AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳ್ಳತನದ ಮೊಬೈಲ್​ಗಳನ್ನು ಠಾಣೆಗೆ ಪೋಸ್ಟ್ ಮಾಡಿದರೆ ನೋ ಕೇಸ್; ದೇಶದಲ್ಲೇ ಮೊದಲ ಬಾರಿ ಕಳ್ಳರಿಗೂ ಒಂದು ಅವಕಾಶ ಕೊಟ್ಟ ಬೆಂಗಳೂರು ಪೊಲೀಸರು

ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರು ಪೊಲೀಸರು ಕಳ್ಳರಿಗೂ ಒಂದು ಅವಕಾಶವನ್ನು ನೀಡಿದ್ದಾರೆ. ಟ್ರಾಫಿಕ್ ದಂಡ ಬಾಕಿ ಇರಿಸಿದ ವಾಹನ ಚಾಲಕರು ದಂಡದ ಮೊತ್ತ ಪಾವತಿಸಲು ಡಿಸ್ಕೌಂಟ್ ಆಫರ್ ಕೊಡಲಾಗಿತ್ತು. ಅದೇ ರೀತಿ, ಕಳ್ಳತನ ಮಾಡಿದ ಮೊಬೈಲ್​ಗಳನ್ನು ಪೋಸ್ಟ್​ ಮೂಲಕ ಹಿಂದಿರುಗಿಸಿದರೆ ಅಂತಹ ಕಳ್ಳರ ವಿರುದ್ಧ ಪ್ರಕರಣ ದಾಖಲಿಸದಿರುವ ನಿರ್ಧಾರಕ್ಕೆ ಬಂದಿದ್ದಾರೆ.

ಕಳ್ಳತನದ ಮೊಬೈಲ್​ಗಳನ್ನು ಠಾಣೆಗೆ ಪೋಸ್ಟ್ ಮಾಡಿದರೆ ನೋ ಕೇಸ್; ದೇಶದಲ್ಲೇ ಮೊದಲ ಬಾರಿ ಕಳ್ಳರಿಗೂ ಒಂದು ಅವಕಾಶ ಕೊಟ್ಟ ಬೆಂಗಳೂರು ಪೊಲೀಸರು
ದೇಶದಲ್ಲೇ ಮೊದಲ ಬಾರಿ ಕಳ್ಳರಿಗೂ ಒಂದು ಅವಕಾಶ ಕೊಟ್ಟ ಬೆಂಗಳೂರು ಪೊಲೀಸರು; ಕಳ್ಳತನದ ಮೊಬೈಲ್​ಗಳನ್ನು ಠಾಣೆಗೆ ಪೋಸ್ಟ್ ಮಾಡಿದರೆ ನೋ ಕೇಸ್
ರಾಚಪ್ಪಾಜಿ ನಾಯ್ಕ್
| Edited By: |

Updated on: Feb 16, 2024 | 9:36 AM

Share

ಬೆಂಗಳೂರು, ಫೆ.16: ಬಾಕಿ ಟ್ರಾಫಿಕ್ ದಂಡ ಪಾವತಿಗಾಗಿ ಪ್ರಯೋಗಿಸಿದ ಡಿಸ್ಕೌಂಟ್ ಆಫರ್ ಯಶಸ್ವಿ ಬೆನ್ನಲ್ಲೇ, ಬೆಂಗಳೂರು ಪೊಲೀಸರು, ಕಳ್ಳತನ ಮಾಡಿದ ಮೊಬೈಲ್​ಗಳನ್ನು (Mobile Theft) ಪೋಸ್ಟ್​ ಮೂಲಕ ಹಿಂದಿರುಗಿಸಿದರೆ ಅಂತಹ ಕಳ್ಳರ ವಿರುದ್ಧ ಪ್ರಕರಣ ದಾಖಲಿಸದಿರುವ ನಿರ್ಧಾರಕ್ಕೆ ಬಂದಿದ್ದಾರೆ. ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರು ಪೊಲೀಸರು (Bengaluru Police) ಕಳ್ಳರಿಗೂ ಒಂದು ಅವಕಾಶವನ್ನು ನೀಡಿದ್ದಾರೆ.

ಇತ್ತೀಚೆಗೆ, ಬೆಂಗಳೂರು ನಗರದಲ್ಲಿ ಮೊಬೈಲ್ ಸ್ನ್ಯಾಚಿಂಗ್ ಹೆಚ್ಚಾಗುತ್ತಿದೆ. ಪೊಲೀಸರು ಕೂಡ ಶ್ರಮವಹಿಸಿ ಮೊಬೈಲ್ ಕಳ್ಳರನ್ನ ಬಂಧಿಸುತ್ತಲೇ ಇದ್ದಾರೆ. ಆದರೆ ಮೊಬೈಲ್ ಸ್ನ್ಯಾಚರ್ಸ್ ಹಾವಳಿ ಕಡಿಮೆಯಾಗುತ್ತಿಲ್ಲ. ಹೀಗಾಗಿ ನಗರ ಪೊಲೀಸರು ಹೊಸ ವಿಧಾನ ಕಂಡುಕೊಂಡಿದ್ದಾರೆ.

ತಪ್ಪನ್ನು ಅರಿತು ಮೊಬೈಲ್ ಪೋಸ್ಟ್ ಬಾಕ್ಸ್​ಗೆ ಹಾಕಬೇಕು. ಆದರೆ ಕಳ್ಳತನ ಮಾಡಿಯೂ ಪೊಲೀಸರು ಕೊಟ್ಟ ಅವಕಾಶವನ್ನ ಮಿಸ ಯೂಸ್ ಮಾಡಿದರೆ ಕ್ರಮ ಕೈಗೊಳ್ಳುತ್ತಾರೆ. ಅಕಸ್ಮಾತ್, ಮೊಬೈಲ್ ರಸ್ತೆಯಲ್ಲಿ ಸಿಕ್ಕಿದರೂ ಕೂಡ ಪೊಲೀಸ್ ಠಾಣೆಗೆ ಒಪ್ಪಿಸುವ ಪ್ರಮೇಯ ಇಲ್ಲ. ಅಂತಹ ಮೊಬೈಲ್​ಗಳನ್ನೂ ಪೋಸ್ಟ್​ ಬಾಕ್ಸ್​ಗೆ ಹಾಕಿದರೆ ಸಾಕು. ಈ ಮೊಬೈಲ್​ಗಳನ್ನು ಮಾಲೀಕರಿಗೆ ತಲುಪಿಸುವ ಜವಾಬ್ದಾರಿ ಪೊಲೀಸರದ್ದು.

ಇದನ್ನೂ ಓದಿ: ಹಳಿಯಾಳದಲ್ಲಿ ಬುರ್ಖಾ ಧರಿಸಿಕೊಂಡು ಬಂದ‌ ಮಹಿಳೆಯರ ಗ್ಯಾಂಗ್‌ನಿಂದ ಚಿನ್ನ ಕಳ್ಳತನ

ಇನ್ನು ಮುಂದೆ, ಮೊಬೈಲ್ ಕಳೆದು ಹೋದರೆ ಇ – ಲಾಸ್ಟ್​ನಲ್ಲಿ, ಎಫ್​ಐಆರ್, ಎನ್​ಸಿಆರ್ ಮಾಡಿಸುವ ಅವಶ್ಯಕತೆ ಇಲ್ಲ. ಮೊಬೈಲ್ ಕಳೆದು ಹೋದ ಬಳಿಕೆ ಕಂಟ್ರೊಲ್ ರೂಂಗೆ ತಿಳಿಸಿ ನಂತರ Central equipment identity register ಆ್ಯಪ್ ಮುಖಾಂತರ ಮೊಬೈಲ್ ನಂಬರ್ ಐಎಂಇಐ ನಂಬರ್ ನಮೂದಿಸಬೇಕು.

ಪೊಲೀಸರು ಈ ಆ್ಯಪ್ ಮುಖಾಂತರ ಸಾಧ್ಯವಾಷ್ಟು ಬೇಗ ಮೊಬೈಲ್ ಹಿಂದಿರುಗಿಸುವ ವ್ಯವಸ್ಥೆ ಮಾಡಲಿದ್ದಾರೆ. ಕಳ್ಳರು ಕೂಡ ಇದೇ ಪೋಸ್ಟ್ ಬಾಕ್ಸ್​ನಲ್ಲಿ ಮೊಬೈಲ್ ಡಂಪ್ ಮಾಡಿದರೆ ಅವರ ವಿರುದ್ಧ ಕೇಸ್ ದಾಖಲಾಗುವುದಿಲ್ಲ.

ಶೀಘ್ರದಲ್ಲೇ ಸಿಇಐಆರ್ ಲಾಂಚ್

ಪೊಲೀಸರು ಇನ್ನೆರಡು ದಿನದಲ್ಲಿ ಸಿಇಐಆರ್ ಲಾಂಚ್ ಮಾಡಲಿದ್ದು, ಮೊದಲಿಗೆ ಕಮಾಂಡ್ ಸೆಂಟರ್ ಬಳಿ ಪೋಸ್ಟ್ ಬಾಕ್ಸ್ ಇಡಲು ನಿರ್ಧಾರ ಮಾಡಲಾಗಿದೆ. ಪೊಲೀಸರ ಈ ಪ್ಲಾನ್ ವರ್ಕ್ ಆಗುತ್ತಾ ಎಂಬುದನ್ನ ಕಾದು ನೋಡಬೇಕಿದೆ. ಪೊಲೀಸರ ಈ ಯೋಜನೆ ಯಶಸ್ವಿಯಾದರೆ ಇದೊಂದು ವಿನೂತನ ಪ್ರಯೋಗವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ