AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಹಲ್ಲೆ ಮಾಡಲು ಯತ್ನಿಸಿದ ರೌಡಿಶೀಟರ್ ಕಾಲಿಗೆ​ ಪೊಲೀಸರಿಂದ ಫೈರಿಂಗ್‌

ರೌಡಿಶೀಟರ್ ದಿನೇಶ್ ಹಲ್ಲೆ ಮಾಡಲು ಪ್ರಯತ್ನಿಸಿದ್ದರಿಂದ ಕಾನ್ಸ್‌ಟೇಬಲ್ ವಸಂತ್‌ ಎಂಬುವವರಿಗೆ ಗಾಯವಾಗಿದೆ. ತದ ನಂತರ ಕಾನ್ಸ್‌ಟೇಬಲ್ ವಸಂತ್ ಮತ್ತು ರೌಡಿಶೀಟರ್‌ ದಿನೇಶ್ ಇಬ್ಬರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ

ಬೆಂಗಳೂರು: ಹಲ್ಲೆ ಮಾಡಲು ಯತ್ನಿಸಿದ ರೌಡಿಶೀಟರ್ ಕಾಲಿಗೆ​ ಪೊಲೀಸರಿಂದ ಫೈರಿಂಗ್‌
ಸಾಂದರ್ಭಿಕ ಚಿತ್ರ
guruganesh bhat
|

Updated on: Apr 25, 2021 | 6:44 PM

Share

ಬೆಂಗಳೂರು: ನಗರದ ಲಾಂಗ್ ಫೋರ್ಡ್ ರಸ್ತೆಯ ಕ್ರಿಶ್ಚಿಯನ್ ಸೆಮೆಟ್ರಿ ಬಳಿ ರೌಡಿಶೀಟರ್ ದಿನೇಶ್ ಎಂಬ ವ್ಯಕ್ತಿಯ ಕಾಲಿಗೆ ಅಶೋಕ್‌ನಗರ ಠಾಣೆಯ ಇನ್ಸ್‌ಪೆಕ್ಟರ್ ಭರತ್‌ ಫೈರಿಂಗ್ ನಡೆಸಿದ್ದಾರೆ. ಕೊಲೆ ಪ್ರಕರಣವೊಂದರ ಸಂಬಂಧ ಮಾರಕಾಸ್ತ್ರ ಜಪ್ತಿಗೆ ತೆರಳಿದ್ದ ವೇಳೆ ರೌಡಿಶೀಟರ್ ದಿನೇಶ್ ಮಾರಕಾಸ್ತ್ರದಿಂದ ಹಲ್ಲೆಗೆ ಯತ್ನಿಸಿದ್ದಾನೆ. ಈ ವೇಳೆ ಆತ್ಮರಕ್ಷಣೆಗಾಗಿ ಇನ್ಸ್‌ಪೆಕ್ಟರ್ ಭರತ್‌ ರೌಡಿಶೀಟರ್ ದಿನೇಶ್ ಮೇಲೆ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ.

ರೌಡಿಶೀಟರ್ ದಿನೇಶ್ ಹಲ್ಲೆ ಮಾಡಲು ಪ್ರಯತ್ನಿಸಿದ್ದರಿಂದ ಕಾನ್ಸ್‌ಟೇಬಲ್ ವಸಂತ್‌ ಎಂಬುವವರಿಗೆ ಗಾಯವಾಗಿದೆ. ತದ ನಂತರ ಕಾನ್ಸ್‌ಟೇಬಲ್ ವಸಂತ್ ಮತ್ತು ರೌಡಿಶೀಟರ್‌ ದಿನೇಶ್ ಇಬ್ಬರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.

ಮಾರ್ಚ್ 20 ರಂದು ರವಿವರ್ಮ ಎಂಬ ವ್ಯಕ್ತಿಯ ಕೊಲೆ ನಡೆದಿತ್ತು. ಈ ಪ್ರಕರಣದ ಸಂಬಂಧ ಮಾರ್ಚ್ 24ರಂದು ಆರು ಆರೋಪಿಗಳನ್ನು ಅಶೋಕನಗರ ಪೊಲೀಸರು‌ ಬಂಧಿಸಿದ್ದರು. ಇವರಲ್ಲಿ ದಿನೇಶ್ ಎಂಬಾತನನ್ನು A1 ಆರೋಪಿಯನ್ನಾಗಿಸಲಾಗಿತ್ತು. ಪ್ರಕರಣದ ವಿಚಾರಣೆಗೆ ಕರೆದುಕೊಂಡು ಹೋಗಲಾಗಿತ್ತು. ಈ ವೇಳೆ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿಸಿಟರ್ ದಿನೇಶ್ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ.

ಇದನ್ನೂ ಓದಿ: Covid 19 Treatment in Bengaluru: ಬೆಂಗಳೂರಿನಲ್ಲಿ ತುರ್ತು ಕೊರೊನಾ ಆರೋಗ್ಯ ಸೇವೆಗಳಿಗಾಗಿ ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ

Explainer: ಕೊವಿಡ್ ನಿರ್ವಹಣೆ ಕೈಪಿಡಿ, ನಿಮ್ಮ ಮನೆಯಲ್ಲಿಯೂ ಇರಲಿ ಈ ಆಪ್ತಮಿತ್ರ

(Bengaluru Police fired at Rowdy Sheeters leg when he attempt to assault)

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?