದ ಅಪರಿಚಿತರಿಗೆ ಹಣ ಕಳುಹಿಸಿದರೆ, ಮೋಸದ ಜಾಲಕ್ಕೆ ಬಿದ್ದರೆ ಕೂಡಲೇ ಎಚ್ಚರವಾಗಿ – ನಿಮಗೆ ವಂಚನೆಯಾದ ನಂತರದ 1 ಗಂಟೆಯ ಅವಧಿ ಗೋಲ್ಡನ್ ಹವರ್ ಎಂದು ಪರಿಗಣಿಸಲ್ಪಡುತ್ತದೆ – ಆ ಅವಧಿಯಲ್ಲಿ 112 ಸಂಖ್ಯೆಗೆ ಡಯಲ್ ಮಾಡಿ – 112 ಸಂಖ್ಯೆಯ ಮೂಲಕ ಸೈಬರ್ ವಂಚನೆಯಾದ ಬಗ್ಗೆ ದೂರು ನೀಡಬೇಕು – 112 ಸಂಖ್ಯೆಗೆ ಸೂಕ್ತ ಮಾಹಿತಿಗಳನ್ನು ಒದಗಿಸಿದರೆ ಸಾಕು – ನಿಮ್ಮ ಖಾತೆಯಿಂದ ಯಾವುದೇ ಹಣ ವರ್ಗಾವಣೆ ಆಗದಂತೆ ತಡೆಯಲಾಗುತ್ತದೆ – ಈ ಕ್ರಮದಿಂದ ವರ್ಗಾವಣೆಯಾದ ಹಣ ವಂಚಕರ ಖಾತೆಯಿಂದ ವಾಪಸ್ ಮೋಸಕ್ಕೆ ಒಳಗಾದವರ ಖಾತೆಗೆ ಬರುತ್ತದೆ

ಇದನ್ನೂ ಓದಿ: ಆರ್​ಬಿಐ ಹೆಸರಲ್ಲಿ ಸುಮಾರು 2 ಕೋಟಿ ವಂಚನೆ ಮಾಡಿದ್ದ ಯುವತಿ, ಕೃತ್ಯಕ್ಕೆ ಸಹಕರಿಸುತ್ತಿದ್ದ ನಟ ಬಂಧನ

ನೀವು ಈ ಅಪ್ಲಿಕೇಷನ್​ಗಳನ್ನು ಬಳಸುತ್ತಿದ್ದರೆ ಕೂಡಲೇ ಡಿಲೀಟ್ ಮಾಡಿ; ಮಾಹಿತಿ ಸೋರಿಕೆಯಿಂದ ಪಾರಾಗಿ!

Published On - 11:22 pm, Tue, 1 June 21

ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ