AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಳ್ಳು ದೂರು ಕೊಟ್ಟ ಮಾಜಿ ಬಿಗ್​ ಬಾಸ್​ ಸ್ಪರ್ಧಿ ವಿರುದ್ಧ ಕ್ರಮಕ್ಕೆ ಮುಂದಾದ ಬೆಂಗಳೂರು ಪೊಲೀಸರು

ತನ್ನ ಮೇಲೆ ಲಾರಿ ಚಾಲಕ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಿ ಮಾಜಿ ಬಿಗ್ ​ಬಾಸ್ ಸ್ಪರ್ಧಿ ಆದಂ ಪಾಷಾ ಎಲೆಕ್ಟ್ರಾನಿಕ್ ಸಿಟಿ ಠಾಣೆಗೆ ದೂರು ನೀಡಿದ್ದರು. ಪ್ರರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಪೊಲೀಸರು ಸಿಸಿಟಿವಿ ಕ್ಯಾಮೆರಾ ಪರಿಶೀಲನೆ ನಡೆಸಿದಾಗ ಆದಂ ಪಾಷಾ ಕಳ್ಳಾಟ ಬಯಲಾಗಿದೆ. ಸುಳ್ಳು ಪ್ರಕರಣ ದಾಖಲಿಸಿದ ಆದಂ ಪಾಷಾ ವಿರುದ್ಧ ಇದೀಗ ಪೊಲೀಸರು ಕ್ರಮಕೈಗೊಳ್ಳಲು ಮುಂದಾಗಿದ್ದಾರೆ.

ಸುಳ್ಳು ದೂರು ಕೊಟ್ಟ ಮಾಜಿ ಬಿಗ್​ ಬಾಸ್​ ಸ್ಪರ್ಧಿ ವಿರುದ್ಧ ಕ್ರಮಕ್ಕೆ ಮುಂದಾದ ಬೆಂಗಳೂರು ಪೊಲೀಸರು
ಸುಳ್ಳು ದೂರು ಕೊಟ್ಟ ಮಾಜಿ ಬಿಗ್​ಬಾಸ್​ ಸ್ಪರ್ಧಿ ಆದಂ ಪಾಷಾ ವಿರುದ್ಧ ಕ್ರಮಕ್ಕೆ ಮುಂದಾದ ಬೆಂಗಳೂರು ಪೊಲೀಸರು
ರಾಚಪ್ಪಾಜಿ ನಾಯ್ಕ್
| Updated By: Rakesh Nayak Manchi|

Updated on: Feb 17, 2024 | 8:52 AM

Share

ಬೆಂಗಳೂರು, ಫೆ.17: ತನ್ನ ಮೇಲೆ ಲಾರಿ ಚಾಲಕ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಿ ಮಾಜಿ ಬಿಗ್ ಬಾಸ್ (Bigg Boss) ಸ್ಪರ್ಧಿ ಆದಂ ಪಾಷಾ (Adam Pasha) ಎಲೆಕ್ಟ್ರಾನಿಕ್ ಸಿಟಿ ಠಾಣೆಗೆ ದೂರು ನೀಡಿದ್ದರು. ಪ್ರರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಪೊಲೀಸರು ಸಿಸಿಟಿವಿ ಕ್ಯಾಮೆರಾ ಪರಿಶೀಲನೆ ನಡೆಸಿದಾಗ ಆದಂ ಪಾಷಾ ಕಳ್ಳಾಟ ಬಯಲಾಗಿದೆ. ಸುಳ್ಳು ಪ್ರಕರಣ ದಾಖಲಿಸಿದ ಆದಂ ಪಾಷಾ ವಿರುದ್ಧ ಇದೀಗ ಪೊಲೀಸರು ಕ್ರಮಕೈಗೊಳ್ಳಲು ಮುಂದಾಗಿದ್ದಾರೆ.

ಎಲೆಕ್ಟ್ರಾನಿಕ್ ಸಿಟಿ ಠಾಣಾ ವ್ಯಾಪ್ತಿಯಲ್ಲಿ ವ್ಯಾಲಂಕೇಣಿ ಬ್ರಿಡ್ಜ್ ಬಳಿ ವಾಟರ್ ಟ್ಯಾಂಕ್ ಲಾರಿ ಅತಿವೇಗವಾಗಿ ಬರುತ್ತಿದ್ದದ್ದನ್ನು ಪ್ರಶ್ನಿಸಿದಕ್ಕೆ ಚಾಲಕ ತನಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾಗಿ ಆದಂ ಪಾಷಾ ದೂರು ನೀಡಿದ್ದರು.

ಇದನ್ನೂ ಓದಿ: ರೆಸ್ಟೊರೆಂಟ್​ನಲ್ಲಿ ರೊಚ್ಚಿಗೆದ್ದ ಬಿಗ್ ಬಾಸ್ ವಿನ್ನರ್; ನಡೆದೋಯ್ತು ರಾದ್ಧಾಂತ

ಎಫ್​ಐಆರ್ ದಾಖಲಿಸುವ ವೇಳೆ ಆದಂ ಪಾಷಾ ರಾಂಗ್ ನಂಬರ್ ಕೊಟ್ಟಿದ್ದಾರೆ. ತನಿಖೆ ವೇಳೆ ಆದಂ ಪಾಷಾ ಸುಳ್ಳು ದೂರು ಕೊಟ್ಟಿರುವ ಶಂಕೆ ವ್ಯಕ್ತವಾಗಿದೆ. ಬಳಿಕ ತನಿಖೆ ಚುರುಕುಗೊಳಿಸಿದ ಪೊಲೀಸರು ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ ಆದಂ ಪಾಷಾ ಕಳ್ಳಾಟ ಬಯಲಾಗಿದೆ. ತನ್ನ ಬಟ್ಟೆಗಳನ್ನ ತಾನೇ ಹರಿದುಕೊಂಡು ಬಂದು ದೂರು ಕೊಟ್ಟಿರುವುದು ತಿಳಿದುಬಂದಿದೆ.

ಇದೀಗ ಸಿಸಿಟಿವಿಯ ಒರಜಿನಾಲಿಟಿ ರಿಪೋರ್ಟ್​ಗೆ ಪೊಲೀಸರು ಕಳಿಸಿದ್ದು, ಸುಳ್ಳು ದೂರು ಕೊಟ್ಟ ಹಿನ್ನಲೆ ಆದಂ ಪಾಷಾ ವಿರುದ್ಧ ಕ್ರಮ ಕೈಗೊಳ್ಳಲು ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಅದರಂತೆ ಮಾಜಿ ಬಿಗ್​ಬಾಸ್ ಸ್ಪರ್ಧಿ ಆದಂ ಪಾಷಾಗೆ ಬಂಧನದ ಭೀತಿ ಶುರುವಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!