AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Crime: ಕೆಲಸ ಕೊಡಿಸುವ ಆಸೆ ಹುಟ್ಟಿಸಿ ಯುವತಿಯನ್ನು ವೇಶ್ಯಾವಾಟಿಕೆಗೆ ಬಳಕೆ; ಪೊಲೀಸರ ದಾಳಿ ವೇಳೆ ಜಾಲ ಪತ್ತೆ

Crime News: ಹಣ, ಎರಡು ಮೊಬೈಲ್ ಹಾಗೂ ಕಾಂಡೋಮ್ ಬಾಕ್ಸ್ ಜಪ್ತಿ ಮಾಡಲಾಗಿದೆ. ಮೊಬೈಲ್ ಕರೆಗಳ ಮುಖಾಂತರವಾಗಿ ಗಿರಾಕಿಗಳನ್ನ ಕರೆಸಿಕೊಂಡು ಹಣ ಸಂಪಾದನೆ ಮಾಡಲಾಗುತ್ತಿತ್ತು ಎಂದು ತಿಳಿದುಬಂದಿದೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Bengaluru Crime: ಕೆಲಸ ಕೊಡಿಸುವ ಆಸೆ ಹುಟ್ಟಿಸಿ ಯುವತಿಯನ್ನು ವೇಶ್ಯಾವಾಟಿಕೆಗೆ ಬಳಕೆ; ಪೊಲೀಸರ ದಾಳಿ ವೇಳೆ ಜಾಲ ಪತ್ತೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Dec 13, 2021 | 6:05 PM

Share

ನೆಲಮಂಗಲ: ಕೆಲಸ ಕೊಡಿಸುವುದಾಗಿ ಆಸೆ ಹುಟ್ಟಿಸಿ ಹೊರ ರಾಜ್ಯದ ಯುವತಿಯನ್ನು ವೇಶ್ಯಾವಾಟಿಕೆಗೆ ಬಳಕೆ ಮಾಡಿದ ಘಟನೆ ನಡೆದಿದೆ. ಬ್ಯಾಡರಹಳ್ಳಿ ಪೊಲೀಸರು ದಾಳಿ ನಡೆಸಿ ಯುವತಿ ರಕ್ಷಣೆ ಮಾಡಿದ್ದಾರೆ. ಪಶ್ಚಿಮ ಬಂಗಾಳದ 25 ವರ್ಷದ ಯುವತಿಯನ್ನು ರಕ್ಷಣೆ ಮಾಡಲಾಗಿದೆ. ಕಿಂಗ್ ಪಿನ್ ಆಶಾ (38) ವಶಕ್ಕೆ ಪಡೆಯಲಾಗಿದೆ. ತಲೆಮರೆಸಿಕೊಂಡಿರುವ ರಾಜುಗೆ ತಲಾಷ್ ನೀಡಲಾಗಿದೆ. ಹಣ, ಎರಡು ಮೊಬೈಲ್ ಹಾಗೂ ಕಾಂಡೋಮ್ ಬಾಕ್ಸ್ ಜಪ್ತಿ ಮಾಡಲಾಗಿದೆ. ಮೊಬೈಲ್ ಕರೆಗಳ ಮುಖಾಂತರವಾಗಿ ಗಿರಾಕಿಗಳನ್ನ ಕರೆಸಿಕೊಂಡು ಹಣ ಸಂಪಾದನೆ ಮಾಡಲಾಗುತ್ತಿತ್ತು ಎಂದು ತಿಳಿದುಬಂದಿದೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇಲ್ಲಿನ ವೀರಭದ್ರೇಶ್ವರ ನಗರ ಪ್ರಸನ್ನ ಬಡಾವಣೆ ಕಟ್ಟಡದ 2ನೇ ಮಹಡಿಯಲ್ಲಿ ಹುಡುಗಿಯರನ್ನು ಇಟ್ಟುಕೊಂಡು ಮೊಬೈಲ್ ಕರೆಗಳ ಮೂಲಕ ಗಿರಾಕಿಗಳನ್ನು ಬರಮಾಡಿಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿತ್ತು. ತಮ್ಮ ಜೊತೆ ಬಂದರೆ ಸ್ಥಳ ತೋರಿಸುವುದಾಗಿ ಮಾಹಿತಿಯನ್ನು ತಿಳಿಸಿದ ಮೇರೆಗೆ ಮೇಲಾಧಿಕಾರಿಗಳಿಗೆ ತಿಳಿಸಿ, ಅನುಮತಿಯನ್ನು ಪಡೆದುಕೊಂಡು ಇಬ್ಬರು ಆ ವಿಳಾಸದ ಬಳಿ ಹೋಗಿ ಮನೆಯ ಮೇಲೆ ದಾಳಿ ನಡೆಸಿದ್ದಾರೆ.

ಆ ವೇಳೆ, ಮನೆಯಲ್ಲಿದ್ದ ಒಬ್ಬಾತ ತಪ್ಪಿಸಿಕೊಂಡಿದ್ದಾನೆ. ನಂತರ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.  ನೊಂದ ಯುವತಿಯನ್ನು ರಕ್ಷಣೆ ಮಾಡಲಾಗಿದೆ. ಬಡಕುಟುಂಬದ ಹೆಣು ಮಕ್ಕಳಿಗೆ ಹೆಚ್ಚಿನ ಸಂಬಳ ಬರುವ ಕೆಲಸ ಕೊಡಿಸುವುದಾಗಿ ನಂಬಿಸಿ ಮಾನವಸಾಗಣೆ ಮಾಡಿಕೊಂಡು ಬಂದು, ವೇಶ್ಯಾವಾಟಿಕೆಯಲ್ಲಿ ತೊಡಗಿದರೆ ಹೆಚ್ಚಿನ ಹಣ ಸಂಪಾದನೆ ಮಾಡಬಹುದು ಎಂದು ಅಮೀಷ ತೋರಿಸಿ, ಗಿರಾಕಿಗಳೊಂದಿಗೆ ವೇಶ್ಯಾವಾಟಿಕೆಯಲ್ಲಿ ತೊಡಗಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ.

ಬೆಂಗಳೂರು: ನೈಜೀರಿಯಾ ಮೂಲದ ವಿಕ್ಟರ್ ಕೊಂದಿದ್ದ ಮೂವರು ವಶಕ್ಕೆ ಬೆಂಗಳೂರಿನಲ್ಲಿ ವಿದೇಶಿ ಪ್ರಜೆಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನೈಜೀರಿಯಾ ಮೂಲದ ವಿಕ್ಟರ್ ಕೊಂದಿದ್ದ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಕಮ್ಮನಹಳ್ಳಿ ಕುಳ್ಳಪ್ಪ ಸರ್ಕಲ್​ನಲ್ಲಿ ನಿನ್ನೆ ನಡೆದಿದ್ದ ಹತ್ಯೆ ಕೇಸ್ ಸಂಬಂಧಿಸಿ ಅರುಣ್​​, ನೀಲಕಂಠ, ಫಿಲಿಪ್ ರಾಜ್ ಎಂಬವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಿಯರ್, ಸಿಗರೇಟ್ ವಿಚಾರಕ್ಕೆ ಗಲಾಟೆ ನಡೆದು ಕೊಲೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಬಿಯರ್ ಬಾಟಲಿಯಿಂದ ಕೊಲೆ ಮಾಡಿದ್ದಾಗಿ ತಪ್ಪೊಪ್ಪಿಗೆ ಮಾಡಲಾಗಿದೆ. ಬಾಣಸವಾಡಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮಂಗಳೂರು: ಗಾಂಜಾ ಸಾಗಿಸ್ತಿದ್ದ ವಿದ್ಯಾರ್ಥಿಗಳ ಬಂಧನ ಸ್ಕೂಟರ್​​ನಲ್ಲಿ ಗಾಂಜಾ ಸಾಗಿಸ್ತಿದ್ದ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಮಂಗಳೂರು ಸಮೀಪದ ಉಳ್ಳಾಲದ ಬಗಂಬಿಲ ಬಳಿ ಸೆರೆ ಹಿಡಿಯಲಾಗಿದೆ. ಕೇರಳ ಮೂಲದ ವಿದ್ಯಾರ್ಥಿ ಆದರ್ಶ್ ಜ್ಯೋತಿ ಹಾಗೂ ಕೊಟ್ಟಾಯಂನ ಲೋಯಲ್ ಜೋಯ್ಸ್ ಬಂಧಿತ ವಿದ್ಯಾರ್ಥಿಗಳು. ಬಂಧಿತ ವಿದ್ಯಾರ್ಥಿಗಳಿಂದ 220 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: Crime News: ತಾಯಿ ಮಗಳ ಸರ ಕದಿಯಲು ಯತ್ನ; ಸರಗಳ್ಳರನ್ನು ಚೇಸ್ ಮಾಡಿ ಸೆರೆಹಿಡಿದ ಪೊಲೀಸರು!

ಇದನ್ನೂ ಓದಿ: Crime News: ಒಮಿಕ್ರಾನ್ ಪಾಸಿಟಿವ್ ವ್ಯಕ್ತಿ ಎಸ್ಕೇಪ್ ಪ್ರಕರಣದಲ್ಲಿ ನಾಲ್ವರ ಸೆರೆ, ಬೆಂಗಳೂರಿನಲ್ಲಿ ವಿದೇಶಿ ಪ್ರಜೆಯ ಹತ್ಯೆ

ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು